July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರದ ಸಾಧಕ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು ರವರಿಗೆ ಗೌರವ ಸಮರ್ಪಣೆ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಭಾ.ಜ.ಪ ಉಪಾಧ್ಯಕ್ಷ, ಕರ್ನಾಟಕ ಸರ್ಕಾರದ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷರಾದ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು ಅವರ ದೇರಳಕಟ್ಟೆಯ ನಿವಾಸಕ್ಕೆ ಭೇಟಿ ನೀಡಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಘುಮಂತು ಕಾರ್ಯ ದ ಚಟುವಟಿಕೆ ಕುರಿತು ಮಾಹಿತಿ ವಿನಿಮಯ ಮಾಡಿಕೊಳ್ಳಲಾಯಿತು.

ಶಿಕ್ಷಣ, ರಾಜಕೀಯ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ (ಅಲೆಮಾರಿ ಹಾಗೂ ಅರೆ ಅಲೆಮಾರಿ ಸಮುದಾಯದ) ರವೀಂದ್ರ ಶೆಟ್ಟಿ ಅವರು ಸಲ್ಲಿಸುತ್ತಿರುವ ಗಣನೀಯ ಸೇವೆಯನ್ನು ಗುರುತಿಸಿ, ಅವರಿಗೆ ಶಾಲು ಹೊದಿಸಿ, ಭಗವದ್ಗೀತೆ ನೀಡಿ ಆತ್ಮೀಯವಾಗಿ ಗೌರವಿಸಿಸಲಾಯಿತು.

ಈ ಸಂದರ್ಭದಲ್ಲಿ ರವೀಂದ್ರ ಶೆಟ್ಟಿ ಅವರು ತಾನು ಬರೆದ ಅಲೆಮಾರಿ ಜೀವನ ಪುಸ್ತಕವನ್ನು ನೀಡಿ ಮಾತನಾಡುತ್ತಾ ಸಮಾಜದ ಪ್ರೀತಿ ಮತ್ತು ಗೌರವ ನನ್ನ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸಿದೆ. ಗ್ರಾಮೀಣ ಭಾಗದ ಶಿಕ್ಷಣ ಹಾಗೂ ಅಲೆಮಾರಿ ಹಾಗೂ ಅರೆ ಅಲೆಮಾರಿ ಜನಾಂಗಗಳ ಅಭಿವೃದ್ಧಿಗಾಗಿ ನನ್ನ ಸೇವೆ ನಿರಂತರವಾಗಿರಲಿದೆ ಎಂದು ಕೃತಜ್ಞತೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಘುಮಂತು ಕಾರ್ಯ ವಿಭಾಗ ಸಂಯೋಜಕ ಸುದರ್ಶನ್ ಕನ್ಯಾಡಿ, ಧಾರ್ಮಿಕ ಮುಖಂಡರಾದ ಕಿರಣ್ ಚಂದ್ರ ಪುಷ್ಪಗಿರಿ, ದೀಕ್ಷಿತ್ ಡಿ ವಿ ಧರ್ಮಸ್ಥಳ, ಪ್ರಮೋದ್ ದಿಡುಪೆ,ಶರತ್ ಶೆಟ್ಟಿ,ಕರುಣಾಕರ ಮಾಚಾರು ಹಾಗೂ ಪ್ರಸಾದ್ ಪಿಲಿಗೂಡು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಪ್ರಜಾಪ್ರಭುತ್ವದ ದೊಡ್ಡ ಹಬ್ಬದಲ್ಲಿ ಸಂಭ್ರಮಸಿದ ಬಳಂಜ- ನಾಲ್ಕೂರಿನ ಮತದಾರರು ಬಿರುಸಿನ ಮತದಾನ, ಬೆಳಿಗ್ಗೆಯಿಂದ ಸರತಿ ಸಾಲಿನಲ್ಲಿ ನಿಂತು ಹಕ್ಕು ಚಲಾವಣೆ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್‌ನ ಆಶ್ರಯ ಸಮಿತಿಗೆ ಸದಸ್ಯರ ನೇಮಕ

Suddi Udaya

ಡೆಂಗ್ಯೂ ಜ್ವರದಿಂದ ಬಳಲಿ ವಿಶ್ರಾಂತಿಯಲ್ಲಿದ್ದ ಬದ್ಯಾರು ನಿವಾಸಿ ದಿವಾಕರ ಶೆಟ್ಟಿ ಅಸ್ವಸ್ಥಗೊಂಡು ನಿಧನ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಆಟಿಡೊಂಜಿ ದಿನ

Suddi Udaya

ಶಿಬಾಜೆ ಶ್ರೀ ಕ್ಷೇತ್ರ ಮೊಂಟೆತ್ತಡ್ಕ ದುರ್ಗಾಪರಮೇಶ್ವರೀ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ:ಧಾರ್ಮಿಕ ಸಭೆ

Suddi Udaya
error: Content is protected !!