July 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಧ.ಮಂ. ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್ ವತಿಯಿಂದ ನಡೆಯುವ ಯೋಗ ರತ್ನ ಪ್ರಶಸ್ತಿಗೆ ಕು| ಚಿನ್ಮಯಿ. ಹೆಚ್, ಆಯ್ಕೆ

ಬೆಳ್ತಂಗಡಿ: ಪ್ರತಿ ವರ್ಷ ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಮಟ್ಟದ ಯೋಗ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ವಿದ್ಯಾರ್ಥಿಗಳನ್ನು ಗುರುತಿಸುವ ಕಾರ್ಯವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್ (ಗಿನ್ನೆಸ್ ಪ್ರಶಸ್ತಿ ಪುರಸ್ಕೃತ ಸಂಸ್ಥೆ) ವತಿಯಿಂದ ನಡೆಸುತ್ತಾ ಬಂದಿದ್ದು ಈ ವರ್ಷದ ಯೋಗ ರತ್ನ ಪ್ರಶಸ್ತಿಗೆ ಕು| ಚಿನ್ಮಯಿ. ಹೆಚ್, 10ನೇ ತರಗತಿ, ವಿ.ಎಸ್.ಎಸ್. ಇಂಟರ್‌ನ್ಯಾಶನಲ್ ಪಬ್ಲಿಕ್ ಸ್ಕೂಲ್, ಕೆಂಗೇರಿ, ಬೆಂಗಳೂರು ಇವರನ್ನು ಆಯ್ಕೆ ಮಾಡಲಾಗಿದೆ.

ಇವರು ಅಂತರಾಷ್ಟ್ರೀಯ ಯೋಗಾಸನ ವಿಜೇತೆಯಾಗಿದ್ದು ದೇಶ ವಿದೇಶಗಳಲ್ಲಿ ಯೋಗ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆ ಮಾಡಿರುತ್ತಾರೆ. ಜೂನ್-21, 12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯಂದು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು, ಅಧ್ಯಕ್ಷರು ಶಾಂತಿವನ ಟ್ರಸ್ಟ್ (ರಿ.) ಹಾಗೂ ಗಣ್ಯರ ಉಪಸ್ಥಿತಿಯಲ್ಲಿ ಇವರಿಗೆ ಗೌರವ ಪುರಸ್ಕಾರ ನಡೆಯಲಿದೆ. ಪ್ರಮಾಣ ಪತ್ರದ ಜೊತೆಗೆ ನಗದು ಪುರಸ್ಕಾರ ನೀಡಿ ಗೌರವಿಸಲಾಗುವುದು ಎಂದು ಶ್ರೀ ಧ. ಮಂ. ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ನಿರ್ದೇಶಕರಾದ ಡಾ. ಐ. ಶಶಿಕಾಂತ್ ಜೈನ್ ಅವರು ಪಕ್ರಟಣೆಯಲ್ಲಿ ತಿಳಿಸಿರುತ್ತಾರೆ.

Related posts

ಉಜಿರೆ: ಅನುಗ್ರಹ ಶಾಲೆಯಲ್ಲಿ ರಸ್ತೆ ಸಂಚಾರ ಮತ್ತು ಸುರಕ್ಷಾ ಕ್ರಮದ ಬಗ್ಗೆ ಮಾಹಿತಿ ಕಾರ್‍ಯಗಾರ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನಕ್ಕೆ ಉದ್ಯಮಿ ಶ್ರೀ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

Suddi Udaya

ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣ: ಶಾಸಕ ಹರೀಶ್ ಪೂಂಜ ಸೇರಿ 65 ಮಂದಿಗೆ ಸಮನ್ಸ್ ಜಾರಿ

Suddi Udaya

ಫೆ.1-5: ನಿಟ್ಟಡೆ ಶ್ರೀ ದುರ್ಗಾಪರಮೇಶ್ವರಿ ಮತ್ತು ನವಗುಳಿಗ ಕ್ಷೇತ್ರ ಬರ್ಕಜೆಯಲ್ಲಿ 9ನೇ ವರ್ಷದ ಜಾತ್ರಾ ಮಹೋತ್ಸವ

Suddi Udaya

ಎಸ್.ಡಿ.ಎಂ ವಸತಿ ಪಪೂ ಕಾಲೇಜಿನ ಪ್ರವೇಶೋತ್ಸವ ಸಮಾರಂಭ

Suddi Udaya

ಉಜಿರೆ: ಮರ ಬಿದ್ದು ಗಂಭೀರ ಗಾಯಗೊಂಡ ಗಾಯಾಳುಗಳ ಆರೋಗ್ಯ ವಿಚಾರಿಸಿದ ಶಾಸಕ ಹರೀಶ್ ಪೂಂಜ

Suddi Udaya
error: Content is protected !!