July 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಕಲ್ಮಂಜ ಬ್ರಹ್ಮಶ್ರೀ ಯುವ ಬಿಲ್ಲವ ವೇದಿಕೆಯ ಮಾಸಿಕ ಸಭೆ

ಕಲ್ಮಂಜ: ಬ್ರಹ್ಮಶ್ರೀ ಯುವ ಬಿಲ್ಲವ ವೇದಿಕೆ ಅಕ್ಷಯ ನಗರ, ನಿಡಿಗಲ್-ಕಲ್ಮಂಜ ಇದರ ಮಾಸಿಕ ಸಭೆಯು ವಿಶ್ವನಾಥ ಬಂಗೇರ ದರ್ಖಾಸು ಇವರ ಮನೆಯಲ್ಲಿ ಜೂ.1ರಂದು ನಡೆಯಿತು.

ಕಳೆದ 30 ವರ್ಷಗಳಿಂದ ಪ್ರತೀ ತಿಂಗಳು ೨೬ ಮನೆಯ ಸದಸ್ಯರು ಸೇರಿ ಸಭೆಯನ್ನು ನಡೆಸಿಕೊಂಡು ಬರುತ್ತಿದ್ದು ಸಮಾಜಮುಖಿ ಕೆಲಸದ ಜೊತೆಗೆ ಪ್ರತೀ ವರ್ಷದಂತೆ ಈ ವರ್ಷವೂ ಪ್ರತಿಭಾನ್ವಿತ ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲಾಯಿತು.

2025-26ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 577 ಅಂಕ ಪಡೆದ ಪ್ರಣಮ್ಯ ಅಕ್ಷಯನಗರ ಮತ್ತು ಎಸ್‌ಎಸ್‌ಎಲ್ ಸಿ ಪರೀಕ್ಷೆಯಲ್ಲಿ 530 ಅಂಕ ಪಡೆದ ಕೀರ್ತಿ ಅಕ್ಷಯನಗರ ಇವರನ್ನು ಸಂಘದ ವತಿಯಿಂದ ಸನ್ಮಾನಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿಶ್ವನಾಥ ಬಂಗೇರ ದರ್ಖಾಸು ವಹಿಸಿದ್ದರು. ಅತಿಥಿಗಳಾಗಿ ಪೂರ್ಣೇಶ್ ಪೂಜಾರಿ ಹಿಮರಡ್ಡ, ಅಶೋಕ್ ಪೂಜಾರಿ ಬಳ್ಳಿದಡ್ಡ ಹಾಗೂ ಸಂಘದ ಅಧ್ಯಕ್ಷರಾದ ಕೃಷ್ಣಪ್ಪ ಬಂಗೇರ ಭಾಗವಹಿಸಿ ವಿದ್ಯಾರ್ಥಿಗಳಿಗೆ ಶುಭ ಕೋರಿದರು.

ನಾರಾಯಣ ಬಂಗೇರ ಕಾರ್ಯಕ್ರಮ ನಿರೂಪಿಸಿದರು. ಜಯಂತಿ ವಿಶ್ವನಾಥ ಸ್ವಾಗತಿಸಿ ಆಶಿತಾ ವಂದಿಸಿದರು. ಸಂಘದ ಸದಸ್ಯರು ಸಹಕರಿಸಿದರು.

Related posts

ಆಳ್ವಾಸ್ ಕ್ರಿಸ್ಮಸ್ ಸಂಭ್ರಮ: ಸಿಯೋನ್ ಆಶ್ರಮದ ಆಡಳಿತ ನಿರ್ದೇಶಕ ಡಾ.ಯು.ಸಿ.ಪೌಲೋಸ್ ಮತ್ತು ಶ್ರೀಮತಿ ಮೇರಿ ಯು.ಪಿ. ದಂಪತಿಗೆ ಸನ್ಮಾನ

Suddi Udaya

ಮುಂಡಾಜೆ: ಪಡೀಲು ಆನಂದ ನಾಯ್ಕ ನಿಧನ

Suddi Udaya

ನಡ ಸ. ಪ್ರೌ.ಶಾಲೆಯಲ್ಲಿ ತಾಲ್ಲೂಕು ಮಟ್ಟದ ಯೋಗ ಸ್ಪರ್ಧೆ

Suddi Udaya

ಶಿಶಿಲ ಶ್ರೀ ದುರ್ಗಾಪರಮೇಶ್ವರಿ ಯುವಕಮಂಡಲದ ವತಿಯಿಂದ ಶ್ರಮದಾನ

Suddi Udaya

ಅಳದಂಗಡಿಯಲ್ಲಿ ಕಟ್ಟೂರು ಕಾಂಕ್ರೀಟ್ ಉತ್ಪನ್ನಗಳ ತಯಾರಿಕ ಘಟಕ ಶುಭಾರಂಭ:ಅತ್ಯುತ್ತಮ ಗುಣಮಟ್ಟದ ಸಾಲಿಡ್ ಬ್ಲಾಕ್-ಕಾಂಕ್ರೀಟ್ ಕಂಪೌಂಡ್ ವಾಲ್‌, ಕಾಳುಮೆಣಸು ಬೇಲಿ ಕಂಬ ಲಭ್ಯ

Suddi Udaya

ಆಪರೇಷನ್ ಸಿಂಧೂರ ಯಶಸ್ವಿ ಕಾರ್ಯಾಚರಣೆ ಪ್ರಯುಕ್ತ ಉಜಿರೆ ಶ್ರೀ ಜನಾರ್ಧನ ದೇವಸ್ಥಾನದಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾ ವತಿಯಿಂದ ಶ್ರೀ ದೇವರಿಗೆ ವಿಶೇಷ ಪೂಜೆ

Suddi Udaya
error: Content is protected !!