September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಮಧ್ಯಾಂತರ ಸಮ್ಮೇಳನದಲ್ಲಿ ಜೆಸಿಐ ಕೊಕ್ಕಡ ಕಪಿಲಾ ಘಟಕಕ್ಕೆ ‘ಎಕ್ಸೆಲೆನ್ಸ್ ಅವಾರ್ಡ್’ ಹಾಗೂ ‘ಗೋಲ್ಡನ್ ಸ್ಟಾರ್ ಪ್ರೆಸಿಡೆಂಟ್’ ಪ್ರಶಸ್ತಿ

ಬೆಳ್ತಂಗಡಿ: ಉಡುಪಿಯ ಕಾಪುವಿನಲ್ಲಿ ನಡೆದ ವಲಯ 15ರ ಮಧ್ಯಾಂತರ ಸಮ್ಮೇಳನ ಸಂಗಮ ಕಾರ್ಯಕ್ರಮದಲ್ಲಿ ಜೆಸಿಐ ಕೊಕ್ಕಡ ಕಪಿಲಾ ಘಟಕಕ್ಕೆ ‘ಎಕ್ಸೆಲೆನ್ಸ್ ಅವಾರ್ಡ್’ ಹಾಗೂ ‘ಗೋಲ್ಡನ್ ಸ್ಟಾರ್ ಪ್ರೆಸಿಡೆಂಟ್’ ಪ್ರಶಸ್ತಿ ಲಭಿಸಿದೆ.

ಘಟಕದ ಧನಾತ್ಮಕ ಬೆಳವಣಿಗೆ, ಎಲ್‌ಡಿಎಂಟಿ, ವಲಯ ಉಪಾಧ್ಯಕ್ಷರ ಮೊದಲ ಭೇಟಿ, ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್ ಯೋಜನೆ, ಎನ್‌ಎಸ್‌ಎಸ್ ಕಾರ್ಯಕ್ರಮ ಮತ್ತು ವಲಯ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಿಕೆ ಸೇರಿದಂತೆ ಘಟಕದ ವಿವಿಧ ಕಾರ್ಯಕ್ರಮಗಳನ್ನು ಗುರುತಿಸಿ ಪ್ರಶಸ್ತಿಗಳು ದೊರೆತಿದೆ. ಇದಲ್ಲದೆ ಜೆಸಿಐ ಇಂಡಿಯಾದ ಪಿಅರ್ ಹಾಗೂ ಮಾರ್ಕೆಟಿಂಗ್ ವಿಭಾಗದಲ್ಲಿ ರಾಷ್ಟಿçÃಯ ಮಟ್ಟದಲ್ಲಿ ಮನ್ನಣೆಯನ್ನು ಪಡೆದುಕೊಂಡಿದೆ.

ಈ ಸಂದರ್ಭದಲ್ಲಿ ಘಟಕ ಪತ್ರಿಕೆ ಕಪಿಲಾವಾಣಿಯ ಮೊದಲ ಸಂಚಿಕೆಯನ್ನು ವಲಯಾಧ್ಯಕ್ಷ ಸಂತೋಷ್ ಶೆಟ್ಟಿ ಅವರು ಬಿಡುಗಡೆ ಮಾಡಿದರು.

ವೇದಿಕೆಯಲ್ಲಿ ವಲಯ ಉಪಾಧ್ಯಕ್ಷ ಕಾಶೀನಾಥ್ ಗೋಗಟೆ, ವಲಯ ಉಪಾಧ್ಯಕ್ಷ ಜಿತೇಶ್ ಎಲ್ ಪಿರೇರಾ, ಜೆಸಿಐ ಕೊಕ್ಕಡ ಕಪಿಲಾ ಘಟಕದ ಅಧ್ಯಕ್ಷರಾದ ರಿತೇಶ್ ಎಂ ಸ್ಟ್ರೆಲ್ಲಾ, ಕಾರ್ಯದರ್ಶಿ ಜೋಯಲ್ ಪಿರೇರಾ, ಕಪಿಲಾವಾಣಿ ಸಂಪಾದಕರಾದ ಜಸ್ವಂತ್ ಪಿರೇರಾ, ನಿಕಟಪೂರ್ವಾಧ್ಯಕ್ಷೆ ಡಾ ಶೋಭಾ ಪಿ, ಪೂರ್ವಾಧ್ಯಕ್ಷ ಸಂತೋಷ್ ಜೈನ್, ಪೂರ್ವಾಧ್ಯಕ್ಷರಾದ ಕೆ ಶ್ರೀಧರ ರಾವ್, ಜೋಸೆಫ್ ಪಿರೇರಾ, ಜೆಸಿಂತಾ ಡಿಸೋಜ ಮತ್ತು ದಕ್ಷ ಜೈನ್ ಉಪಸ್ಥಿತರಿದ್ದರು.

Related posts

ಸಾವ್ಯ ಶುಭೋದಯ ಹಿಂದೂ ಸೇವಾ ಟ್ರಸ್ಟ್ ಆಶ್ರಯದಲ್ಲಿ ಬಿಡ್ಡಿಂಗ್ ಮಾದರಿಯ ವಾಲಿಬಾಲ್ ಪಂದ್ಯಾಟ

Suddi Udaya

ಧರ್ಮಸ್ಥಳ : ಪೊಸೋಳಿಕೆ ಅಂಗನವಾಡಿ ಕೇಂದ್ರದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೆಳ್ತಂಗಡಿ ಯುವಬಿಲ್ಲವ ವೇದಿಕೆ ನೇತೃತ್ವದಲ್ಲಿ ಯುವ ಚೈತನ್ಯ 2025 ವ್ಯಕ್ತಿತ್ವ ವಿಕಸನ ಕಾರ್ಯಾಗಾರ

Suddi Udaya

ನೆರಿಯ: ಅಣಿಯೂರು ನಿವಾಸಿ ಇಂದಿರಾ ನಿಧನ

Suddi Udaya

ತಣ್ಣೀರುಪಂಥ : ಬೋಳ್ನಡ್ಕ ಭಾಗದಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟರವರ ಪ್ರದೇಶಾಭಿವೃದ್ಧಿ ನಿಧಿಯಿಂದ ರೂ.10 ಲಕ್ಷ ಅನುದಾನ ಕಾಂಕ್ರೀಟ್ ರಸ್ತೆ ನಿರ್ಮಾಣ

Suddi Udaya

ಡಿ.14: ಕನ್ಯಾಡಿ-1 ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ

Suddi Udaya
error: Content is protected !!