25 C
ಪುತ್ತೂರು, ಬೆಳ್ತಂಗಡಿ
June 3, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್‌ಎಸ್‌ಎಲ್‌ಸಿ ಶತಪ್ರತಿಶತ ಸಾಧನೆ ಮಾಡಿದ ಪ್ರಾಪ್ತಿ ಎಂ. ಗೌಡರಿಗೆ ಸನ್ಮಾನ

ಗುರುವಾಯನಕೆರೆ : ಬೆಳ್ತಂಗಡಿ ವಾಣಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ಮಹಾಬಲ ಗೌಡ ಹಾಗೂ ಮೀನಾಕ್ಷಿ ದಂಪತಿಯ ಪುತ್ರಿ ಪ್ರಾಪ್ತಿ ಎಂ. ಗೌಡ ಅವರು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 625ಕ್ಕೆ 625 ಅಂಕಗಳನ್ನು ಪಡೆದು ಶೇ.100 ಫಲಿತಾಂಶದೊಂದಿಗೆ ಉತ್ತೀರ್ಣರಾಗಿದ್ದು, ಗಮನಾರ್ಹ ಸಾಧನೆ ಮೆರೆದಿದ್ದಾರೆ.

ಈ ಅಪೂರ್ವ ಸಾಧನೆಯನ್ನು ಗುರುತಿಸಿ, ಸಾಯಿ ರಾಮ್ ಫ್ರೆಂಡ್ಸ್ ಶಕ್ತಿನಗರ, ಗುರುವಾಯನಕೆರೆ ವತಿಯಿಂದ ಜೂ.1ರಂದು ಪ್ರಾಪ್ತಿ ಎಂ. ಗೌಡ ಅವರನ್ನು ಗೌರವಿಸಿ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಸಂಘಟನೆಯ ಸದಸ್ಯರು, ಸ್ನೇಹಿತರು ಹಾಗೂ ಸ್ಥಳೀಯ ಗಣ್ಯರು ಉಪಸ್ಥಿತರಿದ್ದು, ಪ್ರಾಪ್ತಿ ಅವರ ಶೈಕ್ಷಣಿಕ ಸಾಧನೆಯನ್ನು ಅಭಿನಂದಿಸಿ ಮುಂದಿನ ವಿದ್ಯಾಭ್ಯಾಸ ಹಾಗೂ ಜೀವನದಲ್ಲಿ ಇನ್ನಷ್ಟು ಯಶಸ್ಸು ಸಾಧಿಸಲಿ ಎಂದು ಶುಭ ಹಾರೈಸಿದರು.

ಸನ್ಮಾನ ಸ್ವೀಕರಿಸಿದ ಪ್ರಾಪ್ತಿ ಎಂ. ಗೌಡ ಅವರು ತಮ್ಮ ಯಶಸ್ಸಿಗೆ ಪೋಷಕರು, ಶಿಕ್ಷಕರು ಹಾಗೂ ಶಿಕ್ಷಣ ಸಂಸ್ಥೆಯ ಮಾರ್ಗದರ್ಶನವೇ ಕಾರಣ ಎಂದು ತಿಳಿಸಿದರು.

Related posts

ಸಿವಿಲ್‌ ಇಂಜಿನಿಯರಿಂಗ್‌ ಪ್ರಾಜೆಕ್ಟ್ ಆವಿಷ್ಕಾರಕ್ಕೆ ಇಂಗ್ಲೆಂಡ್‌ ಮೂಲದ ಪೇಟೆಂಟ್ ಲಭ್ಯ

Suddi Udaya

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ರಾಜ್ಯವನ್ನು ಸಾಲದ ಕೂಪಕ್ಕೆ ತಳ್ಳಿದೆ: ಪ್ರತಾಪ್ ಸಿಂಹ ನಾಯಕ್ ಆರೋಪ

Suddi Udaya

ನಡ: ಪುತ್ಯೆಯಲ್ಲಿ ಗುಡ್ಡ ಜರಿದು ಮನೆಗೆ ಹಾನಿ

Suddi Udaya

ಬಳಂಜ: ಶ್ರೀಗುರುಪೂಜೆ ಪ್ರಯುಕ್ತ ಬಿಲ್ಲವ ಸಂಘದಿಂದ ಕ್ರೀಡಾಕೂಟ

Suddi Udaya

ಧರ್ಮಸ್ಥಳ ಗ್ರಾಮ ಪಂಚಾಯತ್ ನಲ್ಲಿ ಜನಸ್ಪಂದನ ಕಾರ್ಯಕ್ರಮ

Suddi Udaya

ಕರ್ನಾಟಕ ಸ್ಟೇಟ್ ಟೈಲರ್ಸ್ ಎಸೋಸಿಯೇಶನ್ ಬೆಳ್ತಂಗಡಿ ಕ್ಷೇತ್ರದ ಸಾಮಾನ್ಯ ಸಭೆ

Suddi Udaya
error: Content is protected !!