September 5, 2026
ಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಪ್ರಾರಂಭೋತ್ಸವ

ಧರ್ಮಸ್ಥಳ : ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಧರ್ಮಸ್ಥಳ ದಲ್ಲಿ 2026 -27ನೇ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವವನ್ನು ಅದ್ದೂರಿಯಾಗಿ ನೆರವೇರಿಸಲಾಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಶಾಲೆಯ ಸಂಚಾಲಕ ಅನಂತಪದ್ಮನಾಭ ಭಟ್ ಇವರು ದೀಪ ಬೆಳಗಿಸುವುದರ ಮೂಲಕ ನೆರವೇರಿಸಿ ಈ ಶೈಕ್ಷಣಿಕ ವರ್ಷಕ್ಕೆ ಶುಭ ಹಾರೈಸಿದರು.

ಹೊಸದಾಗಿ ಸೇರ್ಪಡೆಗೊಂಡ ಶಾಲಾ ಮಕ್ಕಳನ್ನು ಪನ್ನೀರು ಹಾಕಿ, ಆರತಿ ಎತ್ತಿ ಶಾಲೆಗೆ ಬರಮಾಡಿಕೊಳ್ಳಲಾಯಿತು. ಸ್ಲೇಟು, ಬಳಪ ಹಾಗೂ ಆಟದ ಸಾಮಾನುಗಳನ್ನು ಮಕ್ಕಳಿಗೆ ನೀಡಲಾಯಿತು.
ವೇದಿಕೆಯಲ್ಲಿ ಶಾಲಾ ಎಸ್.ಡಿ.ಯಂ.ಸಿ.ಅಧ್ಯಕ್ಷ ರಾಜೇಶ್ ಉಪಸ್ಥಿತರಿದ್ದು ಮಕ್ಕಳಿಗೆ ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಖ್ಯೋಪಾಧ್ಯಾಯರಾದ ಕಮಲ್ ತೇಜು ರಜಪೂತ್ ವಹಿಸಿಕೊಂಡಿದ್ದರು. ಜೋಸೆಫ್ ಇವರು ಪ್ರಾಸ್ತವಿಕ ಮಾತುಗಳನ್ನಾಡಿದರು.

ವಿದ್ಯಾರ್ಥಿನಿಯರು ಪ್ರಾರ್ಥಿಸಿದ ಈ ಕಾರ್ಯಕ್ರಮಕ್ಕೆ ಶೇಖರ್ ಗೌಡ ಸ್ವಾಗತಿಸಿ, ಉಷಾ ಕುಮಾರಿ ವಂದಿಸಿದರು. ಶ್ರೀಜಾ ಎ ಕಾರ್ಯಕ್ರಮ ನಿರ್ವಹಿಸಿದರು.

Related posts

ಕೊಕ್ಕಡ : ರಸ್ತೆಯ ಬದಿ ನಿಲ್ಲಿಸಿದ್ದ ಬೈಕ್ ಕಳವು

Suddi Udaya

ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ ಬೆಳ್ತಂಗಡಿ ಘಟಕದಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಲಾಯಿಲ ಪಡ್ಲಾಡಿ ಶಾಲೆ ಪ್ರಾರಂಭೋತ್ಸವ

Suddi Udaya

ಬಿಜೆಪಿ ಪಕ್ಷದ ಹಿರಿಯ ಕಾರ್ಯಕರ್ತ ನಿಡ್ಲೆ ಕೃಷ್ಣಪ್ಪ ಎಂ. ಕೆ ಅವರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ, ವೈಯಕ್ತಿಕ ಧನಸಹಾಯ

Suddi Udaya

ಮೇ 3 – 4: ನಡ ಶ್ರೀ ಲಕ್ಷ್ಮೀ ನರಸಿಂಹ ಭಜನಾ ಮಂದಿರದ ವಠಾರದಲ್ಲಿ ಲೋಕಕಲ್ಯಾಣಾರ್ಥ “ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ”: ವೈಭಯುತ ಶೋಭಾಯಾತ್ರೆ

Suddi Udaya

ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ವಿರುದ್ದದ ಪ್ರಕರಣ ಹೈಕೋರ್ಟ್‌ನಲ್ಲಿ ವಜಾ

Suddi Udaya
error: Content is protected !!