July 22, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವೈಬ್ರೆಂಟ್ ಕಾಲೇಜಿನ ವಿದ್ಯಾರ್ಥಿಗಳು ಐ ಐ ಟಿ ಪ್ರವೇಶಕ್ಕೆ ಅರ್ಹತೆ: ರಾಷ್ಟ್ರಮಟ್ಟದಲ್ಲಿ ಧನುಷ್ ಗುತ್ತಿ 95 ನೇ ರ‍್ಯಾಂಕ್

ಮೂಡುಬಿದಿರೆಯ ಕಲ್ಲಬೆಟ್ಟುವಿನಲ್ಲಿರುವ ನ್ಯೂ ವೈಬ್ರೆಂಟ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಜೆಇಇ ಅಡ್ವಾನ್ಸ್ಡ್ 2026ರ ಪರೀಕ್ಷೆಯಲ್ಲಿ ಅತ್ಯುತ್ತಮ ರ‍್ಯಾಂಕ್ ಪಡೆದು ಐ ಐ ಟಿ ಪ್ರವೇಶಕ್ಕೆ ಅರ್ಹರಾಗುವುದರೊಂದಿಗೆ ಕಾಲೇಜಿನ ಕೀರ್ತಿಯನ್ನು ರಾಷ್ಟ್ರಮಟ್ಟದಲ್ಲಿ ಹೆಚ್ಚಿಸಿದ್ದಾರೆ.

ವಿದ್ಯಾರ್ಥಿಗಳಾದ ಧನುಷ್ ಗುತ್ತಿ ಅಖಿಲ ಭಾರತ ಮಟ್ಟದಲ್ಲಿ ಕೆಟಗರಿ ವಿಭಾಗದಲ್ಲಿ 95ನೇ ರ‍್ಯಾಂಕ್ ಪಡೆದು ಸಾಧನೆ ಮಾಡಿರುತ್ತಾರೆ. ಆದಿತ್ಯ ಅನಿಲ್ ಕೆಂಚಣ್ಣನವರ್ 1803 ರ‍್ಯಾಂಕ್ , ಪ್ರಕೃತಿ ಶ್ರೀಧರ್ 1814 ರ‍್ಯಾಂಕ್ (ಕೆಟಗರಿ), ಗೌತಮ್ ಎ.ಎನ್ 3125 ರ್ಯಾಂಕ್ (ಕೆಟಗರಿ), ಸಮ್ಮಿತ್ ಎಚ್.ಎಸ್ 4372 ರ‍್ಯಾಂಕ್ , ಹಾಗೂ ಜೆಂಕರ್ ಎಂ 22318 ರ‍್ಯಾಂಕ್ ಪಡೆದು ಗಮನಾರ್ಹ ಸಾಧನೆ ಮಾಡುವ ಮೂಲಕ ಕಾಲೇಜಿನ ಸಾಧನಾ ಪಥಕ್ಕೆ ಮತ್ತೊಂದು ಗರಿ ಮೂಡಿಸಿದ್ದಾರೆ.

ದೇಶದ ಪ್ರತಿಷ್ಠಿತ ಇಂಜಿನಿಯರಿಂಗ್ ಪ್ರವೇಶ ಪರೀಕ್ಷೆಯಾದ ಜೆಇಇ ಅಡ್ವಾನ್ಸ್ಡ್‌ನಲ್ಲಿ ವಿದ್ಯಾರ್ಥಿಗಳು ದಾಖಲಿಸಿದ ಈ ಸಾಧನೆಯು ಅವರ ನಿರಂತರ ಪರಿಶ್ರಮ, ಶಿಸ್ತುಬದ್ಧ ಅಧ್ಯಯನ, ಪೋಷಕರ ಪ್ರೋತ್ಸಾಹ ಹಾಗೂ ಕಾಲೇಜಿನ ಗುಣಮಟ್ಟದ ಬೋಧನೆ ಮತ್ತು ತರಬೇತಿಯ ಪ್ರತಿಫಲವಾಗಿದೆ.

ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ವೃಂದ ಹಾಗೂ ಸಿಬ್ಬಂದಿ ವರ್ಗ ಹರ್ಷ ವ್ಯಕ್ತಪಡಿಸಿದ್ದು, ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ. ಮುಂದಿನ ದಿನಗಳಲ್ಲಿ ಭಾರತೀಯ ತಾಂತ್ರಿಕ ಶಿಕ್ಷಣ ಕ್ಷೇತ್ರದಲ್ಲಿ ಇನ್ನಷ್ಟು ಉನ್ನತ ಸಾಧನೆಗಳನ್ನು ಮಾಡಿ ಕಾಲೇಜು ಹಾಗೂ ರಾಜ್ಯದ ಹೆಸರನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯಲಿ ಎಂದು ಶುಭ ಹಾರೈಸಿದ್ದಾರೆ.

ನ್ಯೂ ವೈಬ್ರೆಂಟ್ ಪದವಿ ಪೂರ್ವ ಕಾಲೇಜು ಶೈಕ್ಷಣಿಕ ಕ್ಷೇತ್ರದಲ್ಲಿ ನಿರಂತರವಾಗಿ ಉತ್ತಮ ಫಲಿತಾಂಶಗಳನ್ನು ದಾಖಲಿಸುತ್ತಿದ್ದು, ಜೆಇಇ ಹಾಗೂ ನೀಟ್ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿ ನೀಡುವ ಮೂಲಕ ರಾಜ್ಯ ಮಟ್ಟದಲ್ಲಿ ತನ್ನದೇ ಆದ ಸ್ಥಾನವನ್ನು ಗಳಿಸಿದೆ. ಜೆಇಇ ಅಡ್ವಾನ್ಸ್ಡ್ 2026ರ ಈ ಸಾಧನೆಯು ಕಾಲೇಜಿನ ಗುಣಮಟ್ಟದ ಶಿಕ್ಷಣ ವ್ಯವಸ್ಥೆಗೆ ಮತ್ತೊಂದು ಸಾಕ್ಷಿಯಾಗಿದೆ.

Related posts

ಸುಲ್ಕೇರಿಯಲ್ಲಿ ಭಗವಾನ್ 1008 ಶ್ರೀ ನೇಮಿನಾಥ ಸ್ವಾಮಿ ಬಸದಿ ಧಾಮ ಸಂಪ್ರೋಕ್ಷಣ ಮಹೋತ್ಸವ

Suddi Udaya

ಮಂಗಳೂರುನಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗಾಗಿ ವಕೀಲರ ಸಂಘದಿಂದ ಸಮಾಲೋಚನಾ ಸಭೆ: ಮಂಗಳೂರಿನಲ್ಲಿ ನಮಗೆ ಬೇಕು ಹೈಕೋರ್ಟ್ ಪೀಠ: ಧನಂಜಯ್ ರಾವ್

Suddi Udaya

ಬಳಂಜ:ಯುವ ಬಿಲ್ಲವ ವೇದಿಕೆ ಅಧ್ಯಕ್ಷರಾಗಿ ಶರತ್ ಅಂಚನ್ ಆಯ್ಕೆ

Suddi Udaya

ಕೊಕ್ಕಡ: ಎಂಡೋ ಪೀಡಿತ ವಿಶೇಷ ಚೇತನರಿಗೆ ಉಚಿತ ಬಸ್ ಪಾಸ್ ವಿತರಣೆ

Suddi Udaya

ಉಜಿರೆ ಗೌಸಿಯ ಯಂಗ್ ಮೆನ್ಸ್ ನ ನೂತನ ಅಧ್ಯಕ್ಷರಾಗಿ ಸಯ್ಯದ್ ಝೈನುದ್ದೀನ್ ಹಾಗೂ ಕಾರ್ಯದರ್ಶಿಯಾಗಿ ಇಕ್ಬಾಲ್ ಉಜಿರೆ ಆಯ್ಕೆ

Suddi Udaya

ವಾಣಿ ಪದವಿಪೂರ್ವ ಕಾಲೇಜಿನ ಬಾಲಕಿಯರು ಪ್ರತಿನಿಧಿಸಿದ ದಕ್ಷಿಣ ಕನ್ನಡ ಜಿಲ್ಲೆಯ ತ್ರೋಬಾಲ್ ತಂಡಕ್ಕೆ ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನ

Suddi Udaya
error: Content is protected !!