24.2 C
ಪುತ್ತೂರು, ಬೆಳ್ತಂಗಡಿ
September 2, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕುವೆಟ್ಟು ಸ.ಉ.ಹಿ.ಪ್ರಾ. ಶಾಲಾ ಪ್ರಾರಂಭೋತ್ಸವ

ಕುವೆಟ್ಟು: ಸ.ಉ.ಹಿ.ಪ್ರಾ. ಶಾಲೆ ಕುವೆಟ್ಟು ಇಲ್ಲಿ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ಜರುಗಿತು.

ವಿದ್ಯಾರ್ಥಿಗಳನ್ನು ಶಾಲಾ ಅಧ್ಯಾಪಕ ವೃಂದದವರು ಬಲೂನ್ ಮತ್ತು ಬ್ಯಾಡ್ಜ್ ನೀಡಿ, ಎಸ್ ಕೆ ಎಫ್ ಮದ್ದಡ್ಕ ಇವರು ಸಿಹಿ ತಿಂಡಿ ನೀಡಿ ಸ್ವಾಗತಿಸಿದರು.

ಸಭಾ ಕಾರ್ಯಕ್ರಮವನ್ನು ಪುಟಾಣಿಗಳು ದೀಪ ಬೆಳಗಿಸಿ ಉದ್ಘಾಟಿಸಿದರು. ಶಾಲಾ ಎಸ್ ಡಿ ಎಂ ಸಿ ಉಪಾಧ್ಯಕ್ಷೆ ಶ್ರೀಮತಿ ಲಾವಣ್ಯ ಶೆಟ್ಟಿ ಅರ್ಕಜೆ ಅಧ್ಯಕ್ಷತೆ ವಹಿಸಿದ್ದರು. ನಿರ್ಗಮಿತ ಎಸ್ ಡಿ ಎಂ ಸಿ ಅಧ್ಯಕ್ಷ ಸಿರಾಜ್ ಎಂ ಚಿಲಿಂಬಿ ಹಾಗೂ ಎಸ್ ಡಿ ಎಂ ಸಿ ಸದಸ್ಯರು. ಮದ್ದಡ್ಕ ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಸುಶೀಲ, ಆರೋಗ್ಯ ಕಾರ್ಯಕರ್ತೆ ಶ್ರೀಮತಿ ಪ್ರೀತಿ, ಆಶಾ ಕಾರ್ಯಕರ್ತೆ ಶ್ರೀಮತಿ ಜಯಂತಿ, ಶಾಲಾ ಮುಖ್ಯ ಶಿಕ್ಷಕ ಭಾಸ್ಕರ ಉಪಸ್ಥಿತರಿದ್ದರು.


ಕಾರ್ಯಕ್ರಮದಲ್ಲಿ ಸರ್ಕಾರ/ಇಲಾಖೆ ನೀಡಿದ ಉಚಿತ ಪಠ್ಯಪುಸ್ತಕಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಲಾಯಿತು. ಕ್ರೀಡೆಯಲ್ಲಿ ಸಾಧನೆಗೈದ ವಿದ್ಯಾರ್ಥಿಯನ್ನು ನಗದು ಹಾಗೂ ಟ್ರೋಫಿಯನ್ನು ನೀಡಿ ಗೌರವಿಸಲಾಯಿತು. ಆರೋಗ್ಯ ಕಾರ್ಯಕರ್ತೆ ಶ್ರೀಮತಿ ಪ್ರೀತಿಯವರು ಡೆಂಗ್ಯೂ ಹಾಗೂ ಮಲೇರಿಯ ಕಾಯಿಲೆಗಳ ಕುರಿತು ಮಾಹಿತಿ ನೀಡಿದರು. ಮುಖ್ಯ ಶಿಕ್ಷಕ ಭಾಸ್ಕರ ಸ್ವಾಗತಿಸಿ ಶೈಕ್ಷಣಿಕ ವರ್ಷದ ಮಾಹಿತಿ ನೀಡಿದರು. ಹಿರಿಯ ಶಿಕ್ಷಕಿ ಫಿಲೋಮಿನಾ ಲೋಬೋ ಕೃತಜ್ಞತೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಶಾಲಾ ಅಧ್ಯಾಪಕರು ಉಪಸ್ಥಿತರಿದ್ದರು.

Related posts

ಕುಂಠಿನಿ ಮುಹಿಯ್ಯುದ್ಧೀನ್ ಅರಬಿಕ್ ಮದರಸಕ್ಕೆ ಪಬ್ಲಿಕ್ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ

Suddi Udaya

ಡಾ. ಡಿ. ವೀರೇಂದ್ರ ಹೆಗ್ಗಡೆ ಪರ ಪ್ರತಿಬಂಧಕಾದೇಶ ಜಾರಿಗೊಳಿಸುವಂತೆ ರಾಜ್ಯ ಸರಕಾರಕ್ಕೆ ಹೈಕೋರ್ಟ್‌ ಸೂಚನೆ

Suddi Udaya

ಉಜಿರೆ ರುಡ್‌ಸೆಟ್ ಸಂಸ್ಥೆಯ 2023-24 ನೇ ಸಾಲಿನ ವಾರ್ಷಿಕ ವರದಿ ಬಿಡುಗಡೆ

Suddi Udaya

ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರವೇಶಕ್ಕೆ ಅರ್ಜಿ ಆಹ್ವಾನ

Suddi Udaya

ಪದ್ಮುoಜ : ಬಂದಾರು, ಮೊಗ್ರು,ಕಣಿಯೂರು, ಉರುವಾಲು, ಇಳoತಿಲ ಶಕ್ತಿಕೇಂದ್ರ ಚುನಾವಣಾ ಅವಲೋಕನ ಸಭೆ

Suddi Udaya

ಬೆಳ್ತಂಗಡಿ ವಾಣಿ ಪದವಿ ಪೂರ್ವ ಕಾಲೇಜಿಗೆ ರಾಷ್ಟ್ರೀಯ ಸೇವಾ ಯೋಜನೆಯ ವಿಭಾಗೀಯ ಅಧಿಕಾರಿಯ ಭೇಟಿ

Suddi Udaya
error: Content is protected !!