ವೇಣೂರು: ವೇಣೂರು ಸರಕಾರಿ ಪ್ರೌಢ ಶಾಲೆಯಲ್ಲಿ ಉಂಟಾಗಿದ್ದ ನೀರಿನ ಸಮಸ್ಯೆಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ, ಶಾಲಾ ಮಕ್ಕಳ ಹಿತದೃಷ್ಟಿಯಿಂದ ಶಾಸಕರ ವಿವೇಚನಾ ನಿಧಿಯಿಂದ ಬೋರ್ವೆಲ್ ಸೌಲಭ್ಯವನ್ನು ಶಾಸಕ ಹರೀಶ್ ಪೂಂಜರವರು ಒದಗಿಸುವ ಮೂಲಕ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಹೊಸ ಚೈತನ್ಯ ತುಂಬಿದರು.
ತಾಲೂಕಿನ ಜನಪ್ರಿಯ, ಜನಸ್ನೇಹಿ ಶಾಸಕ ಹರೀಶ್ ಪೂಂಜರವರಿಗೆ ಶಾಲಾ ಮಕ್ಕಳ, ಶಿಕ್ಷಕರ ಹಾಗೂ ಪೋಷಕರ ಪರವಾಗಿ ಹೃದಯತುಂಬಿದ ಅಭಿನಂದನೆಗಳನ್ನು ಸಲ್ಲಿಸಿದರು.
ಶುದ್ಧ ನೀರಿನ ಸೌಲಭ್ಯವು ಮಕ್ಕಳ ಆರೋಗ್ಯ ಮತ್ತು ಶಿಕ್ಷಣಕ್ಕೆ ಅತ್ಯಗತ್ಯ ಎಂಬುದನ್ನು ಅರಿತು, ಶಾಲೆಯ ಮೂಲಭೂತ ಅಗತ್ಯಕ್ಕೆ ತಕ್ಷಣ ಸ್ಪಂದಿಸಿರುವ ಶಾಸಕರ ಈ ಜನಪರ ಕಾಳಜಿ ನಿಜಕ್ಕೂ ಶ್ಲಾಘನೀಯ. “ಮಕ್ಕಳ ಭವಿಷ್ಯವೇ ನಾಳೆಯ ಬಲಿಷ್ಠ ಸಮಾಜ” ಎಂಬ ಧ್ಯೇಯದೊಂದಿಗೆ ಕಾರ್ಯನಿರ್ವಹಿಸುತ್ತಿರುವ ಶಾಸಕರಿಗೆ ಹೃತ್ಪೂರ್ವಕ ಧನ್ಯವಾದಗಳು ಎಂದು ಶಾಲಾಭಿವೃದ್ದಿ ಸಮಿತಿ ಕಾರ್ಯಾಧ್ಯಕ್ಷ ರಾಜೇಶ್ ಪೂಜಾರಿ ಮೂಡುಕೋಡಿ ತಿಳಿಸಿದರು.












