June 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಕ್ಕಿಂಜೆ ಶಾಲಾ ಪ್ರಾರಂಭೋತ್ಸವ : ಪೋಷಕರಿಗೆ ಮಾರ್ಗದರ್ಶನ

ಕಕ್ಕಿಂಜೆ: ಸರಕಾರಿ ಪ್ರೌಢಶಾಲೆ, ಕಕ್ಕಿಂಜೆಯಲ್ಲಿ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮವು ಅರ್ಥಪೂರ್ಣವಾಗಿ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಡಯಟ್ ಮಂಗಳೂರು ಉಪನ್ಯಾಸಕ ತಾರೇಶ್ ನಾಯಕ್ ಭಾಗವಹಿಸಿ ವಿದ್ಯಾರ್ಥಿಗಳು, ಪೋಷಕರು ಹಾಗೂ ಶಿಕ್ಷಕರನ್ನು ಉದ್ದೇಶಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಎಸ್.ಡಿ.ಎಂ.ಸಿ. ಸದಸ್ಯರು, ನಿಕಟ ಪೂರ್ವ ಪಂಚಾಯತ್ ಸದಸ್ಯ ಸಿದ್ದಿಕ್, ಪೋಷಕರು ಹಾಗೂ ಶಾಲೆಯ ಶಿಕ್ಷಕ ವೃಂದ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಶಾಲೆಯ ಮುಖ್ಯಶಿಕ್ಷಕ ಶಂಭು ಶಂಕರ್ ಅವರು ಪೋಷಕರಿಗೆ ಮಾರ್ಗದರ್ಶನ ನೀಡುತ್ತಾ, ಮಕ್ಕಳಿಗೆ ಶಾಲೆಯ ಆಯ್ಕೆ ಹೇಗಿರಬೇಕು, ಗುಣಮಟ್ಟದ ಶಾಲೆಗಳ ಲಕ್ಷಣಗಳು, ಶಿಕ್ಷಣದಲ್ಲಿ ಶಿಕ್ಷಕರ ಹಾಗೂ ಪೋಷಕರ ಪಾತ್ರ, ಸರ್ಕಾರದಿಂದ ದೊರೆಯುವ ವಿವಿಧ ಸೌಲಭ್ಯಗಳು ಹಾಗೂ ಕೌಶಲಭರಿತ ಶಿಕ್ಷಣದ ಅಗತ್ಯತೆಯ ಕುರಿತು ಮಾಹಿತಿ ನೀಡಿದರು.

ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಪೋಷಕರ ಸಹಕಾರ ಮತ್ತು ಶಾಲೆಯೊಂದಿಗೆ ನಿರಂತರ ಸಂಪರ್ಕದ ಮಹತ್ವವನ್ನು ಅವರು ವಿವರಿಸಿದರು.

ಕಾರ್ಯಕ್ರಮದ ಯಶಸ್ಸಿಗೆ ಸಂಸ್ಥೆಯ ಎಲ್ಲಾ ಶಿಕ್ಷಕರು ಶ್ರಮವಹಿಸಿದ್ದು, ಪೋಷಕರು ಕಾರ್ಯಕ್ರಮದ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು. ವಿವಿಧ ಶಾಲೆಗಳಿಂದ ಪ್ರೌಢ ಶಿಕ್ಷಣಕ್ಕೆ 60 ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಸೇರ್ಪಡೆಗೊಂಡರು.

Related posts

ಏ.24: ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ದೃಢಕಲಶಾಭಿಷೇಕ

Suddi Udaya

ಅಖಿಲ ಭಾರತ ಬ್ಯಾರಿ ಪರಿಷತ್ ಮಹಿಳಾ ಘಟಕದ ವತಿಯಿಂದ ಮರ್ಹೂಮ್ ಮುಹಮ್ಮದ್ ಕುಂಜತ್ತಬೈಲು ರವರಿಗೆ ನುಡಿನಮನ.

Suddi Udaya

ಚೆಸ್ ಪಂದ್ಯಾಟದಲ್ಲಿ ಉಜಿರೆಯ ನ್ಯಾಚುರೋಪತಿ ಕಾಲೇಜಿಗೆ ಪ್ರಶಸ್ತಿ

Suddi Udaya

ಕಕ್ಕಿಂಜೆ: ಬೀಟಿಗೆ ಹಯಾತುಲ್ ಇಸ್ಲಾಂ ಮದರಸದ ವಾರ್ಷಿಕ ಮಹಾಸಭೆ: ಸಮಿತಿ ರಚನೆ

Suddi Udaya

ಬೆಳ್ತಂಗಡಿ ಎಸ್ ಡಿ ಎಮ್ ಶಾಲೆಯಲ್ಲಿ ಸ್ಕೌಟ್ಸ್ ಗೈಡ್ಸ್ ಗಳ ಬೇಸಿಗೆ ಶಿಬಿರ

Suddi Udaya

ಫೆ11: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಅಳದಂಗಡಿ ಶಾಖೆಯಲ್ಲಿ ಉಚಿತ ವೈದ್ಯಕೀಯ, ದಂತ ಚಿಕಿತ್ಸೆ, ಕ್ಯಾನ್ಸರ್ ತಪಾಸಣೆ, ನೇತ್ರ ತಪಾಸಣೆ: ಆಧಾರ್ ನೋಂದಣಿ ಮತ್ತು ತಿದ್ದುಪಡಿ ಶಿಬಿರ

Suddi Udaya
error: Content is protected !!