24.2 C
ಪುತ್ತೂರು, ಬೆಳ್ತಂಗಡಿ
September 2, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿಗೆ ಎರಡು ನ್ಯಾಯಾಧೀಶರನ್ನು ನೇಮಕಗೊಳಿಸಿ ಹೈಕೋರ್ಟ್ ಆದೇಶ

ಬೆಳ್ತಂಗಡಿ: ಕಳೆದ ಆರು ತಿಂಗಳಿನಿಂದ ಖಾಲಿಯಾಗಿದ್ದ ಬೆಳ್ತಂಗಡಿ ನ್ಯಾಯಾಲಯದ ಎರಡು ನ್ಯಾಯಾಧೀಶ ಹುದ್ದೆಗಳನ್ನು ಭರ್ತಿಗೊಳಿಸಿ ಹೈಕೋರ್ಟ್ ಆದೇಶ ನೀಡಿದ್ದು ಪ್ರಧಾನ ಸಿವಿಲ್ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಧೀಶರಾಗಿ ಮಂಗಳೂರಿನಲ್ಲಿ ನ್ಯಾಯಾಧೀಶರಾಗಿ ಸೇವೆ ಸಲ್ಲಿಸುತ್ತಿದ್ದ ರಾಮಲಿಂಗಪ್ಪ ರವರನ್ನು ನೇಮಕಗೊಳಿಸಿ ಆದೇಶ ಹೊರಡಿಸಿದ್ದಾರೆ.

ಅದೇ ರೀತಿ ಹೆಚ್ಚುವರಿ ಸಿವಿಲ್ ಮತ್ತು ಜೆ ಎಂ ಎಫ್ ಸಿ ನ್ಯಾಯಾಧೀಶರಾಗಿ ಹೊಸದಾಗಿ ನ್ಯಾಯಾಧೀಶರಾಗಿ ನೇಮಕಗೊಂಡು ತರಬೇತಿ ಪೂರೈಸಿದ ಶಶಾಂಕ್ ನಾಗೇಂದ್ರ ಭಟ್ ರವರನ್ನು ನೇಮಕಗೊಳಿಸಿ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಎಂ. ಚಂದ್ರಶೇಖರ ರೆಡ್ಡಿ ಆದೇಶ ಹೊರಡಿಸಿದ್ದಾರೆ.

ಬೆಳ್ತಂಗಡಿ ನ್ಯಾಯಾಲಯಕ್ಕೆ ನ್ಯಾಯಾಧೀಶರನ್ನು ನೇಮಕಗೊಳಿಸುವಂತೆ ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷರಾದ ಅಲೋಶಿಯಸ್ ಎಸ್ ಲೋಬೋ ಮತ್ತು ಪದಾಧಿಕಾರಿಗಳು ಹೈಕೋರ್ಟ್ ನ್ಯಾಯಮೂರ್ತಿಗಳು ಮತ್ತು ದ ಕ ಜಿಲ್ಲಾ ಆಡಳಿತಾತ್ಮಕ ನ್ಯಾಯಾಧೀಶರಾದ ಎಚ್ ಟಿ ನರೇಂದ್ರ ಪ್ರಸಾದ್ ರವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದರು.

Related posts

ಬೆಳ್ತಂಗಡಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ಪ್ರಖಂಡದಿಂದ ಷಷ್ಠಿ ಪೂರ್ತಿಯ ಸಮಾಲೋಚನಾ ಸಭೆ

Suddi Udaya

ಯಕ್ಷಧ್ರುವ ಪಟ್ಲ ಘಟಕ ಬೆಳ್ತಂಗಡಿ ವತಿಯಿಂದ ಯಕ್ಷಸಂಭ್ರಮ ಉದ್ಘಾಟನೆ: ನಾಲ್ವರು ಯಕ್ಷಗಾನ ತರಬೇತಿ ಗುರುಗಳಿಗೆ ಗೌರವಾರ್ಪಣೆ: 8 ಶಾಲೆಗಳು 480 ಯಕ್ಷ ವಿದ್ಯಾರ್ಥಿಗಳಿಂದ ಯಕ್ಷಗಾನ ರಂಗಪ್ರವೇಶ

Suddi Udaya

ಶಿಬಾಜೆ ಶಾಲಾ ಮಕ್ಕಳಿಗೆ ಓಣಂ ಪ್ರಯುಕ್ತ ಓಣಂ ಭೋಜನ

Suddi Udaya

ಬಳಂಜ ಸರಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಮಚ್ಚಿನ : ಹಿರಿಯ ದೈವ ನರ್ತಕ ಬೊಮ್ಮಣ್ಣ ನಿಧನ

Suddi Udaya

ಎಸ್ಸೆಸ್ಸೆಲ್ಸಿ ಫಲಿತಾಂಶ: ಮಚ್ಚಿನ ಸರಕಾರಿ ಪ್ರೌಢಶಾಲೆಗೆ ಶೇ 98.87 ಫಲಿತಾಂಶ

Suddi Udaya
error: Content is protected !!