September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಂಟರ ಯಾನೆ ನಾಡವರ ಸಂಘ ಬೆಳ್ತಂಗಡಿ ಮತ್ತು ಬಂಟರ ಸಂಘ ಉಜಿರೆ ವಲಯದ ಆಶ್ರಯದಲ್ಲಿ ಮಹಾಸಭೆ, ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ

ಉಜಿರೆ: ಬಂಟರ ಯಾನೆ ನಾಡವರ ಸಂಘ, ಬೆಳ್ತಂಗಡಿ ಮತ್ತು ಬಂಟರ ಸಂಘ ಉಜಿರೆ ವಲಯ ಇದರ ಆಶ್ರಯದಲ್ಲಿ ಮಹಾಸಭೆ, ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ ಸಮಾರಂಭವು ಮೇ 31 ರಂದು ಉಜಿರೆ ಶಾರದಾ ಮಂಟಪದಲ್ಲಿ ನಡೆಯಿತು.

ಅಧ್ಯಕ್ಷತೆಯನ್ನು ಬಂಟರ ಸಂಘ, ಉಜಿರೆ ವಲಯದ ಅಧ್ಯಕ್ಷೆ ವನಿತಾ ವಿ. ಶೆಟ್ಟಿ ವಹಿಸಿದ್ದರು. ಉದ್ಘಾಟನೆಯನ್ನು ತಾಲೂಕು ಬಂಟರ ಸಂಘದ ಅಧ್ಯಕ್ಷ ಜಯಂತ ಶೆಟ್ಟಿ ಭಂಡಾರಿಗುಡ್ಡೆ ನೆರವೇರಿಸಿದರು.

ಮುಖ್ಯ ಅತಿಥಿಗಳಾಗಿ ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಅಜಿತ್ ಜಿ. ಶೆಟ್ಟಿ ಕರ‍್ಯಾರು, ಎಸ್‌ಡಿಎಂ ನ್ಯಾಚುರೋಪತಿ ಯೋಗಿಕ್ ಸೈನ್ಸಸ್ ಪ್ರಾಧ್ಯಪಕ ಡಾ. ಬಾಲಕೃಷ್ಣ ಶೆಟ್ಟಿ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕು ಬಂಟರ ಸಂಘದ ನಿರ್ದೇಶಕ, ಬಂಟರ ಸಂಘ, ಉಜಿರೆ ವಲಯದ ಸಂಚಾಲಕ ಸಂಜೀವ ಶೆಟ್ಟಿ ಕುಂಠಿನಿ, ತಾಲೂಕು ಬಂಟರ ಸಂಘ ಮಹಿಳಾ ವಿಭಾಗದ ಅಧ್ಯಕ್ಷೆ ಜಯಲಕ್ಷ್ಮೀ ಎನ್. ಸಾಮಾನಿ ಕರಂಬಾರುಬೀಡು, ತಾಲೂಕು ಬಂಟರ ಸಂಘ ಯುವ ವಿಭಾಗದ ಅಧ್ಯಕ್ಷ ಪ್ರತೀಕ್ ಶೆಟ್ಟಿ ನೊಚ್ಚ, ಉಪಾಧ್ಯಕ್ಷ ರವೀಂದ್ರ ಶೆಟ್ಟಿ ಬಳಂಜ, ಉಪಾಧ್ಯಕ್ಷೆ ಶ್ರೀಮತಿ ಸುಜಯಾ ಡಿ. ಶೆಟ್ಟಿ, ಕಾರ್ಯದರ್ಶಿ ಸುದೇಶ್ ಶೆಟ್ಟಿ ಕುಂಠಿನಿ, ಕೋಶಾಧಿಕಾರಿ ಅಜಿತ್ ಕುಮಾರ್ ಕುಂಜರ್ಪ, ಜೊತೆ ಕಾರ್ಯದರ್ಶಿ ಮಿಥುನ್ ಶೆಟ್ಟಿ, ಅಜಿತ್‌ನಗರ, ಮಾತೃ ಸಂಘ ಮಂಗಳೂರು ಇದರ ನಿರ್ದೇಶಕರಾದ ಜಯರಾಮ್ ಭಂಡಾರಿ ಧರ್ಮಸ್ಥಳ, ಸುಜಾತಾ ಶೆಟ್ಟಿ ಪೆರಿಂಜೆ, ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.

Related posts

ಪಣೆಜಾಲು ಶ್ರೀ ಸ್ಟಾರ್ ಯುವಕ ಮಂಡಲ ಹಾಗೂ ಮಹಿಳಾ ಮಂಡಲದ ವತಿಯಿಂದ ಧನಸಹಾಯ ಹಸ್ತಾಂತರ

Suddi Udaya

ಬೆಳ್ತಂಗಡಿ: ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಉಮೈರಾ ಬಾನು ರವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಘನತೆಗೆ ದಕ್ಕೆ ತರುವಂತೆ ಚಿತ್ರಿಸಿ ಹರಿಯ ಬಿಟ್ಟವರ ಮೇಲೆ ಪೋಲಿಸ್ ದೂರು

Suddi Udaya

ತೋಟತ್ತಾಡಿ ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ನಾಗಬನದಲ್ಲಿ ಪಂಚಮಿ ಪ್ರಯುಕ್ತ ವಿಶೇಷ ಪೂಜೆ

Suddi Udaya

ಮಾಚಾರು: ಬದನಾಜೆ ಶ್ರೀ ಲಕ್ಷ್ಮೀ ನಾರಾಯಣ ಭಜನಾ ಮಂಡಳಿಯ 45ನೇ ವರ್ಷದ ಶಾರದಾ ಪೂಜೆ

Suddi Udaya

ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ದ.ಕ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕರ್ನಾಟಕ ಪದಗ್ರಹಣ ಸಮಾರಂಭದಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪುರಸ್ಕೃತೆ ಕನ್ನಾಜೆಯ ಸುರಕ್ಷಾ ಆಚಾರ್ಯರಿಗೆ ಸನ್ಮಾನ

Suddi Udaya
error: Content is protected !!