23.6 C
ಪುತ್ತೂರು, ಬೆಳ್ತಂಗಡಿ
June 3, 2026
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಜೂ.7: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ವತಿಯಿಂದ ಉಚಿತ ವೈದ್ಯಕೀಯ, ನೇತ್ರ ತಪಾಸಣಾ, ದಂತಾ ಚಿಕಿತ್ಸಾ ಮತ್ತು ರಕ್ತದಾನ ಶಿಬಿರ

ಅಳದಂಗಡಿ: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಮಂಗಳೂರು ಇದರ ಅಳದಂಗಡಿ ಶಾಖೆಯ ತೃತೀಯ ವಾರ್ಷಿಕೋತ್ಸವದ ಪ್ರಯುಕ್ತ ಉಚಿತ ವೈದ್ಯಕೀಯ, ನೇತ್ರ ತಪಾಸಣಾ ದಂತ ಚಿಕಿತ್ಸಾ ಮತ್ತು ರಕ್ತದಾನ ಶಿಬಿರವನ್ನು ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ ಬಳಂಜ, ಜೆಸಿಐ ಬೆಳ್ತಂಗಡಿ, ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ ಶಿರ್ಲಾಲು, ಯುವಶಕ್ತಿ ನಾವಾರ ಇವರ ಜಂಟಿ ಸಹಯೋಗದೊಂದಿಗೆ ಜೂ.7ರಂದು ಶ್ರೀ ಗುರು ಸಭಾ ಭವನ ಅಳದಂಗಡಿಯಲ್ಲಿ ಆಯೋಜಿಸಲಾಗಿದೆ.

ಈ ವೈದ್ಯಕೀಯ ಶಿಬಿರದಲ್ಲಿ ಗ್ರಾಮೀಣ ಅರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ ಪರಿಗಣಿಸಲ್ಪಟ್ಟ ವಿಶ್ವ ವಿದ್ಯಾಲಯ ದೇರಳಕಟ್ಟೆ ಹಾಗೂ ಸಮುದಾಯ ದಂತ ಆರೋಗ್ಯ ವಿಭಾಗ ಯೆನೆಪೊಯ ದಂತ ಕಾಲೇಜು ಮತ್ತು ಆಸ್ಪತ್ರೆ, ದೇರಳಕಟ್ಟೆ ಇವರ ನುರಿತ ತಜ್ಞ ವೈದ್ಯರ ತಂಡದವರಿAದ ಕಣ್ಣಿನ ತಪಾಸಣೆ, ಉಚಿತ ಕನ್ನಡಕ ವಿತರಣೆ, ಮಧುಮೇಹ ತಪಾಸಣೆ, ಬಿ.ಪಿ ತಪಾಸಣೆ, ದಂತ ತಪಾಸಣೆ ಚಿಕಿತ್ಸೆ ಮತ್ತು ಸಾಮಾನ್ಯ ವೈದ್ಯಕೀಯ ತಪಾಸಣೆ, ಉಚಿತ ಔಷಧಿ ವಿತರಣೆ, ಹೆಚ್ಚಿನ ಚಿಕಿತ್ಸೆಗೆ ಹಸಿರು ಕಾರ್ಡನ್ನು ನೀಡುವುದು ಹಾಗೂ ಇತರ ವೈದ್ಯಕೀಯ ಸೇವೆಗಳು ಲಭ್ಯವಿರುತ್ತದೆ. ಅಗತ್ಯವುಳ್ಳವರಿಗೆ ಸಂಘದ ವತಿಯಿಂದ ಉಚಿತ ಕನ್ನಡಕ ವಿತರಣೆಯನ್ನು ಮಾಡಲಾಗುವುದು ಹಾಗೂ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿದೆ.

ಸಂಘದ ಸದಸ್ಯರು ಮತ್ತು ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆಯಬೇಕಾಗಿ ಎಂದು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ನಾರಾವಿ: ಈದು ಪರಸ್ಪರ ಸೇವಾ ಬ್ರಿಗೇಡ್ ವತಿಯಿಂದ ಚಿಕಿತ್ಸಾ ನೆರವು ಹಸ್ತಾಂತರ

Suddi Udaya

ಪಾರೆಂಕಿ :ಶ್ರೀ ರಾಮನಗರಹಾರಬೆ ಶ್ರೀ ದುಗಲಾಯ ಮತ್ತು ಗುಳಿಗದೈವಗಳ ನೇಮೋತ್ಸವ

Suddi Udaya

ವೇಣೂರು ಸಿಎ ಬ್ಯಾಂಕ್ ನ ಮಾಜಿ ನಿರ್ದೇಶಕ ರತ್ನವರ್ಮ ಮುದ್ಯ ನಿಧನ

Suddi Udaya

ಕೊಕ್ಕಡದಲ್ಲಿ ಎಂಡೋ ಪಿಡಿತರ ಶಾಶ್ವತ ಪುನರ್ವಸತಿ ಕೇಂದ್ರ ತೆರೆಯಬೇಕೆಂದು ದಿನೇಶ್ ಗುಂಡೂರಾವ್ ರವರಿಗೆ ಮನವಿ

Suddi Udaya

ದಾರುಲ್ ಮುಸ್ತಫಾ ಮೋರಲ್ ಅಕಾಡೆಮಿ ಸಂಸ್ಥೆ ನಚ್ಚಬೊಟ್ಟು ಇದರ ಸಮ್ಮೇಳನದ ಸಂದೇಶ ಜಾಥಾ

Suddi Udaya

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ಸುಲ್ಕೇರಿಮೊಗ್ರು ಪ್ರಾ.ಕೃ.ಪ.ಸ. ಸಂಘದ ಅಧ್ಯಕ್ಷ ನವೀನ್ ಕೆ. ಸಾಮಾನಿ ಬೆಂಬಲ

Suddi Udaya
error: Content is protected !!