26.5 C
ಪುತ್ತೂರು, ಬೆಳ್ತಂಗಡಿ
June 1, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪೀತಾಂಬರ ಹೇರಾಜೆಯವರ ಮನೆಯಲ್ಲಿ ರೋಟರಿ ಕ್ಲಬ್ ಕುಟುಂಬೋತ್ಸವ

ಬೆಳ್ತಂಗಡಿ ರೋಟರಿ ಕ್ಲಬ್ ನ ಮಾಜಿ ಸದಸ್ಯ ನಿವೃತ್ತ ಎಸ್ ಪಿ ಪೀತಾಂಬರ್ ಹೇರಾಜೆಯವರು ಬೆಳ್ತಂಗಡಿ ರೋಟರಿ ಕ್ಲಬ್ಬಿನ ಕುಟುಂಬದ ಸರ್ವ ಸದಸ್ಯರನ್ನೂ ತಮ್ಮ ಮನೆಗೆ ಆಹ್ವಾನಿಸಿ ಕುಟುಂಬೋತ್ಸವ ನಡೆಸಿದರು.

ಈ ಸಂದರ್ಭದಲ್ಲಿ ರೋಟರಿ ಕ್ಲಬ್ ಒಂದು ವಿಶೇಷವಾದ ಮನರಂಜನಾ ಕಾರ್ಯಕ್ರಮವನ್ನು ಹಮ್ಮಿ ಕೊಂಡಿತ್ತು. ಇದರ ನಿರ್ವಹಣೆಯನ್ನು ರೋಟರಿ ಕ್ಲಬ್ ಅಧ್ಯಕ್ಷ ಡಾ ಪ್ರಕಾಶ ಪ್ರಭು, ಪತ್ನಿ ಗೀತಾ ಪ್ರಕಾಶ ಪ್ರಭು ಹಾಗೂ ಕಾರ್ಯದರ್ಶಿ ಡಾ ಎಂ ದಯಾಕರರು ಮಾಡಿದರು. ಈ ಮನರಂಜನಾ ಕಾರ್ಯಕ್ರಮದಲ್ಲಿ ವಿಶೇಷವಾಗಿ ಪ್ರತಾಪ ಸಿಂಹ ನಾಯಕ್ ಮತ್ತು ಜ್ಯೋತಿ ನಾಯಕ್ ದಂಪತಿಗಳು , ಡಾ ರಮೇಶ್ ಮತ್ತು ಡಾ. ಹೇಮಲತಾ ದಂಪತಿ, ಡಾ ಶ್ರೀಕೃಷ್ಣ ಮತ್ತು ಸುಮಂಗಲ ದಂಪತಿ, ಡಾ ಶಶಿಧರ ಡೋಂಗ್ರೆ ಮತ್ತು ಡಾ ಸುಷ್ಮಾ ಡೋಂಗ್ರೆ ದಂಪತಿ ಭಾಗವಹಿಸಿದ್ದರು. ಮಕ್ಕಳಿಗೆ ಸ್ಮರಣ ಶಕ್ತಿ ಸ್ಪರ್ಧೆ ಹಾಗೂ ಪ್ರೇಕ್ಷಕರಿಗೆ ವಿಶೇಷವಾದ ಕರೋಕೆ ಹಾಡು ಗುರುತಿಸುವ ಸ್ಪರ್ಧೆ ಏರ್ಪಡಿಸಲಾಗಿತ್ತು.

ಈ ಸಂದರ್ಭದಲ್ಲಿ ಕೀರ್ತಿಶೇಷ ಡಾ. ಬಿ ಯಶೋವರ್ಮ ಅವರ ಪತ್ನಿ ಸೋನಿಯಾ ವರ್ಮಾ ಉಪಸ್ಥಿತಿಯಲ್ಲಿ ಪೂರಣ್ ವರ್ಮ ಅವರನ್ನು ಪೀತಾಂಬರ ಹೇರಾಜೆ ದಂಪತಿ ಗೌರವಿಸಿದರು. ಈ ಆತಿಥ್ಯ ನೀಡಿದ್ದಕ್ಕಾಗಿ ಪೀತಾಂಬರ ಹೇರಾಜೆ ದಂಪತಿಯನ್ನು ರೋಟರಿ ಕ್ಲಬ್ ವತಿಯಿಂದ ಗೌರವಿಸಲಾಯಿತು.
ಸಭಾಕಾರ್ಯಕ್ರಮದಲ್ಲಿ ಅಧ್ಯಕ್ಷ ಡಾ ಪ್ರಕಾಶ ಪ್ರಭುಗಳು ಸ್ವಾಗತಿಸಿದರು. ಪೀತಾಂಬರ ಹೇರಾಜೆಯವರು ಮಾತನಾಡಿ, ತಮ್ಮ ಮತ್ತು ರೋಟರಿ ಕುಟುಂಬದ ಸಂಬಂಧ ಮತ್ತು ಪ್ರೀತಿಯನ್ನು ವ್ಯಕ್ತ ಪಡಿಸಿದರು ಮತ್ತು ಅಧ್ಯಕ್ಷ ಡಾ ಪ್ರಕಾಶ ಪ್ರಭುರವರನ್ನು ಸನ್ಮಾನಿಸಿದರು. ಡಾ ಎಂ ಎಂ ದಯಾಕರ್ ಧನ್ಯವಾದ ನೀಡಿದರು.

Related posts

ಕಲ್ಮಂಜ ಬೆರ್ಕೆಯಲ್ಲಿ ಕೃಷಿ ತೋಟಕ್ಕೆ ಆನೆ ದಾಳಿ: ಅಪಾರ ಪ್ರಮಾಣ ಕೃಷಿ ನಾಶ

Suddi Udaya

ಬಂದಾರು ಗ್ರಾಮ ಓಟೆಚ್ಚಾರಿನಲ್ಲಿ ಒಂಟಿ ಸಲಗ ದಾಳಿ: ಅಪಾರ ಕೃಷಿ ಮತ್ತು ಸೊತ್ತುಗಳಿಗೆ ಹಾನಿ

Suddi Udaya

ಗಾಯತ್ರಿ ಮಂತ್ರವೇ ಸರ್ವಶ್ರೇಷ್ಠ

Suddi Udaya

ಬರೆಂಗಾಯ ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿ ಹಾಗೂ ನಿಸರ್ಗ ಯುವಜನೇತರ ಮಂಡಲದ ಆಶ್ರಯದಲ್ಲಿ ಮೊಸರು ಕುಡಿಕೆ ಉತ್ಸವ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತು ಹಾಕಿರುವ ದೂರು ನೀಡಿದ್ದ ಪ್ರಕರಣ ಸಾಕ್ಷಿ ದೂರುದಾರರ ಗುರುತನ್ನು ಸಾಮಾಜಿಕ ಜಾಲತಾಣದಲ್ಲಿ ಬಹಿರಂಗಪಡಿಸಿದ ಹಿನ್ನೆಲೆ ಬಂಟ್ವಾಳ ಪೊಲೀಸ್ ಉಪಾಧೀಕ್ಷಕರಿಂದ ಇನ್ನೊಂದು ವಿಚಾರಣೆ ಪ್ರಾರಂಭ

Suddi Udaya

ಬೆಳಾಲು ಗ್ರಾ.ಪಂ. ವತಿಯಿಂದ ಬೆಳಾಲು ಸಿ ಎ ಬ್ಯಾಂಕ್ ನ ಉಪಾಧ್ಯಕ್ಷರು ಹಾಗೂ ನಿರ್ದೇಶಕರಾಗಿ ಆಯ್ಕೆಯಾದ ಪಂಚಾಯತ್ ಸದಸ್ಯರುಗಳಿಗೆ ಗೌರವಾರ್ಪಣೆ

Suddi Udaya
error: Content is protected !!