25 C
ಪುತ್ತೂರು, ಬೆಳ್ತಂಗಡಿ
June 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕುವೆಟ್ಟು ಸ.ಉ.ಹಿ.ಪ್ರಾ. ಶಾಲಾ ಪ್ರಾರಂಭೋತ್ಸವ

ಕುವೆಟ್ಟು: ಸ.ಉ.ಹಿ.ಪ್ರಾ. ಶಾಲೆ ಕುವೆಟ್ಟು ಇಲ್ಲಿ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ಜರುಗಿತು.

ವಿದ್ಯಾರ್ಥಿಗಳನ್ನು ಶಾಲಾ ಅಧ್ಯಾಪಕ ವೃಂದದವರು ಬಲೂನ್ ಮತ್ತು ಬ್ಯಾಡ್ಜ್ ನೀಡಿ, ಎಸ್ ಕೆ ಎಫ್ ಮದ್ದಡ್ಕ ಇವರು ಸಿಹಿ ತಿಂಡಿ ನೀಡಿ ಸ್ವಾಗತಿಸಿದರು.

ಸಭಾ ಕಾರ್ಯಕ್ರಮವನ್ನು ಪುಟಾಣಿಗಳು ದೀಪ ಬೆಳಗಿಸಿ ಉದ್ಘಾಟಿಸಿದರು. ಶಾಲಾ ಎಸ್ ಡಿ ಎಂ ಸಿ ಉಪಾಧ್ಯಕ್ಷೆ ಶ್ರೀಮತಿ ಲಾವಣ್ಯ ಶೆಟ್ಟಿ ಅರ್ಕಜೆ ಅಧ್ಯಕ್ಷತೆ ವಹಿಸಿದ್ದರು. ನಿರ್ಗಮಿತ ಎಸ್ ಡಿ ಎಂ ಸಿ ಅಧ್ಯಕ್ಷ ಸಿರಾಜ್ ಎಂ ಚಿಲಿಂಬಿ ಹಾಗೂ ಎಸ್ ಡಿ ಎಂ ಸಿ ಸದಸ್ಯರು. ಮದ್ದಡ್ಕ ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಸುಶೀಲ, ಆರೋಗ್ಯ ಕಾರ್ಯಕರ್ತೆ ಶ್ರೀಮತಿ ಪ್ರೀತಿ, ಆಶಾ ಕಾರ್ಯಕರ್ತೆ ಶ್ರೀಮತಿ ಜಯಂತಿ, ಶಾಲಾ ಮುಖ್ಯ ಶಿಕ್ಷಕ ಭಾಸ್ಕರ ಉಪಸ್ಥಿತರಿದ್ದರು.


ಕಾರ್ಯಕ್ರಮದಲ್ಲಿ ಸರ್ಕಾರ/ಇಲಾಖೆ ನೀಡಿದ ಉಚಿತ ಪಠ್ಯಪುಸ್ತಕಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಲಾಯಿತು. ಕ್ರೀಡೆಯಲ್ಲಿ ಸಾಧನೆಗೈದ ವಿದ್ಯಾರ್ಥಿಯನ್ನು ನಗದು ಹಾಗೂ ಟ್ರೋಫಿಯನ್ನು ನೀಡಿ ಗೌರವಿಸಲಾಯಿತು. ಆರೋಗ್ಯ ಕಾರ್ಯಕರ್ತೆ ಶ್ರೀಮತಿ ಪ್ರೀತಿಯವರು ಡೆಂಗ್ಯೂ ಹಾಗೂ ಮಲೇರಿಯ ಕಾಯಿಲೆಗಳ ಕುರಿತು ಮಾಹಿತಿ ನೀಡಿದರು. ಮುಖ್ಯ ಶಿಕ್ಷಕ ಭಾಸ್ಕರ ಸ್ವಾಗತಿಸಿ ಶೈಕ್ಷಣಿಕ ವರ್ಷದ ಮಾಹಿತಿ ನೀಡಿದರು. ಹಿರಿಯ ಶಿಕ್ಷಕಿ ಫಿಲೋಮಿನಾ ಲೋಬೋ ಕೃತಜ್ಞತೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಶಾಲಾ ಅಧ್ಯಾಪಕರು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ: ಕಾರನ್ನು ಅಡ್ಡಗಟ್ಟಿ ಚಾಲಕ ಹಾಗೂ ಕಾರಿನಲ್ಲಿದ್ದ ಮಹಿಳೆಯರ ಮೇಲೆ ಹಲ್ಲೆ: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬಂಟರ ಯಾನೆ ನಾಡವರ ಮಾತೃ ಸಂಘ ಸಂಚಾಲಕರಾಗಿ ಜಯರಾಮ ಭಂಡಾರಿ ಹಾಗೂ ಸಹ ಸಂಚಾಲಕರಾಗಿ ಕಿರಣ್ ಕುಮಾರ್ ಶೆಟ್ಟಿ : ನಾಮ ನಿರ್ದೇಶನ ನಿರ್ದೇಶಕರಾಗಿ ಜಯಂತ ಶೆಟ್ಟಿ ಹಾಗೂ ಅಜಿತ್ ಜಿ. ಶೆಟ್ಟಿ, ಪುಷ್ಪರಾಜ್ ಶೆಟ್ಟಿ ಆಯ್ಕೆ

Suddi Udaya

ಧರ್ಮಸ್ಥಳ ಕ್ಷೇತ್ರದಿಂದ ಅಯೋಧ್ಯೆಗೆ ಬೆಳ್ಳಿಯ ಪೂಜಾ ಪರಿಕರ ಸಮರ್ಪಣೆ

Suddi Udaya

ಮಾಲಾಡಿ: ವಿದ್ಯುತ್ ಶಾರ್ಟ್ ನಿಂದ ಮನೆಯಲ್ಲಿ ಬೆಂಕಿ: ಸೋತ್ತುಗಳು ಬೆಂಕಿಗಾಹುತಿ

Suddi Udaya

ಜ18-ಫೆ 01: ಬೆಳ್ತಂಗಡಿ ಹಿಂದೂ ಸಂಗಮ ಆಯೋಜನ ಸಮಿತಿಯಿಂದ ತಾಲೂಕಿನ ಏಳು ಪ್ರಮುಖ ಕೇಂದ್ರಗಳಲ್ಲಿ ಹಿಂದೂ ಸಂಗಮ‌ ಕಾರ್ಯಕ್ರಮ

Suddi Udaya

ಉಜಿರೆ: ಶ್ರೀ. ಧ.ಮಂ. ಆಂಗ್ಲಮಾಧ್ಯಮ ಶಾಲೆಯಲ್ಲಿ ಕಾನೂನು ಮಾಹಿತಿ ಶಿಬಿರ

Suddi Udaya
error: Content is protected !!