September 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಕಲ್ಮಂಜ ಬ್ರಹ್ಮಶ್ರೀ ಯುವ ಬಿಲ್ಲವ ವೇದಿಕೆಯ ಮಾಸಿಕ ಸಭೆ

ಕಲ್ಮಂಜ: ಬ್ರಹ್ಮಶ್ರೀ ಯುವ ಬಿಲ್ಲವ ವೇದಿಕೆ ಅಕ್ಷಯ ನಗರ, ನಿಡಿಗಲ್-ಕಲ್ಮಂಜ ಇದರ ಮಾಸಿಕ ಸಭೆಯು ವಿಶ್ವನಾಥ ಬಂಗೇರ ದರ್ಖಾಸು ಇವರ ಮನೆಯಲ್ಲಿ ಜೂ.1ರಂದು ನಡೆಯಿತು.

ಕಳೆದ 30 ವರ್ಷಗಳಿಂದ ಪ್ರತೀ ತಿಂಗಳು ೨೬ ಮನೆಯ ಸದಸ್ಯರು ಸೇರಿ ಸಭೆಯನ್ನು ನಡೆಸಿಕೊಂಡು ಬರುತ್ತಿದ್ದು ಸಮಾಜಮುಖಿ ಕೆಲಸದ ಜೊತೆಗೆ ಪ್ರತೀ ವರ್ಷದಂತೆ ಈ ವರ್ಷವೂ ಪ್ರತಿಭಾನ್ವಿತ ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲಾಯಿತು.

2025-26ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 577 ಅಂಕ ಪಡೆದ ಪ್ರಣಮ್ಯ ಅಕ್ಷಯನಗರ ಮತ್ತು ಎಸ್‌ಎಸ್‌ಎಲ್ ಸಿ ಪರೀಕ್ಷೆಯಲ್ಲಿ 530 ಅಂಕ ಪಡೆದ ಕೀರ್ತಿ ಅಕ್ಷಯನಗರ ಇವರನ್ನು ಸಂಘದ ವತಿಯಿಂದ ಸನ್ಮಾನಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿಶ್ವನಾಥ ಬಂಗೇರ ದರ್ಖಾಸು ವಹಿಸಿದ್ದರು. ಅತಿಥಿಗಳಾಗಿ ಪೂರ್ಣೇಶ್ ಪೂಜಾರಿ ಹಿಮರಡ್ಡ, ಅಶೋಕ್ ಪೂಜಾರಿ ಬಳ್ಳಿದಡ್ಡ ಹಾಗೂ ಸಂಘದ ಅಧ್ಯಕ್ಷರಾದ ಕೃಷ್ಣಪ್ಪ ಬಂಗೇರ ಭಾಗವಹಿಸಿ ವಿದ್ಯಾರ್ಥಿಗಳಿಗೆ ಶುಭ ಕೋರಿದರು.

ನಾರಾಯಣ ಬಂಗೇರ ಕಾರ್ಯಕ್ರಮ ನಿರೂಪಿಸಿದರು. ಜಯಂತಿ ವಿಶ್ವನಾಥ ಸ್ವಾಗತಿಸಿ ಆಶಿತಾ ವಂದಿಸಿದರು. ಸಂಘದ ಸದಸ್ಯರು ಸಹಕರಿಸಿದರು.

Related posts

ಬಡಗಕಾರಂದೂರು ಶಾಲೆಯಲ್ಲಿ ಪರಿಸರ ದಿನಾಚರಣೆ – ಪುಸ್ತಕ ಪೂಜೆ

Suddi Udaya

ಪಂಪು ಶೆಡ್ ಫ್ಯೂಸ್ ನಲ್ಲಿ ಅವಿತು ಕೊಂಡ ಅಪಾಯಕಾರಿ ಹಾವು

Suddi Udaya

ಗುಂಡೂರಿ: ಮುದ್ದಾಡಿ ನಿವಾಸಿ ಪುರಲ್ಲ ನಿಧನ

Suddi Udaya

ಉಜಿರೆ ಶ್ರೀ. ಧ.ಮಂ. ವಸತಿ ಪ.ಪೂ. ಕಾಲೇಜಿಗೆ ಶೇ.100 ಫಲಿತಾಂಶ

Suddi Udaya

ಪಜಿರಡ್ಕ: ನೀರುಪಾಲಗಿದ್ದ ವಿದ್ಯಾರ್ಥಿಯ ಮೃತದೇಹ ಪತ್ತೆ

Suddi Udaya

ಬಂದಾರು : ಪೆರ್ಲ-ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ನೂತನ ಸಭಾಭವನಕ್ಕೆ ಭೂಮಿ ಪೂಜೆ

Suddi Udaya
error: Content is protected !!