July 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿಗೆ ಎರಡು ನ್ಯಾಯಾಧೀಶರನ್ನು ನೇಮಕಗೊಳಿಸಿ ಹೈಕೋರ್ಟ್ ಆದೇಶ

ಬೆಳ್ತಂಗಡಿ: ಕಳೆದ ಆರು ತಿಂಗಳಿನಿಂದ ಖಾಲಿಯಾಗಿದ್ದ ಬೆಳ್ತಂಗಡಿ ನ್ಯಾಯಾಲಯದ ಎರಡು ನ್ಯಾಯಾಧೀಶ ಹುದ್ದೆಗಳನ್ನು ಭರ್ತಿಗೊಳಿಸಿ ಹೈಕೋರ್ಟ್ ಆದೇಶ ನೀಡಿದ್ದು ಪ್ರಧಾನ ಸಿವಿಲ್ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಧೀಶರಾಗಿ ಮಂಗಳೂರಿನಲ್ಲಿ ನ್ಯಾಯಾಧೀಶರಾಗಿ ಸೇವೆ ಸಲ್ಲಿಸುತ್ತಿದ್ದ ರಾಮಲಿಂಗಪ್ಪ ರವರನ್ನು ನೇಮಕಗೊಳಿಸಿ ಆದೇಶ ಹೊರಡಿಸಿದ್ದಾರೆ.

ಅದೇ ರೀತಿ ಹೆಚ್ಚುವರಿ ಸಿವಿಲ್ ಮತ್ತು ಜೆ ಎಂ ಎಫ್ ಸಿ ನ್ಯಾಯಾಧೀಶರಾಗಿ ಹೊಸದಾಗಿ ನ್ಯಾಯಾಧೀಶರಾಗಿ ನೇಮಕಗೊಂಡು ತರಬೇತಿ ಪೂರೈಸಿದ ಶಶಾಂಕ್ ನಾಗೇಂದ್ರ ಭಟ್ ರವರನ್ನು ನೇಮಕಗೊಳಿಸಿ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಎಂ. ಚಂದ್ರಶೇಖರ ರೆಡ್ಡಿ ಆದೇಶ ಹೊರಡಿಸಿದ್ದಾರೆ.

ಬೆಳ್ತಂಗಡಿ ನ್ಯಾಯಾಲಯಕ್ಕೆ ನ್ಯಾಯಾಧೀಶರನ್ನು ನೇಮಕಗೊಳಿಸುವಂತೆ ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷರಾದ ಅಲೋಶಿಯಸ್ ಎಸ್ ಲೋಬೋ ಮತ್ತು ಪದಾಧಿಕಾರಿಗಳು ಹೈಕೋರ್ಟ್ ನ್ಯಾಯಮೂರ್ತಿಗಳು ಮತ್ತು ದ ಕ ಜಿಲ್ಲಾ ಆಡಳಿತಾತ್ಮಕ ನ್ಯಾಯಾಧೀಶರಾದ ಎಚ್ ಟಿ ನರೇಂದ್ರ ಪ್ರಸಾದ್ ರವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದರು.

Related posts

ನಿಡ್ಲೆ : ಕುದ್ರಾಯ ಓಡದಕೊಟ್ಯದಲ್ಲಿ ರಸ್ತೆಗೆ ಅಡ್ಡಲಾಗಿ ಬಿದ್ದ ಮರ

Suddi Udaya

ಕು.ಸೌಜನ್ಯ ಪ್ರಕರಣ: ಮರು ತನಿಖೆಗೆ ಒತ್ತಾಯಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ: ಸೆ. 8ರಂದು (ಇಂದು)ಹೈಕೋರ್ಟಿನಲ್ಲಿ ವಿಚಾರಣೆ

Suddi Udaya

ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ರಘು ಸಿ ರವರನ್ನು ಭೇಟಿ ಮಾಡಿದ ಬೆಳ್ತಂಗಡಿ ಪ.ಪಂ. ಹಾಗೂ ಗ್ರಾ.ಪಂ. ಪೌರ ಕಾರ್ಮಿಕರ ಸಂಘದ ಪದಾಧಿಕಾರಿಗಳು

Suddi Udaya

ಉಜಿರೆ ಶ್ರೀ ಧ.ಮಂ.ಪ.ಪೂ. ಕಾಲೇಜಿನ ವಾಣಿಜ್ಯ ವಿಭಾಗ ವತಿಯಿಂದ ಪ್ರಥಮ ದ್ವಿತೀಯ ವಿಭಾಗದ ವಿದ್ಯಾರ್ಥಿಗಳಿಗೆ ಸಿ.ಎ ಓರಿಯೆಂಟಷನ್  ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಹಳೆಕೋಟೆ ಡಿಸ್ಕೌಂಟ್ ಸೇಲ್ ಬಟ್ಟೆ ಮತ್ತು ಚಪ್ಪಲಿ ಅಂಗಡಿಯವರಿಂದ ವಯನಾಡ್ ನೆರೆ ಸಂತ್ರಸ್ತರಿಗೆ ದಿ‌ನಬಳಕೆ ವಸ್ತುಗಳ ಸಹಾಯಹಸ್ತ

Suddi Udaya

ರಾಜ್ಯಮಟ್ಟದ ಕರಾಟೆ: ಕಾಯರ್ತಡ್ಕ ದಿವ್ಯಜ್ಯೋತಿ ಆಂ.ಮಾ. ಶಾಲೆಯ ಅಡ್ಲಿನ್ ಎಲಿಜಬೆತ್ ಜೆರಿನ್ ಗೆ ಚಿನ್ನದ ಪದಕ

Suddi Udaya
error: Content is protected !!