September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

“ಕಾಜೂರು ರಾಹಾ ಪಬ್ಲಿಕ್ ಸ್ಕೂಲ್” ಪ್ರಾರಂಭೋತ್ಸವ ಸಂಭ್ರಮ

ಬೆಳ್ತಂಗಡಿ: “ರಾಹಾ ಪಬ್ಲಿಕ್ ಸ್ಕೂಲ್” ಕಾಜೂರಿನಲ್ಲಿ 2026-27ನೇ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮವು ಜೂ. 1 ರಂದು ಉತ್ಸಾಹಭರಿತವಾಗಿ ನಡೆಯಿತು.

ಕಾರ್ಯಕ್ರಮದಲ್ಲಿ ಶೈಕ್ಷಣಿಕ ನಿರ್ದೇಶಕರಾದ ಕೆ.ಎಮ್ ಸಿದ್ದೀಕ್ ಮೊಂಟುಗೋಳಿ ಭಾಗವಹಿಸಿ, ಮಕ್ಕಳ ಭವಿಷ್ಯ ಉಜ್ವಲವಾಗಲು ಮನೆ ಮತ್ತು ಶಾಲೆಯ ನಡುವೆ ಉತ್ತಮ ಸಹಕಾರ ಅಗತ್ಯ. ಮಕ್ಕಳನ್ನು ಒತ್ತಡ ರಹಿತವಾಗಿ ಸಂತುಷ್ಟತೆಯಿಂದ ಕಲಿಕೆಗೆ ಅವಕಾಶ ಮಾಡಿಕೊಡಬೇಕಾದ ಜವಾಬ್ದಾರಿ ಹೆತ್ತವರು ಮತ್ತು ಶಿಕ್ಷಕರದ್ದು ಎಂದರು.

ಸಮಾರಂಭದಲ್ಲಿ ರಹ್ಮಾನಿಯಾ ಜುಮ್ಮಾ ಮಸ್ಜಿದ್ ಮತ್ತು ದರ್ಗಾ ಶರೀಫ್ ಕಾಜೂರು ಆಡಳಿತ ಕಮಿಟಿ ಅಧ್ಯಕ್ಷ ಕೆ.ಯು ಇಬ್ರಾಹಿಂ, ದರ್ಗಾ ಪ್ರಧಾನ ಕಾರ್ಯದರ್ಶಿ ಮತ್ತು ರಹ್ಮಾನಿಯಾ ಶಿಕ್ಷಣ ಸಂಸ್ಥೆಗಳ ಚೇರ್ಮನ್ ಜೆ.ಹೆಚ್ ಅಬೂಬಕ್ಕರ್ ಸಿದ್ದಿಕ್, ಕೋಶಾಧಿಕಾರಿ ಡಿ.ವೈ ಉಮರ್, ಉಪಾಧ್ಯಕ್ಷ ಬಶೀರ್ ಅಹ್ಸನಿ, ಸದಸ್ಯರಾದ ಬದ್ರುದ್ದೀನ್, ಮುಹಮ್ಮದ್ ಸಖಾಫಿ, ಮುಹಮ್ಮದ್ ಹನೀಫ್, ಸಲೀಂ ಕೇರಿಮಾರ್, ಯಾಕೂಬ್ ಎನ್.ಎಮ್, ವೈಸ್ ಚೇರ್ಮನ್ ಮುಹಮ್ಮದ್ ಕಮಾಲ್, ಸಂಚಾಲಕ ಉಮರುಲ್ ಅಶ್ಫಾಕ್, ಫೈನಾನ್ಷಿಯಲ್ ಸೆಕ್ರೆಟರಿ ಆಸಿಫ್ ಜೆ.ಹೆಚ್. ಸಂಸ್ಥೆಯ ಸದರ್ ಉಸ್ತಾದ್ ಅಬ್ದುಲ್ ಅಝೀಝ್ ಸಖಾಫಿ ಪರಪ್ಪು, ಕೋರ್ಡಿನೇಟರ್ ನವಾಝ್, ರಾಹ ಮದರಸ ಮುಖ್ಯ ಅಧ್ಯಾಪಕ ಸಿನಾನ್ ಉಸ್ತಾದ್ ಮತ್ತು ಸಿಬ್ಬಂದಿಗಳು ಹಾಗೂ ಜಮಾಅತ್ ಕಮಿಟಿಯ ಇತರ ಸದಸ್ಯರು, ಶಾಲಾ ಮೇಲುಸ್ತುವಾರಿ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.
ವಿದ್ಯಾರ್ಥಿಗಳು ವಿವಿಧ ಚಟುವಟಿಕೆಗಳಲ್ಲಿ ಭಾಗವಹಿಸಿ ಸಂತೋಷಪಟ್ಟರು. ಶಾಲೆಗೆ ಹೊಸದಾಗಿ ಸೇರ್ಪಡೆಯಾದ ಹಾಗೂ ಹಳೆಯ ವಿದ್ಯಾರ್ಥಿಗಳನ್ನು ಆತ್ಮೀಯವಾಗಿ ಸ್ವಾಗತಿಸಲಾಯಿತು.

ಕಾರ್ಯಕ್ರಮದಲ್ಲಿ ಭಾಗವಹಿಸಿದ ಪೋಷಕರು ಶಾಲೆಯ ಶೈಕ್ಷಣಿಕ ಚಟುವಟಿಕೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದ ಎಲ್ಲ ಗಣ್ಯರು, ಜಮಾಅತ್ ಕಮಿಟಿ ಸದಸ್ಯರು ಹಾಗೂ ಆಗಮಿಸಿದ ಪೋಷಕರಿಗೆ ಶಾಲಾ ಆಡಳಿತ ಮಂಡಳಿ ಕೃತಜ್ಞತೆ ಸಲ್ಲಿಸಿತು. ಸಂಸ್ಥೆಯ ಸಹ ಅಧ್ಯಾಪಕಿ ರೋಸಮ್ಮ ಕಾರ್ಯಕ್ರಮದ ನಿರೂಪಣೆಯನ್ನು ಮಾಡಿ ಮುಖ್ಯ ಶಿಕ್ಷಕಿ ಝೊಹರಾ ಸ್ವಾಗತಿಸಿ, ಸಹ ಶಿಕ್ಷಕಿಯರ ಸಹಕಾರದಿಂದ ಕಾರ್ಯಕ್ರಮ ಯಶಸ್ವಿಗೊಳಿಸಿದರು. ಸಿನಾನ್ ಉಸ್ತಾದ್ ಧನ್ಯವಾದವಿತ್ತರು.

Related posts

ಬೆಳ್ತಂಗಡಿ ತಾಲೂಕು ಮಟ್ಟದ ಕೆಂಪೇಗೌಡರ 517ನೇ ಜಯಂತಿ ಆಚರಣೆ

Suddi Udaya

ತಾಲೂಕಿನಲ್ಲಿ ಹದಗೆಟ್ಟಿರುವ ರಸ್ತೆ ಗುಂಡಿ ಮುಚ್ಚಲು ಗುತ್ತಿಗೆದಾರರೇ ಹಿಂದೇಟು: ಸಾಮಾಜಿಕ ಜಾಲ ತಾಣಗಳಲ್ಲಿ ಪೋಸ್ಟ್ ವೈರಲ್

Suddi Udaya

ಬರೆಂಗಾಯದಲ್ಲಿ ಉಚಿತ ಆರೋಗ್ಯ ಶಿಬಿರ ಮತ್ತು ಬೃಹತ್ ರಕ್ತದಾನ ಶಿಬಿರ

Suddi Udaya

ಎಲ್‌ಸಿಆರ್ ವಿದ್ಯಾ ಸಂಸ್ಥೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಕಳೆಂಜ: ಪಲ್ಲದಂಗಡಿ, ಕಾಂತ್ರೇಲು ಹಾಗೂ ಹತ್ಯಡ್ಕದ ಮುದ್ದಿಗೆ, ಕುಂಟಾಲಪಳಿಕೆ ಕೆಎಸ್ ಆರ್ ಟಿಸಿ ಬಸ್ಸು ಸಂಚಾರಕ್ಕೆ ಚಾಲನೆ: ಬಸ್ ನ್ನು ಸ್ವಾಗತಿಸಿದ ಮುದ್ದಿಗೆಯ ಗ್ರಾಮಸ್ಥರು

Suddi Udaya

ಮಡಂತ್ಯಾರು : ಸೇಕ್ರೆಡ್ ಹಾರ್ಟ್ ಕಾಲೇಜಿನ ಸಹಪ್ರಾಧ್ಯಾಪಕ ಈಶ್ವರ ಗೌಡ ಪಿ. ಅವರಿಗೆ ಪಿ. ಎಚ್.ಡಿ ಪದವಿ ಪ್ರದಾನ

Suddi Udaya
error: Content is protected !!