24.1 C
ಪುತ್ತೂರು, ಬೆಳ್ತಂಗಡಿ
September 1, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಕುಡಾಳ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘದ ವಾರ್ಷಿಕ ಮಹಾಸಭೆ ಹಾಗೂ ಪ್ರತಿಭಾ ಪುರಸ್ಕಾರ

ಬೆಳ್ತಂಗಡಿ : ಕುಡಾಳ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘ ಬೆಳ್ತಂಗಡಿ ವಲಯ ಇದರ ವಾರ್ಷಿಕ ಮಹಾಸಭೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭವು ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು ಮುದಲಡ್ಕ ಇವರ ಅಧ್ಯಕ್ಷತೆಯಲ್ಲಿ ರತ್ನಾಕರ್ ಭಟ್ ಇವರ ವೇದಾಶ್ರಯ ಮದ್ದಡ್ಕ ನಿವಾಸದಲ್ಲಿ ನಡೆಯಿತು.

ಸಂಘದ ಕಾರ್ಯದರ್ಶಿ ಹರೀಶ್ ಪ್ರಭು ಸ್ವಾಗತಿಸಿದರು, ಕುಮಾರಿ ಸೌಜನ್ಯ ಪ್ರಾರ್ಥನೆ ಮಾಡಿ, ಸಂಘದ ಕೋಶಾಧಿಕಾರಿ ಪ್ರದೀಪ್ ನಾಯಕ್ ಬಾಲ್ಕತ್ಯಾರ್ 2025-26ನೇ ಸಾಲಿನ ಲೆಕ್ಕಪತ್ರ ಮಂಡಿಸಿದರು. ರತ್ನಾಕರ ಭಟ್ ಪ್ರಾಸ್ತಾವಿಕವಾಗಿ ಮಾತನಾಡಿದರು.


ನಮ್ಮ ವಲಯದ 90% ಗಿಂತಲೂ ಅಧಿಕ ಅಂಕ ಪಡೆದ ಸುಮಾರು 14 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಅವರ ಮುಂದಿನ ಭವಿಷ್ಯಕ್ಕೆ ಶುಭ ಕೋರಲಾಯಿತು.
ಮಾಜಿ ಯೋಧರಾದ ರಾಮಚಂದ್ರ ನಾಯಕ್ ಮುಂಕಾಡಿ ಹಾಗೂ ಯೋಧ ಅಶೋಕ್ ನಾಯಕ್ ಪುಂಜಾಲಕಟ್ಟೆ ಇವರನ್ನು ಸನ್ಮಾನಿಸಲಾಯಿತು.


ಸಂಘದ ಹಿರಿಯ ಕಾರ್ಯಕರ್ತರು ಕೃಷಿಕ ಕೇಶವ ಪ್ರಭು ಗುಂಡಿದಡ್ಡ ಇವರನ್ನು ಗೌರವಿಸಲಾಯಿತು.
ಪೂರ್ಣಾನಂದ ಪ್ರತಿಷ್ಠಾನದ ಅಧ್ಯಕ್ಷ ಮುರಳಿದರ ಪ್ರಭು, ಮಹಿಳಾ ಘಟಕದ ಅಧ್ಯಕ್ಷೆ ಶ್ರೀಮತಿ ಮಾಲತಿ ಪ್ರಭು , ಪ್ರಭಾಕರ ಭಟ್ ಇಡ್ಯಾ ಶುಭಕೋರಿದರು.
ತಾರಾ ಶಿವರಾಯ ಪ್ರಭು ಧನ್ಯವಾದ ಸಮರ್ಪಿಸಿದರು. ದಿವ್ಯ ಪ್ರದೀಪ್ ನಾಯಕ್ ಕಾರ್ಯಕ್ರಮ ನಿರೂಪಿಸಿದರು.
ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಮಾಜ ಬಾಂಧವರು, ಸಂಘದ ಪದಾಧಿಕಾರಿಗಳು ,ಮಾಜಿ ಅಧ್ಯಕ್ಷರುಗಳು ಭಾಗವಹಿಸಿದ್ದರು.

Related posts

ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ:  ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ತಾಲೂಕಿನ ಪುಟಾಣಿಗಳಿಗೆ ಕೆಜಿ ಲೆಕ್ಕದಲ್ಲಿ ಆಕರ್ಷಕವಾದ ಬಟ್ಟೆ ಖರೀದಿಗೆ ಸುವರ್ಣವಕಾಶ ಬೆಳ್ತಂಗಡಿಯಲ್ಲಿ ಪ್ರಾರಂಭಗೊಳ್ಳಲಿದೆ ಬೇಬಿ ಕ್ಲೌಡ್ ಕೆಜಿ ಮಾರ್ಟ್

Suddi Udaya

ಬೆಳ್ತಂಗಡಿ: ಪ.ಜಾತಿ.ಪ.ಪಂಗಡ ಅಲೆಮಾರಿ ಅಭಿವೃದ್ಧಿ ನಿಗಮ ಅಧ್ಯಕ್ಷೆ ಪಲ್ಲವಿ ಜಿ. ಅಧ್ಯಕ್ಷತೆಯಲ್ಲಿ ಕುಂದುಕೊರತೆ ಮತ್ತು ಪ್ರಗತಿ ಪರಿಶೀಲನಾ ಸಭೆ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ 17ರ ವಯೋಮಾನದ ಬಾಲಕ ಬಾಲಕಿಯರ ವಾಲಿಬಾಲ್ ಪಂದ್ಯಾಟ

Suddi Udaya

ಎ.15-16: ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ

Suddi Udaya
error: Content is protected !!