22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಂಟರ ಯಾನೆ ನಾಡವರ ಸಂಘ ಬೆಳ್ತಂಗಡಿ ಮತ್ತು ಬಂಟರ ಸಂಘ ಉಜಿರೆ ವಲಯದ ಆಶ್ರಯದಲ್ಲಿ ಮಹಾಸಭೆ, ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ

ಉಜಿರೆ: ಬಂಟರ ಯಾನೆ ನಾಡವರ ಸಂಘ, ಬೆಳ್ತಂಗಡಿ ಮತ್ತು ಬಂಟರ ಸಂಘ ಉಜಿರೆ ವಲಯ ಇದರ ಆಶ್ರಯದಲ್ಲಿ ಮಹಾಸಭೆ, ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ ಸಮಾರಂಭವು ಮೇ 31 ರಂದು ಉಜಿರೆ ಶಾರದಾ ಮಂಟಪದಲ್ಲಿ ನಡೆಯಿತು.

ಅಧ್ಯಕ್ಷತೆಯನ್ನು ಬಂಟರ ಸಂಘ, ಉಜಿರೆ ವಲಯದ ಅಧ್ಯಕ್ಷೆ ವನಿತಾ ವಿ. ಶೆಟ್ಟಿ ವಹಿಸಿದ್ದರು. ಉದ್ಘಾಟನೆಯನ್ನು ತಾಲೂಕು ಬಂಟರ ಸಂಘದ ಅಧ್ಯಕ್ಷ ಜಯಂತ ಶೆಟ್ಟಿ ಭಂಡಾರಿಗುಡ್ಡೆ ನೆರವೇರಿಸಿದರು.

ಮುಖ್ಯ ಅತಿಥಿಗಳಾಗಿ ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಅಜಿತ್ ಜಿ. ಶೆಟ್ಟಿ ಕರ‍್ಯಾರು, ಎಸ್‌ಡಿಎಂ ನ್ಯಾಚುರೋಪತಿ ಯೋಗಿಕ್ ಸೈನ್ಸಸ್ ಪ್ರಾಧ್ಯಪಕ ಡಾ. ಬಾಲಕೃಷ್ಣ ಶೆಟ್ಟಿ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕು ಬಂಟರ ಸಂಘದ ನಿರ್ದೇಶಕ, ಬಂಟರ ಸಂಘ, ಉಜಿರೆ ವಲಯದ ಸಂಚಾಲಕ ಸಂಜೀವ ಶೆಟ್ಟಿ ಕುಂಠಿನಿ, ತಾಲೂಕು ಬಂಟರ ಸಂಘ ಮಹಿಳಾ ವಿಭಾಗದ ಅಧ್ಯಕ್ಷೆ ಜಯಲಕ್ಷ್ಮೀ ಎನ್. ಸಾಮಾನಿ ಕರಂಬಾರುಬೀಡು, ತಾಲೂಕು ಬಂಟರ ಸಂಘ ಯುವ ವಿಭಾಗದ ಅಧ್ಯಕ್ಷ ಪ್ರತೀಕ್ ಶೆಟ್ಟಿ ನೊಚ್ಚ, ಉಪಾಧ್ಯಕ್ಷ ರವೀಂದ್ರ ಶೆಟ್ಟಿ ಬಳಂಜ, ಉಪಾಧ್ಯಕ್ಷೆ ಶ್ರೀಮತಿ ಸುಜಯಾ ಡಿ. ಶೆಟ್ಟಿ, ಕಾರ್ಯದರ್ಶಿ ಸುದೇಶ್ ಶೆಟ್ಟಿ ಕುಂಠಿನಿ, ಕೋಶಾಧಿಕಾರಿ ಅಜಿತ್ ಕುಮಾರ್ ಕುಂಜರ್ಪ, ಜೊತೆ ಕಾರ್ಯದರ್ಶಿ ಮಿಥುನ್ ಶೆಟ್ಟಿ, ಅಜಿತ್‌ನಗರ, ಮಾತೃ ಸಂಘ ಮಂಗಳೂರು ಇದರ ನಿರ್ದೇಶಕರಾದ ಜಯರಾಮ್ ಭಂಡಾರಿ ಧರ್ಮಸ್ಥಳ, ಸುಜಾತಾ ಶೆಟ್ಟಿ ಪೆರಿಂಜೆ, ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.

Related posts

ಅಂಡಿಂಜೆ : ಪರಮೇಶ್ವರ ಕೆ. ನಿಧನ

Suddi Udaya

ಕಸ್ತೂರಿ ರಂಗನ್ ವರದಿ ವಿರೋಧಿಸಿ ಶಿಬಾಜೆ ಗ್ರಾ.ಪಂ ನಲ್ಲಿ ಪ್ರತಿಭಟನೆ : ಸರಕಾರಕ್ಕೆ ಮನವಿ

Suddi Udaya

ಉಜಿರೆ: ಶ್ರೀ ಧ.ಮಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ (ಡಿ.ಇಎಲ್.ಇಡಿ) ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

Suddi Udaya

ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ: ಶ್ರೀ ಸತ್ಯನಾರಾಯಣ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ತಾಲೂಕಿನಲ್ಲಿ ನೈತಿಕ ಪೊಲೀಸ್ ಗಿರಿ: ಸೂಕ್ತ ಕ್ರಮಕ್ಕೆ ಆಗ್ರಹಿಸಿ ಎಸ್‌ವೈಎಸ್ ಬೆಳ್ತಂಗಡಿ ಝೋನ್ ನಿಂದ ತಹಶೀಲ್ದಾರ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಮನವಿ

Suddi Udaya

ಅಂಡಿಂಜೆ ವಿಕಲಚೇತನರ ಸಮನ್ವಯ ವಿಶೇಷ ಗ್ರಾಮಸಭೆ

Suddi Udaya
error: Content is protected !!