September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ ಪ್ರಾ.ಕೃ.ಪ. ಸಹಕಾರಿ ಸಂಘ ವತಿಯಿಂದ ಸಂಘದ ರೈತ ಸದಸ್ಯರಿಗೆ ಸಬ್ಸಿಡಿ ದರದಲ್ಲಿ ಮೈಲುತುತ್ತು ವಿತರಣೆ

ಕೊಕ್ಕಡ: ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ವತಿಯಿಂದ ಸಂಘದ ಸದಸ್ಯ ರೈತರಿಗೆ ಸಬ್ಸಿಡಿ ದರದಲ್ಲಿ ಮೈಲುತುತ್ತು (Copper Sulphate) ವಿತರಣಾ ಕಾರ್ಯಕ್ರಮವನ್ನು ಇಂದು (ಜೂನ್ 2) ಫ್ಯಾಕ್ಸ್ ರೆಷನ್ ಮಾರಾಟ ವಿಭಾಗದ ಹಳೆಯ ಕಟ್ಟಡದಲ್ಲಿ ಹಮ್ಮಿಕೊಳ್ಳಲಾಗಿತ್ತು.

ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ ಸದಸ್ಯ ರೈತರಿಗೆ ಮೈಲುತುತ್ತು ವಿತರಿಸಿದರು. ಸಂಘದಲ್ಲಿ ಬೆಳೆಸಾಲ ಪಡೆದಿರುವ ಸದಸ್ಯ ರೈತರಿಗೆ ಮಾತ್ರ ಈ ಸೌಲಭ್ಯ ಲಭ್ಯವಿದ್ದು, ರೈತರ ಜಮೀನಿನ ಏಕರೆ ವಿಸ್ತೀರ್ಣದ ಆಧಾರದ ಮೇಲೆ ಮೈಲುತುತ್ತು ವಿತರಿಸಲಾಗುವುದು ಎಂದು ಸಂಘದ ಆಡಳಿತ ಮಂಡಳಿ ತಿಳಿಸಿದೆ.

ಈ ಸಂದರ್ಭದಲ್ಲಿ ಉಪಾಧ್ಯಕ್ಷ ಮಹಾಬಲ ಶೆಟ್ಟಿ,ನಿರ್ದೇಶಕರಾದ ಶ್ರೀನಾಥ್ ಬಡೆಕೈಲು, ಪದ್ಮನಾಭ ಕಾಯಿಲ, ಪ್ರಮುಖರಾದ ಯೋಗೀಶ್ ಆಳಂಬಿಲ, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ನವೀನ್ ಕಾಯಿಲ, ಸಿಬ್ಬಂದಿಗಳಾದ ಸುಂದರ್ ಕೆಂಗುಡೇಲು, ಬಾಲಕೃಷ್ಣ ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ಡಾ. ಡಿ ವೀರೇಂದ್ರ ಹೆಗ್ಗಡೆಯವರಿಗೆ ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದ ಜಾತ್ರಾಮಹೋತ್ಸವದ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya

ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶಿರ್ಲಾಲು ಇದರ ಚುನಾವಣೆ: ಅಧ್ಯಕ್ಷರಾಗಿ ತಾ‌.ಪಂ. ಮಾಜಿ ಸದಸ್ಯ ಸುಧೀರ್ ಆರ್ ಸುವರ್ಣ, ಉಪಾಧ್ಯಕ್ಷರಾಗಿ ಶೀನಪ್ಪ ಎಂ ಮಲೆಕ್ಕಿಲ ಆಯ್ಕೆ

Suddi Udaya

ಮಾ.9: ಬಂಗಾಡಿ ಕೊಲ್ಲಿಯಲ್ಲಿ ಯುವ ನಾಯಕ ರಂಜನ್ ಜಿ ಗೌಡರವರ ಸಾರಥ್ಯದಲ್ಲಿ 26ನೇ ವರ್ಷದ ಹೊನಲು ಬೆಳಕಿನ ಸೂರ್ಯ-ಚಂದ್ರ ಜೋಡುಕರೆ ಕಂಬಳ

Suddi Udaya

ಯಕ್ಷಗುರು ಮೋಹನ ಬೈಪಾಡಿತ್ತಾಯ ಉಜಿರೆ ಅವರಿಗೆ ತೆಂಕಬೈಲು ಪ್ರಶಸ್ತಿ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ಜಾರಿಗೆ ಹೈಕೋರ್ಟ್ ತಡೆ

Suddi Udaya

ಉರುವಾಲು ಸಿಡಿಲು ಬಡಿದು ಹಾನಿಯಾದ ಸೇಸಪ್ಪ ಗೌಡ ರವರ ಮನೆಗೆ ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ನ ಪ್ರಮುಖರು ಭೇಟಿ, ಧನಸಹಾಯ ಹಸ್ತಾಂತರ

Suddi Udaya
error: Content is protected !!