September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಕ್ಕಿಂಜೆ ಶಾಲಾ ಪ್ರಾರಂಭೋತ್ಸವ : ಪೋಷಕರಿಗೆ ಮಾರ್ಗದರ್ಶನ

ಕಕ್ಕಿಂಜೆ: ಸರಕಾರಿ ಪ್ರೌಢಶಾಲೆ, ಕಕ್ಕಿಂಜೆಯಲ್ಲಿ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮವು ಅರ್ಥಪೂರ್ಣವಾಗಿ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಡಯಟ್ ಮಂಗಳೂರು ಉಪನ್ಯಾಸಕ ತಾರೇಶ್ ನಾಯಕ್ ಭಾಗವಹಿಸಿ ವಿದ್ಯಾರ್ಥಿಗಳು, ಪೋಷಕರು ಹಾಗೂ ಶಿಕ್ಷಕರನ್ನು ಉದ್ದೇಶಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಎಸ್.ಡಿ.ಎಂ.ಸಿ. ಸದಸ್ಯರು, ನಿಕಟ ಪೂರ್ವ ಪಂಚಾಯತ್ ಸದಸ್ಯ ಸಿದ್ದಿಕ್, ಪೋಷಕರು ಹಾಗೂ ಶಾಲೆಯ ಶಿಕ್ಷಕ ವೃಂದ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಶಾಲೆಯ ಮುಖ್ಯಶಿಕ್ಷಕ ಶಂಭು ಶಂಕರ್ ಅವರು ಪೋಷಕರಿಗೆ ಮಾರ್ಗದರ್ಶನ ನೀಡುತ್ತಾ, ಮಕ್ಕಳಿಗೆ ಶಾಲೆಯ ಆಯ್ಕೆ ಹೇಗಿರಬೇಕು, ಗುಣಮಟ್ಟದ ಶಾಲೆಗಳ ಲಕ್ಷಣಗಳು, ಶಿಕ್ಷಣದಲ್ಲಿ ಶಿಕ್ಷಕರ ಹಾಗೂ ಪೋಷಕರ ಪಾತ್ರ, ಸರ್ಕಾರದಿಂದ ದೊರೆಯುವ ವಿವಿಧ ಸೌಲಭ್ಯಗಳು ಹಾಗೂ ಕೌಶಲಭರಿತ ಶಿಕ್ಷಣದ ಅಗತ್ಯತೆಯ ಕುರಿತು ಮಾಹಿತಿ ನೀಡಿದರು.

ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಪೋಷಕರ ಸಹಕಾರ ಮತ್ತು ಶಾಲೆಯೊಂದಿಗೆ ನಿರಂತರ ಸಂಪರ್ಕದ ಮಹತ್ವವನ್ನು ಅವರು ವಿವರಿಸಿದರು.

ಕಾರ್ಯಕ್ರಮದ ಯಶಸ್ಸಿಗೆ ಸಂಸ್ಥೆಯ ಎಲ್ಲಾ ಶಿಕ್ಷಕರು ಶ್ರಮವಹಿಸಿದ್ದು, ಪೋಷಕರು ಕಾರ್ಯಕ್ರಮದ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು. ವಿವಿಧ ಶಾಲೆಗಳಿಂದ ಪ್ರೌಢ ಶಿಕ್ಷಣಕ್ಕೆ 60 ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಸೇರ್ಪಡೆಗೊಂಡರು.

Related posts

ಕಾವಳಮುಡೂರು ಧೂಮಳಿಕೆ ನಿರ್ಮಾಣ ಹಂತದ ಮನೆಯಲ್ಲಿ, ಜಾನುವಾರು ವಧೆ ಪೊಲೀಸ್ ದಾಳಿ ಆರೋಪಿಗಳು ಪರಾರಿ

Suddi Udaya

ರಬ್ಬರ್ ಕೃಷಿಕರ ಸಮಸ್ಯೆ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ಜನಮಂಗಲ ಕಾರ್ಯಕ್ರಮದ ಮೂಲಕ ವಾಟರ್ ಬೆಡ್ ವಿತರಣೆ

Suddi Udaya

ಬೆಳಾಲು ಶ್ರೀ ಧ. ಮ. ಅನುದಾನಿತ ಪ್ರೌಢಶಾಲೆಯಲ್ಲಿ ಆಟಿದ ಲೇಸ್ ಕಾರ್ಯಕ್ರಮ

Suddi Udaya

ತಣ್ಣೀರುಪಂತ ವಲಯ, ಕರಾಯ ಕಾರ್ಯಕ್ಷೇತ್ರದ ಬಾಬು ರವರಿಗೆ ರವರಿಗೆ ವೀಲ್ ಚೆಯರ್ ವಿತರಣೆ

Suddi Udaya

ಫೆ.12ರಿಂದ ಮರೋಡಿ ಕ್ಷೇತ್ರದ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೋತ್ಸವ

Suddi Udaya
error: Content is protected !!