July 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೇಸಿಗೆ ರಜೆ ಮುಗಿಸಿ ವಿದ್ಯಾಕೇಂದ್ರಕ್ಕೆ ಹೆಜ್ಜೆ ಹಾಕಿದ ವಿದ್ಯಾರ್ಥಿಗಳು: ಬಜಿರೆ ಪಿ.ಎಂ.ಶ್ರೀ ಶಾಲಾ ಪ್ರಾರಂಭೋತ್ಸವ: ಶಾಲೆಯಲ್ಲಿ ಮಕ್ಕಳ ಕಲರವ-ಪಾಲಕರ ಸಂಭ್ರಮ

ಬಜಿರೆ: ಬೇಸಿಗೆ ರಜೆ ಮುಗಿಸಿ ವಿದ್ಯಾಕೇಂದ್ರಕ್ಕೆ ಹೆಜ್ಜೆ ಹಾಕಿದ ವಿದ್ಯಾರ್ಥಿಗಳು ನೂತನ ಶೈಕ್ಷಣಿಕ ವರ್ಷಕ್ಕೆ ಪಾದಾರ್ಪಣೆ ಮಾಡಿದರು. ಪಿ.ಎಂ.ಶ್ರೀ ಬಜಿರೆ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜೂ.1ರಂದು ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ಜರುಗಿತು.

ವಿದ್ಯಾರ್ಥಿಗಳನ್ನು ಪಥಸಂಚಲನ ಮೆರವಣಿಗೆಯ ಮೂಲಕ ಆರತಿ ಎತ್ತಿ ಸ್ವಾಗತಿಸಲಾಯಿತು. ಈ ಸಂದರ್ಭ ವೇಣೂರು ಗ್ರಾ.ಪಂ. ಅಧ್ಯಕ್ಷೆ ಮಲ್ಲಿಕಾ ಕಾಶಿನಾಥ್ ಹೆಗ್ಡೆ ಅವರು ಶಾಲಾ ಪ್ರಾರಂಭೋತ್ಸವಕ್ಕೆ ಚಾಲನೆ ನೀಡಿ ಶುಭ ಹಾರೈಸಿದರು. ಶಾಲೆಗೆ ನೂತನವಾಗಿ ದಾಖಲಾತಿಗೊಂಡ ವಿದ್ಯಾರ್ಥಿಗಳನ್ನು ಪುಷ್ಪವೃಷ್ಠಿಯಿಂದ ಸ್ವಾಗತಿಸಲಾಯಿತು. ವಿದ್ಯಾರ್ಥಿಗಳಿಗೆ ಸಿಹಿತಿಂಡಿ ವಿತರಿಸಲಾಯಿತು.

ಬಳಿಕ ಶಾಲೆಯ ಸಭಾಂಗಣದಲ್ಲಿ ಎಸ್‌ಡಿಎಂಸಿ ಅಧ್ಯಕ್ಷೆ ಜಯಶ್ರೀ ಅಧ್ಯಕ್ಷತೆಯಲ್ಲಿ ಪೋಷಕರ ಸಭೆ ನಡೆಯಿತು. ಮಂಗಳೂರು ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಜಿನೇಂದ್ರ ಕೋಟ್ಯಾನ್ ಸಭೆಗೆ ಚಾಲನೆ ನೀಡಿ ಮಾತನಾಡಿ, ವಿದ್ಯಾರ್ಥಿಗಳು ಗೈರುಹಾಜರಾಗದಂತೆ ಪೋಷಕರು ನೋಡಿಕೊಂಡು ವಿದ್ಯಾರ್ಥಿಗಳ ಸ್ವಚ್ಛತೆಗೆ ಗಮನಹರಿಸಿ, ಮೊಬೈಲ್‌ಗಳಿಂದ ಮಕ್ಕಳನ್ನು ದೂರವಿರಿಸಿ, ಟಿವಿಗಳು ಕೇವಲ ನ್ಯೂಸ್ ನೋಡುವುದಕ್ಕೆ ಮಾತ್ರವೇ ಸೀಮಿತವಿರಲಿ ಎಂದರು.


ಎಸ್‌ಡಿಎಂಸಿ ಅಧ್ಯಕ್ಷರಾಗಿ ಶಾಲೆಯ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಿದ ಎಸ್‌ಡಿಎಂಸಿ ನಿಕಟಪೂರ್ವ ಅಧ್ಯಕ್ಷ ದಿನೇಶ್ ಪಿ. ರನ್ನು ಶಾಲಾ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಜಗನ್ನಾಥ ದೇವಾಡಿಗ ಅವರು ಸನ್ಮಾನಪತ್ರ ವಾಚಿಸಿದರು.
ಸರಕಾರದಿಂದ ಒದಗಿಸಲಾದ ಉಚಿತ ಪುಸ್ತಕವನ್ನು ವಿದ್ಯಾರ್ಥಿಗಳಿಗೆ ವಿತರಿಸಲಾಯಿತು. ಎಸ್‌ಡಿಎಂಸಿ ಅಧಿಕಾರ ಹಸ್ತಾಂತರ ನಡೆಯಿತು. ಇಬ್ಬರು ನೂತನ ಸದಸ್ಯರನ್ನು ಎಸ್‌ಡಿಎಂಗೆ ಆಯ್ಕೆ ಮಾಡಲಾಯಿತು.
ವೇಣೂರು ಗ್ರಾ.ಪಂ. ಸದಸ್ಯರಾದ ಅರುಣ್ ಕ್ರಾಸ್ತ, ಸುನಿಲ್ , ಶಿವಾನಂದ ಗೌಡ, ಎಸ್‌ಡಿಎಂಸಿ ಉಪಾಧ್ಯಕ್ಷ ಲೋಕೇಶ್ ಕೋರ್ಲೋಡಿ, ಎಸ್‌ಡಿಎಂಸಿ ಸದಸ್ಯರು, ತಾಯಂದಿರ ಸಮಿತಿ ಸದಸ್ಯರು, ಪೋಷಕರು, ಶಾಲಾ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.


ಪ್ರಭಾರ ಮುಖ್ಯಶಿಕ್ಷಕರಾದ ರಶ್ಮಿ ಶೆಟ್ಟಿ ಸ್ವಾಗತಿಸಿ, ಮಕ್ಕಳ ಸುರಕ್ಷತೆ ಮತ್ತು ಆರೋಗ್ಯ ಕಾಳಜಿ ಬಗ್ಗೆ ಹಾಗೂ ಶಾಲೆಯ ಕೆಲವು ನಿಯಮಗಳ ಬಗ್ಗೆ ತಿಳಿಸಿದರು. ಶಿಕ್ಷಕಿಯರಾದ ನಾಗವೇಣಿ ಮತ್ತು ಹರ್ಷಲಾ ಕಾರ್ಯಕ್ರಮ ನಿರೂಪಿಸಿ, ಶಿಕ್ಷಕಿ ಬಾಲಕ್ಕ ವಂದಿಸಿದರು. ವಿದ್ಯಾರ್ಥಿಗಳಾದ ಸ್ಪಂದನಾ ಬಳಗ ಪ್ರಾರ್ಥಿಸಿದರು.

Related posts

ಓಡಿಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ

Suddi Udaya

ಕಲ್ಮಂಜ ಸ.ಹಿ.ಪ್ರಾ. ಶಾಲೆಯ ಶತಮಾನೋತ್ಸವ ವರ್ಷದ ಕಾರ್ಯಕ್ರಮಗಳ ಉದ್ಘಾಟನೆ ಹಾಗೂ ಮನವಿ ಪತ್ರಗಳ ಬಿಡುಗಡೆ

Suddi Udaya

ಪತ್ನಿಯನ್ನು ಬಸ್ಸು ಹತ್ತಿಸಿ, ಸ್ಕೂಟಿಯಲ್ಲಿ ಬರುತ್ತೇನೆಂದು ಹೇಳಿದ ಪತಿ: ಹೆಬ್ಬರಿಗೆ ಸಮೀಪ ಅನುಮಾನಾಸ್ಪದವಾಗಿ ಶವ ಪತ್ತೆ:

Suddi Udaya

ಮಚ್ಚಿನ, ಕಳಿಯ ಗ್ರಾಮದ ವಿವಿದೆಡೆ ಕಾಂಕ್ರೀಟ್ ರಸ್ತೆ ಕಾಮಗಾರಿ ಅಂತಿಮ ಹoತದಲ್ಲಿ

Suddi Udaya

‘ಕಬ್ಜಾ’ ಶರಣ್ ತಂಡದಿಂದ ಸೌಜನ್ಯ’ ನ್ಯಾಯಕ್ಕಾಗಿ ಪಾದಯಾತ್ರೆ: ಧರ್ಮಸ್ಥಳ ಪ್ರವೇಶ ದ್ವಾರದಲ್ಲಿ ‘ಕಬ್ಜಾ’ ಶರಣ್ ತಂಡಕ್ಕೆ ಗ್ರಾಮಸ್ಥರ ತಡೆ: ಮಾತಿನ ಚಕಮಕಿ

Suddi Udaya

ತಾಲೂಕು ಜನಜಾಗೃತಿ ವೇದಿಕೆ ಸಭೆ: ನೂತನ ಅಧ್ಯಕ್ಷರಾಗಿ ಗಿರೀಶ್ ಕೆ.ಎಸ್ ವೇಣೂರು ಆಯ್ಕೆ

Suddi Udaya
error: Content is protected !!