24.2 C
ಪುತ್ತೂರು, ಬೆಳ್ತಂಗಡಿ
September 2, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ಕೊರಂಜ ಮತ್ತು ಮಚ್ಚಿನ ಶಾಲೆಗಳು ಕರ್ನಾಟಕ ಪಬ್ಲಿಕ್ ಸ್ಕೂಲ್ ಆಗಿ ಪರಿವರ್ತನೆ: ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ : ಕೊರಂಜ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಕರ್ನಾಟಕ ಪಬ್ಲಿಕ್ ಸ್ಕೂಲ್ ಗೇರುಕಟ್ಟೆಯಾಗಿ ಹಾಗೂ ಮಚ್ಚಿನ ಸರ್ಕಾರಿ ಪ್ರೌಢಶಾಲೆಯನ್ನು ಕರ್ನಾಟಕ ಪಬ್ಲಿಕ್ ಸ್ಕೂಲ್ ಮಚ್ಚಿನವನ್ನಾಗಿ ಪರಿವರ್ತಿಸಲು ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ ಎಂದು ಶಾಸಕ ಹರೀಶ್ ಪೂಂಜ ಹರ್ಷ ವ್ಯಕ್ತಪಡಿಸಿದ್ದಾರೆ.

ಈ ಭಾಗದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ಗ್ರಾಮೀಣ ಮಟ್ಟದಲ್ಲಿಯೇ ಒದಗಿಸುವ ಉದ್ದೇಶದಿಂದ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಸ್ಕೂಲ್‌ಗಳಾಗಿ ಮೇಲ್ದರ್ಜೆಗೇರಿಸಲು ನಿರಂತರ ಪ್ರಯತ್ನ ಮಾಡಲಾಗಿತ್ತು. ಸರ್ಕಾರದ ಈ ಆದೇಶದಿಂದ ವಿದ್ಯಾರ್ಥಿಗಳಿಗೆ ಒಂದೇ ಆವರಣದಲ್ಲಿ ಸಮಗ್ರ ಶಿಕ್ಷಣ ಸೌಲಭ್ಯ, ಉತ್ತಮ ಶೈಕ್ಷಣಿಕ ವಾತಾವರಣ ಹಾಗೂ ಭವಿಷ್ಯಕ್ಕೆ ಪೂರಕವಾದ ಅವಕಾಶಗಳು ದೊರೆಯಲಿವೆ ಎಂದು ಶಾಸಕರು ತಿಳಿಸಿದ್ದಾರೆ.

ಈ ಮಹತ್ವದ ಬೇಡಿಕೆಯನ್ನು ಪರಿಗಣಿಸಿ ಆದೇಶ ಹೊರಡಿಸಿದ ಮುಖ್ಯಮಂತ್ರಿಗಳಿಗೆ ಶಿಕ್ಷಣ ಸಚಿವರಿಗೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಕ್ಕೆ ಶಾಸಕ ಹರೀಶ್ ಪೂಂಜ ಅವರು ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸಿದ್ದಾರೆ.

ಇದು ಗ್ರಾಮೀಣ ಶಿಕ್ಷಣ ಕ್ಷೇತ್ರಕ್ಕೆ ಹೊಸ ದಿಕ್ಕು ನೀಡಲಿದ್ದು, ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಗೆ ಪೂರಕವಾಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಎಸ್ ಡಿ ಯಂ ಪಾಲಿಟೆಕ್ನಿಕ್ – ಉಚಿತ ದಂತ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ

Suddi Udaya

ಮುಂಡಾಜೆ ಕೀರ್ತನಾ ಕಲಾ ತಂಡದ ವತಿಯಿಂದ ನಿವೃತ್ತ ಚಂದ್ರಕಾಂತ ಪ್ರಭು ರಿಗೆ ಅಭಿನಂದನೆ ಕಾರ್ಯಕ್ರಮ

Suddi Udaya

ಡಾ|| ಹೇಮಾವತಿ ವೀ. ಹೆಗ್ಗಡೆಯವರ ಹುಟ್ಟುಹಬ್ಬ: ಶ್ರೀ ಕ್ಷೇ ಧ ಗ್ರಾ ಯೋಜನೆಯ ಅಳದಂಗಡಿ ವಲಯದ ವಾತ್ಸಲ್ಯ ಕುಟುಂಬದ ಸದಸ್ಯರಿಗೆ ಹಣ್ಣು ಹಂಪಲು ವಿತರಣೆ

Suddi Udaya

ಪುಂಜಾಲಕಟ್ಟೆ ಎಸ್.ಡಿ.ಪಿ.ಐ ಪಕ್ಷದ ಸಂಸ್ಥಾಪಣಾ ದಿನಾಚರಣೆ

Suddi Udaya

ಡಿ.5 : ಬೆಳ್ತಂಗಡಿ ಹಾಗೂ ಧರ್ಮಸ್ಥಳ ವಿದ್ಯುತ್ ಉಪಕೇಂದ್ರದ ಫೀಡರ್ ಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya

ಕಳೆಂಜ: ನಡುಜಾರು ಸ.ಕಿ.ಪ್ರಾ. ಶಾಲಾ ಮಕ್ಕಳಿಗೆ ರಾಜೇಶ್ ನಿಡ್ಡಾಜೆ ಯವರಿಂದ ಸಮವಸ್ತ್ರ ವಿತರಣೆ

Suddi Udaya
error: Content is protected !!