September 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ದಯಾ ಸ್ಪೆಷಲ್ ಸ್ಕೂಲ್‌ನಲ್ಲಿ ಶಾಲಾ ಪುನರಾರಂಭ ಸಂಭ್ರಮ

ಬೆಳ್ತಂಗಡಿ: ಬೆಳ್ತಂಗಡಿಯ ದಯಾ ಸ್ಪೆಷಲ್ ಸ್ಕೂಲ್ ನಲ್ಲಿ 2026-27ನೇ ಶೈಕ್ಷಣಿಕ ವರ್ಷದ ಶಾಲಾ ಪುನರಾರಂಭ ಕಾರ್ಯಕ್ರಮವನ್ನು ಸಂಭ್ರಮದಿಂದ ಆಚರಿಸಲಾಯಿತು. ಬೇಸಿಗೆ ರಜೆಯ ಬಳಿಕ ಶಾಲೆಗೆ ಮರಳಿದ ವಿಶೇಷ ಮಕ್ಕಳನ್ನು ಶಿಕ್ಷಕರು ಹಾಗೂ ಸಿಬ್ಬಂದಿಗಳು ಆತ್ಮೀಯವಾಗಿ ಸ್ವಾಗತಿಸಿದರು.

ಕಾರ್ಯಕ್ರಮವು ಪ್ರಾರ್ಥನೆಯೊಂದಿಗೆ ಆರಂಭಗೊಂಡಿತು. ಶಾಲೆಯ ನಿರ್ದೇಶಕರು, ಮುಖ್ಯ ಶಿಕ್ಷಕಿ, ಶಿಕ್ಷಕ ವೃಂದ  ವಿದ್ಯಾರ್ಥಿಗಳಿಗೆ ಹೊಸ ಶೈಕ್ಷಣಿಕ ವರ್ಷದ ಶುಭಾಶಯಗಳನ್ನು ತಿಳಿಸಿದರು. ಮಕ್ಕಳಿಗೆ  ವಿಶೇಷ ಭೋಜನ ವ್ಯವಸ್ಥೆ  ಮಾಡಲಾಯಿತು.

ಶಾಲೆಯ ಸಂಚಾಲಕ ವಂ.ಫಾದರ್ ವಿನೋದ್ ರವರು ಮಾತನಾಡಿ, “ಪ್ರತಿ ಮಗುವಿನ ಸಾಮರ್ಥ್ಯವನ್ನು ಗುರುತಿಸಿ ಅವರ ಸರ್ವತೋಮುಖ ಬೆಳವಣಿಗೆಗೆ ಶಾಲೆ ಸದಾ ಬದ್ಧವಾಗಿದೆ” ಎಂದು ತಿಳಿಸಿದರು. ಹೊಸ ಶೈಕ್ಷಣಿಕ ವರ್ಷದಲ್ಲಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ, ತರಬೇತಿ ಹಾಗೂ ಚಿಕಿತ್ಸಾ ಸೇವೆಗಳನ್ನು ಒದಗಿಸುವ ಸಂಕಲ್ಪವನ್ನು ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯಸ್ಥರು, ಶಿಕ್ಷಕ ವೃಂದ, ಶಿಕ್ಷಕೇತರರು , ಹಾಗೂ‌ ವಿದ್ಯಾರ್ಥಿಗಳು  ಉಪಸ್ಥಿತರಿದ್ದರು.

Related posts

ಲಾಯಿಲ ಕರ್ನೋಡಿ ಸ.ಹಿ.ಪ್ರಾ. ಶಾಲೆಯ ನವೀಕರಿಸಿದ ಶಾಲಾ ಕಟ್ಟಡ ಹಸ್ತಾಂತರ

Suddi Udaya

ಧರ್ಮಸ್ಥಳ ಬುರುಡೆ ಪ್ರಕರಣ: ಚಿನ್ನಯ್ಯನಿಗೆ ಜೀವ ಬೆದರಿಕೆ ಹಿನ್ನೆಲೆ ರಕ್ಷಣೆ ನೀಡುವಂತೆ ನ್ಯಾಯಾಲಯಕ್ಕೆ ಅರ್ಜಿ

Suddi Udaya

ಬೆಳ್ತಂಗಡಿ ಅಬಕಾರಿ ನಿರೀಕ್ಷಕರಾಗಿ ಲಕ್ಷ್ಮಣ ಉಪ್ಪಾರ ಕರ್ತವ್ಯಕ್ಕೆ ಹಾಜರು

Suddi Udaya

ಎಸ್ ಡಿ ಎಮ್ ‌ಪಾಲಿಟೆಕ್ನಿಕ್‌ ಕಾಲೇಜಿನಲ್ಲಿ ಸೈಬರ್ ಭದ್ರತೆ ಕುರಿತು ಉಪನ್ಯಾಸ

Suddi Udaya

ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆ: ಕಾಶಿಪಟ್ಣ ಸ.ಪ್ರೌ. ಶಾಲೆ ದ್ವಿತೀಯ ಸ್ಥಾನ

Suddi Udaya

ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ

Suddi Udaya
error: Content is protected !!