July 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ರೈತ ಸಂಪರ್ಕ ಕೇಂದ್ರಗಳಲ್ಲಿ ಶೇ.100ರಷ್ಟು ಸಹಾಯಧನದಲ್ಲಿ ಸಹ್ಯಾದ್ರಿ ಬ್ರಹ್ಮ ಭತ್ತದ ಬಿತ್ತನೆ ಬೀಜ ಲಭ್ಯ

ಬೆಳ್ತಂಗಡಿ: ತಾಲೂಕಿನ ವೇಣೂರು, ಕೊಕ್ಕಡ ಹಾಗೂ ಬೆಳ್ತಗಂಡಿ ರೈತ ಸಂಪರ್ಕ ಕೇಂದ್ರಗಳಲ್ಲಿ 2026-27 ನೇ ಸಾಲಿನ ಎನ್‌ಎಫ್‌ಎಸ್‌ಎನ್‌ಎಮ್ ಯೋಜನೆಯಡಿಯಲ್ಲಿ ಶೇ.100ರಷ್ಟು ಸಹಾಯಧನದಲ್ಲಿ ಭತ್ತದ ಬಿತ್ತನೆ ಬೀಜವು (ಸಹ್ಯಾದ್ರಿ ಬ್ರಹ್ಮ) ರೈತ ಸಂಪರ್ಕ ಕೇಂದ್ರಗಳಲ್ಲಿ ಲಭ್ಯವಿದ್ದು ಭತ್ತ ಕೃಷಿಕರು ಸದುಪಯೋಗ ಪಡೆದುಕೊಳ್ಳುವಂತೆ ಬೆಳ್ತಂಗಡಿ ಕೃಷಿ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಈ ತಳಿಯ ವಿಶೇಷತೆ:
ಮಧ್ಯಮ ಅವಧಿಯ ಕೆಂಪು ಅಕ್ಕಿಯ ತಳಿ (130-135 ದಿನಗಳು), ಹೆಕ್ಟೇರ್‌ಗೆ 50 ರಿಂದ 55 ಕ್ವಿಂಟಾಲ್ ಇಳುವರಿ, ಕಣೆ ಕೀಟ ಬಾಧೆಗೆ ಸಹಿಷ್ಣುತೆಯನ್ನು ಹೊಂದಿದೆ. ದಪ್ಪ ಮತ್ತು ಮಧ್ಯಮ ಗಾತ್ರದ ಭತ್ತ ಕರಾವಳಿ ಪ್ರದೇಶಕ್ಕೆ (ವಲಯ-೧೦) ಸೂಕ್ತವಾದ ತಳಿ. ಉತ್ತಮ ಇಳುವರಿ ನೀಡುವ ರೈತ ಸ್ನೇಹಿ ತಳಿ. ಲಘು ಪೋಷಕಾಂಶಗಳು, ಕೀಟನಾಶಕಗಳು, ಟ್ರೈಕೊಡರ್ಮಾ ಹಾಗೂ ಸಾವಯವ ಗೊಬ್ಬರ ಶೇ.೧೦೦ ಸಹಾಯಧನದಲ್ಲಿ ನೀಡಲಾಗುವುತ್ತದೆ.

ಅರ್ಜಿ ಸಲ್ಲಿಕೆ ಹೇಗೆ:

  • ಎಕರೆ ಅಥವಾ ಅದಕ್ಕಿಂತ ಹೆಚ್ಚಿನ ಜಮೀನಿನ ಪಹಣಿ
  • ಆಧಾರ್ ಕಾರ್ಡ್ ಜೆರಾಕ್ಸ್
  • ಬ್ಯಾಂಕ್ ಪಾಸ್‌ಬುಕ್ ಮೊದಲ ಪುಟದ ಜೆರಾಕ್ಸ್
  • 1 ಪಾಸ್‌ಪೋರ್ಟ್ ಗಾತ್ರದ ಭಾವಚಿತ್ರ
  • ಎಸ್‌ಸಿ/ಎಸ್‌ಟಿ ರೈತರಾಗಿದ್ದಲ್ಲಿ ಜಾತಿ ಪ್ರಮಾಣ ಪತ್ರ

Related posts

ರಾಷ್ಟೀಯ ಸ್ವಯಂ ಸೇವಕ ಸಂಘ ಕೊಕ್ಕಡ ಮಂಡಲದಿಂದ ವಿಜಯ ದಶಮಿ ಆಚರಣೆ

Suddi Udaya

ಪಿಯುಸಿ ಫಲಿತಾಂಶ: ಎಸ್‌ಡಿಎಂ ಪ.ಪೂ. ‘ರೋವರ್ಸ್ ಮತ್ತು ರೇಂಜರ್ಸ್’ ಘಟಕದ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ

Suddi Udaya

ದ್ವಿತೀಯ ಪಿಯು ಫಲಿತಾಂಶ: ಮುಂಡಾಜೆ ಪದವಿ ಪೂರ್ವ ಕಾಲೇಜಿಗೆ ಶೇ.94.28 ಫಲಿತಾಂಶ

Suddi Udaya

ಟೀಮ್ ದೇವರಗುಡ್ಡೆ ವತಿಯಿಂದ ಮಕ್ಕಳ ದಿನಾಚರಣೆ ಪ್ರಯುಕ್ತ ಅಂಗನವಾಡಿಗೆ ಚೇರ್ ವಿತರಣೆ

Suddi Udaya

ವೇಣೂರು: ದಿ ಹೇರ್‌ಲೇರ್ ಮೆನ್ಸ್ ಸೆಲೂನ್ ಉದ್ಘಾಟನೆ: ನೂತನ ಸೆಲೂನನ್ನು ಉದ್ಘಾಟಿಸಿ ಶುಭ ಹಾರೈಸಿದ ಖ್ಯಾತ ವೈದ್ಯ ಡಾ| ಶಾಂತಿಪ್ರಸಾದ್

Suddi Udaya

ಕಸ್ತೂರಿ ರಂಗನ್ ವರದಿ ಸಚಿವರ ಹೇಳಿಕೆಗೆ ದ.ಕ ಮಲೆಕುಡಿಯ ಸಂಘ ತೀವ್ರ ಆಕ್ಷೇಪ

Suddi Udaya
error: Content is protected !!