July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಮಧ್ಯಾಂತರ ಸಮ್ಮೇಳನದಲ್ಲಿ ಜೆಸಿಐ ಕೊಕ್ಕಡ ಕಪಿಲಾ ಘಟಕಕ್ಕೆ ‘ಎಕ್ಸೆಲೆನ್ಸ್ ಅವಾರ್ಡ್’ ಹಾಗೂ ‘ಗೋಲ್ಡನ್ ಸ್ಟಾರ್ ಪ್ರೆಸಿಡೆಂಟ್’ ಪ್ರಶಸ್ತಿ

ಬೆಳ್ತಂಗಡಿ: ಉಡುಪಿಯ ಕಾಪುವಿನಲ್ಲಿ ನಡೆದ ವಲಯ 15ರ ಮಧ್ಯಾಂತರ ಸಮ್ಮೇಳನ ಸಂಗಮ ಕಾರ್ಯಕ್ರಮದಲ್ಲಿ ಜೆಸಿಐ ಕೊಕ್ಕಡ ಕಪಿಲಾ ಘಟಕಕ್ಕೆ ‘ಎಕ್ಸೆಲೆನ್ಸ್ ಅವಾರ್ಡ್’ ಹಾಗೂ ‘ಗೋಲ್ಡನ್ ಸ್ಟಾರ್ ಪ್ರೆಸಿಡೆಂಟ್’ ಪ್ರಶಸ್ತಿ ಲಭಿಸಿದೆ.

ಘಟಕದ ಧನಾತ್ಮಕ ಬೆಳವಣಿಗೆ, ಎಲ್‌ಡಿಎಂಟಿ, ವಲಯ ಉಪಾಧ್ಯಕ್ಷರ ಮೊದಲ ಭೇಟಿ, ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್ ಯೋಜನೆ, ಎನ್‌ಎಸ್‌ಎಸ್ ಕಾರ್ಯಕ್ರಮ ಮತ್ತು ವಲಯ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಿಕೆ ಸೇರಿದಂತೆ ಘಟಕದ ವಿವಿಧ ಕಾರ್ಯಕ್ರಮಗಳನ್ನು ಗುರುತಿಸಿ ಪ್ರಶಸ್ತಿಗಳು ದೊರೆತಿದೆ. ಇದಲ್ಲದೆ ಜೆಸಿಐ ಇಂಡಿಯಾದ ಪಿಅರ್ ಹಾಗೂ ಮಾರ್ಕೆಟಿಂಗ್ ವಿಭಾಗದಲ್ಲಿ ರಾಷ್ಟಿçÃಯ ಮಟ್ಟದಲ್ಲಿ ಮನ್ನಣೆಯನ್ನು ಪಡೆದುಕೊಂಡಿದೆ.

ಈ ಸಂದರ್ಭದಲ್ಲಿ ಘಟಕ ಪತ್ರಿಕೆ ಕಪಿಲಾವಾಣಿಯ ಮೊದಲ ಸಂಚಿಕೆಯನ್ನು ವಲಯಾಧ್ಯಕ್ಷ ಸಂತೋಷ್ ಶೆಟ್ಟಿ ಅವರು ಬಿಡುಗಡೆ ಮಾಡಿದರು.

ವೇದಿಕೆಯಲ್ಲಿ ವಲಯ ಉಪಾಧ್ಯಕ್ಷ ಕಾಶೀನಾಥ್ ಗೋಗಟೆ, ವಲಯ ಉಪಾಧ್ಯಕ್ಷ ಜಿತೇಶ್ ಎಲ್ ಪಿರೇರಾ, ಜೆಸಿಐ ಕೊಕ್ಕಡ ಕಪಿಲಾ ಘಟಕದ ಅಧ್ಯಕ್ಷರಾದ ರಿತೇಶ್ ಎಂ ಸ್ಟ್ರೆಲ್ಲಾ, ಕಾರ್ಯದರ್ಶಿ ಜೋಯಲ್ ಪಿರೇರಾ, ಕಪಿಲಾವಾಣಿ ಸಂಪಾದಕರಾದ ಜಸ್ವಂತ್ ಪಿರೇರಾ, ನಿಕಟಪೂರ್ವಾಧ್ಯಕ್ಷೆ ಡಾ ಶೋಭಾ ಪಿ, ಪೂರ್ವಾಧ್ಯಕ್ಷ ಸಂತೋಷ್ ಜೈನ್, ಪೂರ್ವಾಧ್ಯಕ್ಷರಾದ ಕೆ ಶ್ರೀಧರ ರಾವ್, ಜೋಸೆಫ್ ಪಿರೇರಾ, ಜೆಸಿಂತಾ ಡಿಸೋಜ ಮತ್ತು ದಕ್ಷ ಜೈನ್ ಉಪಸ್ಥಿತರಿದ್ದರು.

Related posts

ಉಜಿರೆ: ಮಿತ್ರ ಯುವಕ ಮಂಡಲದಿಂದ ವೈದ್ಯಕೀಯ ನೆರವು ಹಸ್ತಾಂತರ

Suddi Udaya

ಪಡಂಗಡಿ: ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶರನ್ನವರಾತ್ರಿ ಪ್ರಯುಕ್ತ ಚಂಡಿಕಾ ಹೋಮ

Suddi Udaya

ಬದ್ಯಾರು: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು

Suddi Udaya

ವಶಕ್ಕೆ ಪಡೆಯಲಾಗಿದ್ದ ಮಹೇಶ್ ಶೆಟ್ಟಿ ತಿಮರೋಡಿ ಬಂಧನ

Suddi Udaya

ನಯನರಮ್ಯ ಧರ್ಮಸ್ಥಳ ಲಕ್ಷದೀಪೋತ್ಸದಲ್ಲಿ ಸನಾತನ ಸಂಸ್ಥೆಯ ಸಹಭಾಗ : ಡಾ. ಡಿ. ವೀರೇಂದ್ರ ಹೆಗ್ಡೆಯವರಿಂದ ಸನಾತನದ ವಿಶೇಷ ಗ್ರಂಥ ಪ್ರದರ್ಶನಕ್ಕೆ ಚಾಲನೆ

Suddi Udaya

ನೀರಿನ ವ್ಯವಸ್ಥೆ ಕಲ್ಪಿಸಿದ ಶಾಸಕ ಹರೀಶ್ ಪೂಂಜರವರಿಗೆ ವೇಣೂರು ಪ್ರೌಢಶಾಲಾ ವತಿಯಿಂದ ಸನ್ಮಾನ

Suddi Udaya
error: Content is protected !!