July 22, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವೈಬ್ರೆಂಟ್ ಕಾಲೇಜಿನ ವಿದ್ಯಾರ್ಥಿಗಳು ಐ ಐ ಟಿ ಪ್ರವೇಶಕ್ಕೆ ಅರ್ಹತೆ: ರಾಷ್ಟ್ರಮಟ್ಟದಲ್ಲಿ ಧನುಷ್ ಗುತ್ತಿ 95 ನೇ ರ‍್ಯಾಂಕ್

ಮೂಡುಬಿದಿರೆಯ ಕಲ್ಲಬೆಟ್ಟುವಿನಲ್ಲಿರುವ ನ್ಯೂ ವೈಬ್ರೆಂಟ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಜೆಇಇ ಅಡ್ವಾನ್ಸ್ಡ್ 2026ರ ಪರೀಕ್ಷೆಯಲ್ಲಿ ಅತ್ಯುತ್ತಮ ರ‍್ಯಾಂಕ್ ಪಡೆದು ಐ ಐ ಟಿ ಪ್ರವೇಶಕ್ಕೆ ಅರ್ಹರಾಗುವುದರೊಂದಿಗೆ ಕಾಲೇಜಿನ ಕೀರ್ತಿಯನ್ನು ರಾಷ್ಟ್ರಮಟ್ಟದಲ್ಲಿ ಹೆಚ್ಚಿಸಿದ್ದಾರೆ.

ವಿದ್ಯಾರ್ಥಿಗಳಾದ ಧನುಷ್ ಗುತ್ತಿ ಅಖಿಲ ಭಾರತ ಮಟ್ಟದಲ್ಲಿ ಕೆಟಗರಿ ವಿಭಾಗದಲ್ಲಿ 95ನೇ ರ‍್ಯಾಂಕ್ ಪಡೆದು ಸಾಧನೆ ಮಾಡಿರುತ್ತಾರೆ. ಆದಿತ್ಯ ಅನಿಲ್ ಕೆಂಚಣ್ಣನವರ್ 1803 ರ‍್ಯಾಂಕ್ , ಪ್ರಕೃತಿ ಶ್ರೀಧರ್ 1814 ರ‍್ಯಾಂಕ್ (ಕೆಟಗರಿ), ಗೌತಮ್ ಎ.ಎನ್ 3125 ರ್ಯಾಂಕ್ (ಕೆಟಗರಿ), ಸಮ್ಮಿತ್ ಎಚ್.ಎಸ್ 4372 ರ‍್ಯಾಂಕ್ , ಹಾಗೂ ಜೆಂಕರ್ ಎಂ 22318 ರ‍್ಯಾಂಕ್ ಪಡೆದು ಗಮನಾರ್ಹ ಸಾಧನೆ ಮಾಡುವ ಮೂಲಕ ಕಾಲೇಜಿನ ಸಾಧನಾ ಪಥಕ್ಕೆ ಮತ್ತೊಂದು ಗರಿ ಮೂಡಿಸಿದ್ದಾರೆ.

ದೇಶದ ಪ್ರತಿಷ್ಠಿತ ಇಂಜಿನಿಯರಿಂಗ್ ಪ್ರವೇಶ ಪರೀಕ್ಷೆಯಾದ ಜೆಇಇ ಅಡ್ವಾನ್ಸ್ಡ್‌ನಲ್ಲಿ ವಿದ್ಯಾರ್ಥಿಗಳು ದಾಖಲಿಸಿದ ಈ ಸಾಧನೆಯು ಅವರ ನಿರಂತರ ಪರಿಶ್ರಮ, ಶಿಸ್ತುಬದ್ಧ ಅಧ್ಯಯನ, ಪೋಷಕರ ಪ್ರೋತ್ಸಾಹ ಹಾಗೂ ಕಾಲೇಜಿನ ಗುಣಮಟ್ಟದ ಬೋಧನೆ ಮತ್ತು ತರಬೇತಿಯ ಪ್ರತಿಫಲವಾಗಿದೆ.

ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ವೃಂದ ಹಾಗೂ ಸಿಬ್ಬಂದಿ ವರ್ಗ ಹರ್ಷ ವ್ಯಕ್ತಪಡಿಸಿದ್ದು, ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ. ಮುಂದಿನ ದಿನಗಳಲ್ಲಿ ಭಾರತೀಯ ತಾಂತ್ರಿಕ ಶಿಕ್ಷಣ ಕ್ಷೇತ್ರದಲ್ಲಿ ಇನ್ನಷ್ಟು ಉನ್ನತ ಸಾಧನೆಗಳನ್ನು ಮಾಡಿ ಕಾಲೇಜು ಹಾಗೂ ರಾಜ್ಯದ ಹೆಸರನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯಲಿ ಎಂದು ಶುಭ ಹಾರೈಸಿದ್ದಾರೆ.

ನ್ಯೂ ವೈಬ್ರೆಂಟ್ ಪದವಿ ಪೂರ್ವ ಕಾಲೇಜು ಶೈಕ್ಷಣಿಕ ಕ್ಷೇತ್ರದಲ್ಲಿ ನಿರಂತರವಾಗಿ ಉತ್ತಮ ಫಲಿತಾಂಶಗಳನ್ನು ದಾಖಲಿಸುತ್ತಿದ್ದು, ಜೆಇಇ ಹಾಗೂ ನೀಟ್ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿ ನೀಡುವ ಮೂಲಕ ರಾಜ್ಯ ಮಟ್ಟದಲ್ಲಿ ತನ್ನದೇ ಆದ ಸ್ಥಾನವನ್ನು ಗಳಿಸಿದೆ. ಜೆಇಇ ಅಡ್ವಾನ್ಸ್ಡ್ 2026ರ ಈ ಸಾಧನೆಯು ಕಾಲೇಜಿನ ಗುಣಮಟ್ಟದ ಶಿಕ್ಷಣ ವ್ಯವಸ್ಥೆಗೆ ಮತ್ತೊಂದು ಸಾಕ್ಷಿಯಾಗಿದೆ.

Related posts

ಬಳಂಜ: ಛದ್ಮವೇಷ ಸ್ಪರ್ಧೆಯಲ್ಲಿ ಸತತ ಪ್ರಶಸ್ತಿ ಪಡೆದ ಬಳಂಜ ಶಾಲಾ ವಿದ್ಯಾರ್ಥಿ ಸಮ್ಯಕ್ ಜೈನ್

Suddi Udaya

ಮಾ.27 ಧರ್ಮಸ್ಥಳ ಪೊಲೀಸ್ ಠಾಣೆಯ ನೂತನ ಕಟ್ಟಡದ ಉದ್ಘಾಟನೆ

Suddi Udaya

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಆಶ್ರಯದಲ್ಲಿ ಕೋಟಿ ಚೆನ್ನಯ ಕ್ರೀಡಾಕೂಟ ಧರ್ಮಸ್ಥಳದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ ಮತ್ತು ಸಮಾಲೋಚನಾ ಸಭೆ

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರಿ ಮಕ್ಕಳ ಭಜನಾ ಸಮಿತಿ ವತಿಯಿಂದ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಗೌರವ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನಾ ಸಮಾರಂಭ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಸನ್ಮಾನ

Suddi Udaya
error: Content is protected !!