23.6 C
ಪುತ್ತೂರು, ಬೆಳ್ತಂಗಡಿ
June 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ನೂತನ ಬಿಇಒ: ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ವತಿಯಿಂದ ಅಭಿನಂದನೆ

ಬೆಳ್ತಂಗಡಿ: ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿದ್ದ ತಾರಕೇಸರಿರವರ ನಿವೃತ್ತಿಯ ಬಳಿಕ ಪದೊನ್ನತಿಯ ಮೂಲಕ ನೂತನವಾಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿ ನೇಮಕಗೊಂಡಿರುವ ಜಯಶ್ರೀ ಇವರಿಗೆ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ವತಿಯಿಂದ ಅಭಿನಂದನೆಯನ್ನು ಕೋರಲಾಯಿತು.

ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ವತಿಯಿಂದ ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ಧನ್ಯ ಕುಮಾರ್ ಮತ್ತು ಮಾನವ ಸಂಪನ್ಮೂಲ ಅಧಿಕಾರಿ ಅಜಯ್ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಗೆ ಭೇಟಿ ನೀಡಿ, ಶಿಕ್ಷಣ ಕ್ಷೇತ್ರದಲ್ಲಿ ಜಯಶ್ರೀ ರವರ ಕಳೆದ 3 ದಶಕಗಳ ಅನುಭವ ಮತ್ತು ಸೇವೆಯನ್ನು ಗುರುತಿಸಿ ಶ್ಲಾಘಿಸಿ ಶುಭ ಹಾರೈಸಿದರು. ಇದೇ ವೇಳೆ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಆಡಳಿತ ವ್ಯವಸ್ಥೆ ಮತ್ತು ಮೌಲ್ಯಯುತ ಶಿಕ್ಷಣದ ಕುರಿತು ಮೆಚ್ಚುಗೆಯನ್ನು ‌ವ್ಯಕ್ತಪಡಿಸಿದರು.

ಭೇಟಿಯ ವೇಳೆ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಯ ಸಾರ್ವಜನಿಕ ಸಂಪರ್ಕ ವಿಭಾಗದ ಅರವಿಂದ ಸೇರಿದಂತೆ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಮೇ 28: ಕೊಕ್ಕಡದಲ್ಲಿ ಜೇಸಿ ವಲಯ 15 ರ ವಲಯಾಡಳಿತ ಸಭೆ

Suddi Udaya

ಕು. ಸೌಜನ್ಯಳ ಕೊಲೆ ಪ್ರಕರಣ: ಆರೋಪಿಗಳ ಪತ್ತೆಗಾಗಿ ವಿಶ್ವ ಹಿಂದೂ ಪರಿಷತ್ ವತಿಯಿಂದ ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

Suddi Udaya

ಸಿ.ಎ ಪರೀಕ್ಷೆಯಲ್ಲಿ ನಾರಾವಿಯ ಕು.ಸಂಗೀತಾ ಜಿ. ಹೆಗ್ಡೆ ತೇರ್ಗಡೆ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕರಾಗಿ ಕಮಲ್ ತೇಜು ರಾಜಪೂತ್ ನೇಮಕ

Suddi Udaya

ಕಣಿಯೂರು ಗ್ರಾಮದ 03 ಜನ ವಿಶೇಷ ಚೇತನರಿಗೆ ಬ್ರೈಟ್ ಇಂಡಿಯಾ ಮದ್ದಡ್ಕ ವತಿಯಿಂದ ಸಾಧನ ಸಲಕರಣೆ ವಿತರಣೆ

Suddi Udaya

ಅಳದಂಗಡಿ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಒಕ್ಕೂಟದ ಸಭೆ

Suddi Udaya
error: Content is protected !!