ಸೋಣoದೂರು: ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ಸೋಣಂದೂರು ಪಣಕಜೆ ಇದರ 6ನೇ ವರ್ಷದ ಸೇವಾ ಯೋಜನೆಯಾಗಿ ಆಶಕ್ತ 8 ಬಡ ವಿದ್ಯಾರ್ಥಿಗಳಿಗೆ ಮತ್ತು ಅಂಗನವಾಡಿ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.

ಸೋಣಂದೂರು ಶಾಲಾ ಮುಖ್ಯ ಶಿಕ್ಷಕಿ ಅನಿತಾ ರೇಷ್ಮಾ ಡಿ ಸೋಜಾ ಕಾರ್ಯಕ್ರಮ ಉದ್ಘಾಟಿಸಿದರು. ಮುಖ್ಯ ಅತಿಥಿಯಾಗಿ ಮಂಗಳೂರು ವಿಶ್ವ ವಿದ್ಯಾನಿಲಯದ ಪ್ರೊ| ಡಾ ನಿಯಾಜ್. ಉದ್ಯಮಿಗಳಾದ ಜಗದೀಶ್ ಆಚಾರ್ಯ ಕಲ್ಲಾರಿ, ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ರೋಶನ್ ಲೋಬೊ, ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ಇದರ ಅಧ್ಯಕ್ಷ ಮೋಹನ್ ನಾಯ್ಕ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಹಳೇ ವಿದ್ಯಾರ್ಥಿ, ಉದ್ಯಮಿ ಸಂಪತ್ ಶೆಟ್ಟಿ ಕೃಷ್ಣ ನಗರ ಇವರು ಸೋಣಂದೂರು ಶಾಲೆಯ ಎಲ್ಲಾ ಮಕ್ಕಳಿಗೆ ಉಚಿತವಾಗಿ ಪುಸ್ತಕ ವಿತರಿಸಿದರು. ಈ ಸಂದರ್ಭದಲ್ಲಿ ಮಹಮ್ಮಾಯಿ ಕಟ್ಟೆಯ ಪದಾಧಿಕಾರಿಗಳು ಸರ್ವ ಸದಸ್ಯರು ಶಾಲಾ ಹಿರಿಯ ವಿದ್ಯಾರ್ಥಿಗಳು ಮಕ್ಕಳ ಪೋಷಕರು ಉಪಸ್ಥಿತರಿದ್ದರು.












