
ಗುರುವಾಯನಕೆರೆ : ಬೆಳ್ತಂಗಡಿ ವಾಣಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ಮಹಾಬಲ ಗೌಡ ಹಾಗೂ ಮೀನಾಕ್ಷಿ ದಂಪತಿಯ ಪುತ್ರಿ ಪ್ರಾಪ್ತಿ ಎಂ. ಗೌಡ ಅವರು ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ 625ಕ್ಕೆ 625 ಅಂಕಗಳನ್ನು ಪಡೆದು ಶೇ.100 ಫಲಿತಾಂಶದೊಂದಿಗೆ ಉತ್ತೀರ್ಣರಾಗಿದ್ದು, ಗಮನಾರ್ಹ ಸಾಧನೆ ಮೆರೆದಿದ್ದಾರೆ.
ಈ ಅಪೂರ್ವ ಸಾಧನೆಯನ್ನು ಗುರುತಿಸಿ, ಸಾಯಿ ರಾಮ್ ಫ್ರೆಂಡ್ಸ್ ಶಕ್ತಿನಗರ, ಗುರುವಾಯನಕೆರೆ ವತಿಯಿಂದ ಜೂ.1ರಂದು ಪ್ರಾಪ್ತಿ ಎಂ. ಗೌಡ ಅವರನ್ನು ಗೌರವಿಸಿ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಸಂಘಟನೆಯ ಸದಸ್ಯರು, ಸ್ನೇಹಿತರು ಹಾಗೂ ಸ್ಥಳೀಯ ಗಣ್ಯರು ಉಪಸ್ಥಿತರಿದ್ದು, ಪ್ರಾಪ್ತಿ ಅವರ ಶೈಕ್ಷಣಿಕ ಸಾಧನೆಯನ್ನು ಅಭಿನಂದಿಸಿ ಮುಂದಿನ ವಿದ್ಯಾಭ್ಯಾಸ ಹಾಗೂ ಜೀವನದಲ್ಲಿ ಇನ್ನಷ್ಟು ಯಶಸ್ಸು ಸಾಧಿಸಲಿ ಎಂದು ಶುಭ ಹಾರೈಸಿದರು.
ಸನ್ಮಾನ ಸ್ವೀಕರಿಸಿದ ಪ್ರಾಪ್ತಿ ಎಂ. ಗೌಡ ಅವರು ತಮ್ಮ ಯಶಸ್ಸಿಗೆ ಪೋಷಕರು, ಶಿಕ್ಷಕರು ಹಾಗೂ ಶಿಕ್ಷಣ ಸಂಸ್ಥೆಯ ಮಾರ್ಗದರ್ಶನವೇ ಕಾರಣ ಎಂದು ತಿಳಿಸಿದರು.












