July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಶಿಲ ಗ್ರಾಮ ಪಂಚಾಯತ್‌ ಗ್ರಾಮ ಸಭೆ

ಶಿಶಿಲ ಗ್ರಾಮ ಪಂಚಾಯತ್‌ನ 2025-26ನೇ ಸಾಲಿನ ದ್ವಿತಿಯ ಸುತ್ತಿನ ಗ್ರಾಮ ಸಭೆಯು ಆಡಳಿತಾಧಿಕಾರಿ ಭರತ್ ಕುಮಾರ್ ರವರ ಅಧ್ಯಕ್ಷತೆಯಲ್ಲಿ ಜೂ.04 ರಂದು ಶಿಶಿಲ ಗ್ರಾಮ ಪಂಚಾಯತ್ ಕಚೇರಿ ಸಭಾಭವನದಲ್ಲಿ ನಡೆಯಿತು.

ಗ್ರಾಮಸಭೆಯ ಮಾರ್ಗದರ್ಶಿ ಅಧಿಕಾರಿಯಾಗಿ ಸಮಾಜ ಕಲ್ಯಾಣ ಇಲಾಖೆಯ ಹೇಮಲತಾ ಭಾಗವಹಿಸಿದರು.

ಈ ವೇಳೆ ಶಿಶಿಲದಲ್ಲಿ ಅಕ್ರಮ -ಸಕ್ರಮ ಅರ್ಜಿ ಇದುವರೆಗೆ ಒಂದೂ ವಿಲೇವಾರಿ ಆಗದಿರುವ ಬಗ್ಗೆ ಕಂದಾಯ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಕರುಣಾಕರ ಅಡ್ಡಹಳ್ಳ, ಸಂದೀಪ್ ಅಮ್ಮುಡಂಗೆ ಹಾಗೂ ಇತರ ಅಕ್ರಮ -ಸಕ್ರಮ ಅರ್ಜಿದಾರರು ಕಂದಾಯ ಅಧಿಕಾರಿಯವರಿಗೆ ಮನವಿ ನೀಡಿ 3 ತಿಂಗಳೊಳಗೆ ಅಕ್ರಮ -ಸಕ್ರಮ ಅರ್ಜಿ ಸಿಟ್ಟಿಂಗ್ ಗೆ ಬರಬೇಕು, ಇಲ್ಲವಾದಲ್ಲಿ ತಹಶೀಲ್ದಾರ್ ಕಚೇರಿಗೆ ಪಾದಯಾತ್ರೆ ನಡೆಸುತ್ತೇವೆ ಎಂದರು.

ಸಭೆಯಲ್ಲಿ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದು, ವಿವಿಧ ಇಲಾಖೆಗಳಿಂದ ಸಿಗುವ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿದರು. ಶಿಶಿಲ ಗ್ರಾ.ಪಂ. ಸಿಬ್ಬಂದಿಗಳು ಉಪಸ್ಥಿತರಿದ್ದರು.

ಸಿಬ್ಬಂದಿ ಸುಂದರ ವರದಿ ವಾಚಿಸಿ, ಜಮಾ -ಖರ್ಚು ಬಗ್ಗೆ ತಿಳಿಸಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಾಘವೇಂದ್ರ ಗೌಡ ಸ್ವಾಗತಿಸಿ, ಧನ್ಯವಾದವಿತ್ತರು.

Related posts

ಬೆಳ್ತಂಗಡಿ ನಗರ ಪಂಚಾಯತ್ ಸಾಮಾನ್ಯ ಸಭೆ

Suddi Udaya

ಎಸ್.ಡಿ.ಎಂ. ಆಂಗ್ಲ ಮಾಧ್ಯಮ ರಾಜ್ಯ ಪಠ್ಯಕ್ರಮ ಶಾಲೆ ವಿದ್ಯಾರ್ಥಿಗಳು ಚದುರಂಗ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಧರ್ಮಸ್ಥಳ ಠಾಣೆಯಲ್ಲಿ ದಾಖಲಾದ ಎರಡು ಪ್ರಕರಣ : ಎಸ್.ಐ.ಟಿಗೆ ಹಸ್ತಾಂತರಿಸುವಂತೆ ಆದೇಶ

Suddi Udaya

ಜೂ. 22 ಧರ್ಮಸ್ಥಳ ಅಮೃತವರ್ಷಿಣಿ ಸಭಾಭವನದಲ್ಲಿ ವಿದುಷಿ ಕು| ಚೈತ್ರ ಭಟ್ ಭರತನಾಟ್ಯ ರಂಗಪ್ರವೇಶ

Suddi Udaya

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಗೆ ಸಮಗ್ರ ಪ್ರಶಸ್ತಿ

Suddi Udaya

ಅರಸಿನಮಕ್ಕಿ: ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಗಿಡನಾಟಿ ಕಾರ್ಯಕ್ರಮ

Suddi Udaya
error: Content is protected !!