30.9 C
ಪುತ್ತೂರು, ಬೆಳ್ತಂಗಡಿ
June 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿಗೆ ಎರಡು ನ್ಯಾಯಾಧೀಶರನ್ನು ನೇಮಕಗೊಳಿಸಿ ಹೈಕೋರ್ಟ್ ಆದೇಶ

ಬೆಳ್ತಂಗಡಿ: ಕಳೆದ ಆರು ತಿಂಗಳಿನಿಂದ ಖಾಲಿಯಾಗಿದ್ದ ಬೆಳ್ತಂಗಡಿ ನ್ಯಾಯಾಲಯದ ಎರಡು ನ್ಯಾಯಾಧೀಶ ಹುದ್ದೆಗಳನ್ನು ಭರ್ತಿಗೊಳಿಸಿ ಹೈಕೋರ್ಟ್ ಆದೇಶ ನೀಡಿದ್ದು ಪ್ರಧಾನ ಸಿವಿಲ್ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಧೀಶರಾಗಿ ಮಂಗಳೂರಿನಲ್ಲಿ ನ್ಯಾಯಾಧೀಶರಾಗಿ ಸೇವೆ ಸಲ್ಲಿಸುತ್ತಿದ್ದ ರಾಮಲಿಂಗಪ್ಪ ರವರನ್ನು ನೇಮಕಗೊಳಿಸಿ ಆದೇಶ ಹೊರಡಿಸಿದ್ದಾರೆ.

ಅದೇ ರೀತಿ ಹೆಚ್ಚುವರಿ ಸಿವಿಲ್ ಮತ್ತು ಜೆ ಎಂ ಎಫ್ ಸಿ ನ್ಯಾಯಾಧೀಶರಾಗಿ ಹೊಸದಾಗಿ ನ್ಯಾಯಾಧೀಶರಾಗಿ ನೇಮಕಗೊಂಡು ತರಬೇತಿ ಪೂರೈಸಿದ ಶಶಾಂಕ್ ನಾಗೇಂದ್ರ ಭಟ್ ರವರನ್ನು ನೇಮಕಗೊಳಿಸಿ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಎಂ. ಚಂದ್ರಶೇಖರ ರೆಡ್ಡಿ ಆದೇಶ ಹೊರಡಿಸಿದ್ದಾರೆ.

ಬೆಳ್ತಂಗಡಿ ನ್ಯಾಯಾಲಯಕ್ಕೆ ನ್ಯಾಯಾಧೀಶರನ್ನು ನೇಮಕಗೊಳಿಸುವಂತೆ ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷರಾದ ಅಲೋಶಿಯಸ್ ಎಸ್ ಲೋಬೋ ಮತ್ತು ಪದಾಧಿಕಾರಿಗಳು ಹೈಕೋರ್ಟ್ ನ್ಯಾಯಮೂರ್ತಿಗಳು ಮತ್ತು ದ ಕ ಜಿಲ್ಲಾ ಆಡಳಿತಾತ್ಮಕ ನ್ಯಾಯಾಧೀಶರಾದ ಎಚ್ ಟಿ ನರೇಂದ್ರ ಪ್ರಸಾದ್ ರವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದರು.

Related posts

ವೇಣೂರು: ಹಂದೇವು ನಿವಾಸಿ ಕಲ್ಯಾಣಿ ದೇವಾಡಿಗ ನಿಧನ

Suddi Udaya

ಬಂದಾರು : ಒಂದೇ ವರ್ಷದ ಅಡಿಕೆ ಸಸಿಯಲ್ಲಿ ಮೂಡಿದ ಚೊಚ್ಚಲ ಹಿಂಗಾರ; ಶಾಲಾ ತೋಟದಲ್ಲಿ ಹೀಗೊಂದು ಪ್ರಕೃತಿ ವೈಚಿತ್ರ್ಯ

Suddi Udaya

ವೇಣೂರು ಶ್ರೀ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕಕ್ಕೆ ಮೂಲಸೌಕರ್ಯ ಒದಗಿಸಲು ಅನುದಾನ ಮಂಜೂರು ಮಾಡುವಂತೆ ಸಚಿವ ದಿನೇಶ್ ಗುಂಡೂರಾವ್ ರಿಗೆ ಶಾಸಕ ಹರೀಶ್ ಪೂಂಜರಿಂದ ಮನವಿ

Suddi Udaya

ಮಹಿಳೆಯರ ವಿಭಾಗದ ಮ್ಯಾಟ್ ಕಬಡ್ಡಿ ಪಂದ್ಯಾಟ: ಶಿವಾಜಿ ಫ್ರೆಂಡ್ಸ್ ಶಿವನಗರ-ಬಂದಾರು ತಂಡ ದ್ವಿತೀಯ ಪ್ರಶಸ್ತಿ

Suddi Udaya

ಗೇರುಕಟ್ಟೆ ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ. 8.08 ಲಕ್ಷ ಲಾಭ, ಶೇ. 8 ಡಿವಿಡೆಂಟ್ ಘೋಷಣೆ

Suddi Udaya

ನಾಳೆಯೂ(ಜು.26) ಶಾಲೆ, ಕಾಲೇಜುಗಳಿಗೆ ರಜೆ: ದ.ಕ ಜಿಲ್ಲಾಧಿಕಾರಿ ಘೋಷಣೆ

Suddi Udaya
error: Content is protected !!