24.3 C
ಪುತ್ತೂರು, ಬೆಳ್ತಂಗಡಿ
June 4, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಮಧ್ಯಾಂತರ ಸಮ್ಮೇಳನದಲ್ಲಿ ಜೆಸಿಐ ಕೊಕ್ಕಡ ಕಪಿಲಾ ಘಟಕಕ್ಕೆ ‘ಎಕ್ಸೆಲೆನ್ಸ್ ಅವಾರ್ಡ್’ ಹಾಗೂ ‘ಗೋಲ್ಡನ್ ಸ್ಟಾರ್ ಪ್ರೆಸಿಡೆಂಟ್’ ಪ್ರಶಸ್ತಿ

ಬೆಳ್ತಂಗಡಿ: ಉಡುಪಿಯ ಕಾಪುವಿನಲ್ಲಿ ನಡೆದ ವಲಯ 15ರ ಮಧ್ಯಾಂತರ ಸಮ್ಮೇಳನ ಸಂಗಮ ಕಾರ್ಯಕ್ರಮದಲ್ಲಿ ಜೆಸಿಐ ಕೊಕ್ಕಡ ಕಪಿಲಾ ಘಟಕಕ್ಕೆ ‘ಎಕ್ಸೆಲೆನ್ಸ್ ಅವಾರ್ಡ್’ ಹಾಗೂ ‘ಗೋಲ್ಡನ್ ಸ್ಟಾರ್ ಪ್ರೆಸಿಡೆಂಟ್’ ಪ್ರಶಸ್ತಿ ಲಭಿಸಿದೆ.

ಘಟಕದ ಧನಾತ್ಮಕ ಬೆಳವಣಿಗೆ, ಎಲ್‌ಡಿಎಂಟಿ, ವಲಯ ಉಪಾಧ್ಯಕ್ಷರ ಮೊದಲ ಭೇಟಿ, ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್ ಯೋಜನೆ, ಎನ್‌ಎಸ್‌ಎಸ್ ಕಾರ್ಯಕ್ರಮ ಮತ್ತು ವಲಯ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಿಕೆ ಸೇರಿದಂತೆ ಘಟಕದ ವಿವಿಧ ಕಾರ್ಯಕ್ರಮಗಳನ್ನು ಗುರುತಿಸಿ ಪ್ರಶಸ್ತಿಗಳು ದೊರೆತಿದೆ. ಇದಲ್ಲದೆ ಜೆಸಿಐ ಇಂಡಿಯಾದ ಪಿಅರ್ ಹಾಗೂ ಮಾರ್ಕೆಟಿಂಗ್ ವಿಭಾಗದಲ್ಲಿ ರಾಷ್ಟಿçÃಯ ಮಟ್ಟದಲ್ಲಿ ಮನ್ನಣೆಯನ್ನು ಪಡೆದುಕೊಂಡಿದೆ.

ಈ ಸಂದರ್ಭದಲ್ಲಿ ಘಟಕ ಪತ್ರಿಕೆ ಕಪಿಲಾವಾಣಿಯ ಮೊದಲ ಸಂಚಿಕೆಯನ್ನು ವಲಯಾಧ್ಯಕ್ಷ ಸಂತೋಷ್ ಶೆಟ್ಟಿ ಅವರು ಬಿಡುಗಡೆ ಮಾಡಿದರು.

ವೇದಿಕೆಯಲ್ಲಿ ವಲಯ ಉಪಾಧ್ಯಕ್ಷ ಕಾಶೀನಾಥ್ ಗೋಗಟೆ, ವಲಯ ಉಪಾಧ್ಯಕ್ಷ ಜಿತೇಶ್ ಎಲ್ ಪಿರೇರಾ, ಜೆಸಿಐ ಕೊಕ್ಕಡ ಕಪಿಲಾ ಘಟಕದ ಅಧ್ಯಕ್ಷರಾದ ರಿತೇಶ್ ಎಂ ಸ್ಟ್ರೆಲ್ಲಾ, ಕಾರ್ಯದರ್ಶಿ ಜೋಯಲ್ ಪಿರೇರಾ, ಕಪಿಲಾವಾಣಿ ಸಂಪಾದಕರಾದ ಜಸ್ವಂತ್ ಪಿರೇರಾ, ನಿಕಟಪೂರ್ವಾಧ್ಯಕ್ಷೆ ಡಾ ಶೋಭಾ ಪಿ, ಪೂರ್ವಾಧ್ಯಕ್ಷ ಸಂತೋಷ್ ಜೈನ್, ಪೂರ್ವಾಧ್ಯಕ್ಷರಾದ ಕೆ ಶ್ರೀಧರ ರಾವ್, ಜೋಸೆಫ್ ಪಿರೇರಾ, ಜೆಸಿಂತಾ ಡಿಸೋಜ ಮತ್ತು ದಕ್ಷ ಜೈನ್ ಉಪಸ್ಥಿತರಿದ್ದರು.

Related posts

ಶ್ರೀಕ್ಷೇತ್ರ ಸೌತಡ್ಕ ಮಹಾಗಣಪತಿ ದೇವಸ್ಥಾನ ಸಂರಕ್ಷಣಾ ವೇದಿಕೆ ಕೊಕ್ಕಡ ಸಮಿತಿ ಅಸ್ತಿತ್ವಕ್ಕೆ

Suddi Udaya

ಕನ್ಯಾಡಿ ಶ್ರೀಗಳಿಗೆ ಶ್ರೀಕ್ಷೇತ್ರ ಗೆಜ್ಜೆಗಿರಿಯ ವತಿಯಿಂದ ಅಭಿನಂದನೆ

Suddi Udaya

ಜ್ಯೋತಿಷ್ಯ ಶಾಸ್ತ್ರದ ಸಾಧನೆಗಾಗಿ ಬೆಳ್ತಂಗಡಿಯ ಯುವ ಜ್ಯೋತಿಷಿ ಯೋಗೀಶ್ ಆಚಾರ್ಯರಿಗೆ ಧ್ರುವ ನಕ್ಷತ್ರ ಅವಾರ್ಡ್

Suddi Udaya

ಬೆಳ್ತಂಗಡಿ ವಾಣಿ ಆಂ.ಮಾ. ಶಾಲೆಯಲ್ಲಿ ಮಕ್ಕಳ ಆಟದ ಮನೆ ಉದ್ಘಾಟನೆ

Suddi Udaya

ಎಸ್. ಡಿ. ಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ‘ರಸ್ತೆ ಸಂಚಾರ ಸುರಕ್ಷತಾ ಜಾಗೃತಿ’ ಕಾರ್ಯಕ್ರಮ

Suddi Udaya

ಅರಸಿನಮಕ್ಕಿ: ಚೈತನ್ಯಮಿತ್ರ ಕಲಾವೃಂದದಿಂದ 22ನೇ ವರ್ಷದ ಶ್ರೀ ಕೃಷ್ಣಜನ್ಮಾಷ್ಟಮಿ ಆಚರಣೆ

Suddi Udaya
error: Content is protected !!