July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಕ್ಕಿಂಜೆ ಶಾಲಾ ಪ್ರಾರಂಭೋತ್ಸವ : ಪೋಷಕರಿಗೆ ಮಾರ್ಗದರ್ಶನ

ಕಕ್ಕಿಂಜೆ: ಸರಕಾರಿ ಪ್ರೌಢಶಾಲೆ, ಕಕ್ಕಿಂಜೆಯಲ್ಲಿ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮವು ಅರ್ಥಪೂರ್ಣವಾಗಿ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಡಯಟ್ ಮಂಗಳೂರು ಉಪನ್ಯಾಸಕ ತಾರೇಶ್ ನಾಯಕ್ ಭಾಗವಹಿಸಿ ವಿದ್ಯಾರ್ಥಿಗಳು, ಪೋಷಕರು ಹಾಗೂ ಶಿಕ್ಷಕರನ್ನು ಉದ್ದೇಶಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಎಸ್.ಡಿ.ಎಂ.ಸಿ. ಸದಸ್ಯರು, ನಿಕಟ ಪೂರ್ವ ಪಂಚಾಯತ್ ಸದಸ್ಯ ಸಿದ್ದಿಕ್, ಪೋಷಕರು ಹಾಗೂ ಶಾಲೆಯ ಶಿಕ್ಷಕ ವೃಂದ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಶಾಲೆಯ ಮುಖ್ಯಶಿಕ್ಷಕ ಶಂಭು ಶಂಕರ್ ಅವರು ಪೋಷಕರಿಗೆ ಮಾರ್ಗದರ್ಶನ ನೀಡುತ್ತಾ, ಮಕ್ಕಳಿಗೆ ಶಾಲೆಯ ಆಯ್ಕೆ ಹೇಗಿರಬೇಕು, ಗುಣಮಟ್ಟದ ಶಾಲೆಗಳ ಲಕ್ಷಣಗಳು, ಶಿಕ್ಷಣದಲ್ಲಿ ಶಿಕ್ಷಕರ ಹಾಗೂ ಪೋಷಕರ ಪಾತ್ರ, ಸರ್ಕಾರದಿಂದ ದೊರೆಯುವ ವಿವಿಧ ಸೌಲಭ್ಯಗಳು ಹಾಗೂ ಕೌಶಲಭರಿತ ಶಿಕ್ಷಣದ ಅಗತ್ಯತೆಯ ಕುರಿತು ಮಾಹಿತಿ ನೀಡಿದರು.

ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಪೋಷಕರ ಸಹಕಾರ ಮತ್ತು ಶಾಲೆಯೊಂದಿಗೆ ನಿರಂತರ ಸಂಪರ್ಕದ ಮಹತ್ವವನ್ನು ಅವರು ವಿವರಿಸಿದರು.

ಕಾರ್ಯಕ್ರಮದ ಯಶಸ್ಸಿಗೆ ಸಂಸ್ಥೆಯ ಎಲ್ಲಾ ಶಿಕ್ಷಕರು ಶ್ರಮವಹಿಸಿದ್ದು, ಪೋಷಕರು ಕಾರ್ಯಕ್ರಮದ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು. ವಿವಿಧ ಶಾಲೆಗಳಿಂದ ಪ್ರೌಢ ಶಿಕ್ಷಣಕ್ಕೆ 60 ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಸೇರ್ಪಡೆಗೊಂಡರು.

Related posts

ಮಡಂತ್ಯಾರು: ಪಾರೆಂಕಿ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಶ್ರೀರಾಮ ಮಕ್ಕಳ ಪೋಟೋ ಸ್ಪರ್ಧೆ: ಸ್ಮಯ ಎಸ್ ಕೋಟ್ಯಾನ್ ಬಳಂಜರವರಿಗೆ ಪ್ರಥಮ ಪ್ರಶಸ್ತಿ

Suddi Udaya

ತಾಲೂಕಿನಲ್ಲಿ ಮೊಟ್ಟ ಮೊದಲ ಬಾರಿಗೆ ಉಜಿರೆ ರಮ್ಯ 1 ಗ್ರಾಂ ಗೋಲ್ಡ್ & ಫ್ಯಾನ್ಸಿಯಲ್ಲಿ ಲಾಕ್ಮಿ ಕಂಪನಿಯ ಕಾಸ್ಮೆಟಿಕ್ಸ್ ಹೊಸ ಕೌಂಟರ್ ಶುಭಾರಂಭ

Suddi Udaya

ಬೆಳ್ತಂಗಡಿ ಕ್ಷೇತ್ರದ ಮಾಜಿ ಶಾಸಕ, ಬೆಳ್ತಂಗಡಿ ಗುರುದೇವ ಶಿಕ್ಷಣ ಸಂಸ್ಥೆಯ ಅಧ್ಯಕ್ಷ, ಸರಕಾರದ ಮುಖ್ಯ ಸಚೇತಕರಾಗಿ ಸೇವೆ ಸಲ್ಲಿಸಿದ್ದ ಕೆ. ವಸಂತ ಬಂಗೇರ ವಿಧಿವಶ

Suddi Udaya

ಬೆಳ್ತಂಗಡಿ: ಡಯಾಲಿಸಿಸ್ ಕೇಂದ್ರದ ಕೊರತೆಗಳಿಗೆ ಮುಕ್ತಿ : ಆರೋಗ್ಯ ಸಚಿವರು, ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಮತ್ತು ರೋಟರಿ ಸಂಸ್ಥೆಯವರಿಗೆ ಬಂಗೇರರವರಿಂದ ಅಭಿನಂದನೆ

Suddi Udaya

ಸೆ. 3: ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಪಟ್ಟಾಭಿಷೇಕದ 16ನೇ ವರ್ಧಂತ್ಯುತ್ಸವ

Suddi Udaya

ಬಳಂಜ: ಬಿಲ್ಲವ ಸಂಘದಲ್ಲಿ ಮರಿಯಾಲಡೊಂಜಿ ಐತಾರ ವಿಶೇಷ ಕಾರ್ಯಕ್ರಮ: ಆಟಿಯ ವಿವಿಧ ತಿಂಡಿ ತಿನಸುಗಳ ಪ್ರದರ್ಶನ,ವಿವಿಧ ಮನೋರಂಜನಾ ಕಾರ್ಯಕ್ರಮ

Suddi Udaya
error: Content is protected !!