September 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂದಾರು: ಮೈರೋಳ್ತಡ್ಕ ಶಾಲಾ ಪ್ರಾರಂಭೋತ್ಸವ ಹಾಗೂ ಉಚಿತ ಬ್ಯಾಗು, ಕೊಡೆ ವಿತರಣೆ

ಬಂದಾರು : ದ. ಕ ಜಿ. ಪ.ಸರಕಾರಿ ಉನ್ನತಿ ಕರಿಸಿದ ಪ್ರಾಥಮಿಕ ಶಾಲೆ ಮೈರೋಳ್ತಡ್ಕ ಬಂದಾರು ಶಾಲಾ ಪ್ರಾರಂಭೋತ್ಸವವು ಸಂಭ್ರಮದಿಂದ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ ಡಿ ಎಂ ಸಿ ಅಧ್ಯಕ್ಷ ಪ್ರಶಾಂತ್ ನಿರ್ಮೂಡ ವಹಿಸಿದರು.

ಮುಖ್ಯ ಅತಿಥಿಗಳಾಗಿ ಕಡಮ್ಮಾಜೆ ಫಾರ್ಮ್ಸ್ ದೇವಿ ಪ್ರಸಾದ್ ಗೌಡ, ತಾಪಂ ಮಾಜಿ ಸದಸ್ಯರಾದ ಕೃಷ್ಣಯ್ಯಚಾರ್ಯ, ಬಂದಾರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ದಿನೇಶ್ ಗೌಡ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಗುರುಪ್ರಸಾದ್, ಎಸ್ ಡಿ ಎಂ ಸಿ ಮಾಜಿ ಅಧ್ಯಕ್ಷ ಬಾಬುಗೌಡ, ದೊಂಬಯ್ಯ ಗೌಡ, ಆನಂದ ಗೌಡ, ಮುಖ್ಯೋಪಾಧ್ಯಾಯರಾದ ಸೀನಪ್ಪ ಉಪಸ್ಥಿತರಿದ್ದರು.

ಹಳೆ ವಿದ್ಯಾರ್ಥಿ ಸಂಘದಿಂದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ಹಾಗೂ ನಿವೃತ್ತ ಅಧ್ಯಾಪಕಿ ರೇವತಿ ರವರಿಂದ ಒಂದನೇ ತರಗತಿ ಮಕ್ಕಳಿಗೆ ಉಚಿತ ಬ್ಯಾಗು, ಕೊಡೆ ವಿತರಣೆ ನಡೆಯಿತು.

ಅಧ್ಯಾಪಕ ಶ್ರೀಧರ ಸ್ವಾಗತಿಸಿ, ದಿನೇಶ್ ಕಾರ್ಯಕ್ರಮ ನಿರೂಪಿಸಿ, ರಾಜೇಶ್ವರಿ ಧನ್ಯವಾದವಿತ್ತರು.

Related posts

ನೇಣು ಬಿಗಿದು ವಿದ್ಯಾರ್ಥಿ ಆತ್ಮಹತ್ಯೆ

Suddi Udaya

ಧರ್ಮಸ್ಥಳ ‘ಶೌರ್ಯ’ ವಿಪತ್ತು ನಿರ್ವಹಣಾ ಕಾರ್ಯಕ್ರಮದ 5ನೇ ವಾರ್ಷಿಕೋತ್ಸವದ ಪ್ರಯುಕ್ತ 91 ತಾಲೂಕು ಸಮಿತಿಗಳ ಸ್ವಯಂ ಸೇವಕರಿಗೆ ತುರ್ತು ಸ್ಪಂದನೆ ಮತ್ತು ಕೌಶಲ್ಯಾಭಿವೃದ್ಧಿ ತರಬೇತಿ

Suddi Udaya

ರಾಜ್ಯಸಭಾ ಸದಸ್ಯ ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನು ದೆಹಲಿಯಲ್ಲಿ ಭೇಟಿಯಾದ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ

Suddi Udaya

ವೇಣೂರು ನೂತನ ಒಕ್ಕೂಟದ ಪದಾಧಿಕಾರಿಗಳ ತರಬೇತಿ ಕಾರ್ಯಾಗಾರ

Suddi Udaya

ಯಕ್ಷಭಾರತಿ ಸಂಸ್ಥೆಯ ವತಿಯಿಂದ ಕೋಳ್ಯೂರು ರಾಮಚಂದ್ರ ರಾವ್ ರವರಿಗೆ ಸನ್ಮಾನ

Suddi Udaya

ವೇಣೂರು ವಿದ್ಯಾನಗರ ಬಳಿ ಲೂಯಿಸ್ ರವರ ಮನೆಯ ಕಾಂಪೌಂಡ್ ಕುಸಿತ

Suddi Udaya
error: Content is protected !!