July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ ಪ್ರಾ.ಕೃ.ಪ. ಸಹಕಾರಿ ಸಂಘ ವತಿಯಿಂದ ಸಂಘದ ರೈತ ಸದಸ್ಯರಿಗೆ ಸಬ್ಸಿಡಿ ದರದಲ್ಲಿ ಮೈಲುತುತ್ತು ವಿತರಣೆ

ಕೊಕ್ಕಡ: ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ವತಿಯಿಂದ ಸಂಘದ ಸದಸ್ಯ ರೈತರಿಗೆ ಸಬ್ಸಿಡಿ ದರದಲ್ಲಿ ಮೈಲುತುತ್ತು (Copper Sulphate) ವಿತರಣಾ ಕಾರ್ಯಕ್ರಮವನ್ನು ಇಂದು (ಜೂನ್ 2) ಫ್ಯಾಕ್ಸ್ ರೆಷನ್ ಮಾರಾಟ ವಿಭಾಗದ ಹಳೆಯ ಕಟ್ಟಡದಲ್ಲಿ ಹಮ್ಮಿಕೊಳ್ಳಲಾಗಿತ್ತು.

ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ ಸದಸ್ಯ ರೈತರಿಗೆ ಮೈಲುತುತ್ತು ವಿತರಿಸಿದರು. ಸಂಘದಲ್ಲಿ ಬೆಳೆಸಾಲ ಪಡೆದಿರುವ ಸದಸ್ಯ ರೈತರಿಗೆ ಮಾತ್ರ ಈ ಸೌಲಭ್ಯ ಲಭ್ಯವಿದ್ದು, ರೈತರ ಜಮೀನಿನ ಏಕರೆ ವಿಸ್ತೀರ್ಣದ ಆಧಾರದ ಮೇಲೆ ಮೈಲುತುತ್ತು ವಿತರಿಸಲಾಗುವುದು ಎಂದು ಸಂಘದ ಆಡಳಿತ ಮಂಡಳಿ ತಿಳಿಸಿದೆ.

ಈ ಸಂದರ್ಭದಲ್ಲಿ ಉಪಾಧ್ಯಕ್ಷ ಮಹಾಬಲ ಶೆಟ್ಟಿ,ನಿರ್ದೇಶಕರಾದ ಶ್ರೀನಾಥ್ ಬಡೆಕೈಲು, ಪದ್ಮನಾಭ ಕಾಯಿಲ, ಪ್ರಮುಖರಾದ ಯೋಗೀಶ್ ಆಳಂಬಿಲ, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ನವೀನ್ ಕಾಯಿಲ, ಸಿಬ್ಬಂದಿಗಳಾದ ಸುಂದರ್ ಕೆಂಗುಡೇಲು, ಬಾಲಕೃಷ್ಣ ಉಪಸ್ಥಿತರಿದ್ದರು.

Related posts

ಪುತ್ತೂರು: ಹಿಂದೂ ಕಾರ್ಯಕರ್ತರಿಗೆ ಪೊಲೀಸರಿಂದ ಮಾರಣಾಂತಿಕ ಹಲ್ಲೆ ಪ್ರಕರಣ: ಕಾರ್ಯಕರ್ತರ ಆರೋಗ್ಯ ವಿಚಾರಿಸಿದ ಶಾಸಕ ಹರೀಶ್ ಪೂಂಜ

Suddi Udaya

ಡಿ.20-21: ಮಡಂತ್ಯಾರ್ ನಲ್ಲಿ ಕ್ಯಾಂಪೋರಿ 2025- 26

Suddi Udaya

ಲಾಯಿಲ ಪ್ರಸನ್ನ ಫಾರ್ಮಸಿ ಕಾಲೇಜು ವಾರ್ಷಿಕ ಕ್ರೀಡಾಕೂಟ

Suddi Udaya

ಮುಂಡೂರು: ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ, ನೂತನ ಯುವಕ ಮಂಡಲಕ್ಕೆ ಚಾಲನೆ, ಬಡ ಕುಟುಂಬಕ್ಕೆ ಆಹಾರ ಕಿಟ್ ವಿತರಣೆ

Suddi Udaya

ಬೆಳ್ತಂಗಡಿ: ರೈತರು ಫ್ರುಟ್ಸ್ ಐ.ಡಿ. ಮಾಡಿಸಿಕೊಳ್ಳುವಂತೆ ತಹಶೀಲ್ದಾರ್ ಪೃಥ್ವಿ ಸಾನಿಕಂ ಮನವಿ

Suddi Udaya

ಪರೀಕ ‘ ಸೌಖ್ಯವನ’ ದಲ್ಲಿ ಸ್ವಾತಂತ್ರ್ಯ ದಿನಾಚರಣೆ:

Suddi Udaya
error: Content is protected !!