ರಾಜಕೀಯ ಏರಿಳಿತಗಳ ನಡುವೆಯೂ ಸದಾ ಕಾಂಗ್ರೇಸ್ ಪಕ್ಷದ ಬಲವರ್ಧನೆಗೆ ಶ್ರಮಿಸಿದ ನಮ್ಮ ನಾಯಕ ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದು ಸಂತೋಷ ತಂದಿದೆ ಎಂದು ಬೆಳ್ತಂಗಡಿ ಬ್ಲಾಕ್ ಕಾಂಗ್ರೇಸ್ ನಗರ ಸಮಿತಿ ಅಧ್ಯಕ್ಷ ಕೆ.ಸತೀಶ್ ಕಾಶಿಪಟ್ಣ ಸಂತಸ ವ್ಯಕ್ತಪಡಿಸಿದರು.
ಸಂಘಟನಾ ಶಕ್ತಿ, ದೃಢ ನಿರ್ಧಾರದಿಂದ ಪಕ್ಷವನ್ನು ಕಟ್ಟಿ ಶಾಸಕರಾಗಿ, ಸಚಿವರಾಗಿ, ಉಪಮುಖ್ಯಮಂತ್ರಿಯಾಗಿ, ಕೆಪಿಸಿಸಿ ಅಧ್ಯಕ್ಷರಾಗಿ ಇದೀಗ ಮುಖ್ಯಮಂತ್ರಿಯಾಗಿದ್ದಾರೆ.ಮುಂದಿನ ದಿನಗಳಲ್ಲಿ ರಾಜ್ಯದ ಅಭಿವೃದ್ಧಿಗೆ ಹೆಚ್ಚಿನ ಶಕ್ತಿ ನೀಡಲಿದ್ದಾರೆ. ವಿಶೇಷವಾಗಿ ಬೆಳ್ತಂಗಡಿಗೆ ಹೆಚ್ಚಿನ ಪ್ರಮಾಣದ ಸಹಕಾರ ನೀಡುತ್ತಾರೆಂಬ ಭರವಸೆ ನಮ್ಮಲ್ಲಿದೆ ಎಂದರು.












