ವೇಣೂರು: ಸರಕಾರಿ ಪ್ರೌಢಶಾಲೆ ವೇಣೂರು ಇಲ್ಲಿನ ನೀರಿನ ಸಮಸ್ಯೆಯನ್ನು ತಿಳಿದು ತಕ್ಷಣವೇ ಸಕಾರಾತ್ಮಕವಾಗಿ ಸ್ಪಂದಿಸಿ ಬೋರುವೆಲ್ ವ್ಯವಸ್ಥೆಯನ್ನು ಮಾಡಿಕೊಟ್ಟ ಶಾಸಕ ಹರೀಶ್ ಪೂಂಜರವರನ್ನು ಶಾಲೆಯ ವತಿಯಿಂದ ಗೌರವಿಸಿ,ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಉಪ ಪ್ರಾಂಶುಪಾಲರಾದ ವೆಂಕಟೇಶ್ ತುಳಪುಲೆ, ಕಾರ್ಯಾಧ್ಯಕ್ಷರಾದ ರಾಜೇಶ್ ಪೂಜಾರಿ ಮೂಡುಕೋಡಿ ಉಪಸ್ಥಿತರಿದ್ದರು.












