September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಶಿಲ ಗ್ರಾಮ ಪಂಚಾಯತ್‌ ಗ್ರಾಮ ಸಭೆ

ಶಿಶಿಲ ಗ್ರಾಮ ಪಂಚಾಯತ್‌ನ 2025-26ನೇ ಸಾಲಿನ ದ್ವಿತಿಯ ಸುತ್ತಿನ ಗ್ರಾಮ ಸಭೆಯು ಆಡಳಿತಾಧಿಕಾರಿ ಭರತ್ ಕುಮಾರ್ ರವರ ಅಧ್ಯಕ್ಷತೆಯಲ್ಲಿ ಜೂ.04 ರಂದು ಶಿಶಿಲ ಗ್ರಾಮ ಪಂಚಾಯತ್ ಕಚೇರಿ ಸಭಾಭವನದಲ್ಲಿ ನಡೆಯಿತು.

ಗ್ರಾಮಸಭೆಯ ಮಾರ್ಗದರ್ಶಿ ಅಧಿಕಾರಿಯಾಗಿ ಸಮಾಜ ಕಲ್ಯಾಣ ಇಲಾಖೆಯ ಹೇಮಲತಾ ಭಾಗವಹಿಸಿದರು.

ಈ ವೇಳೆ ಶಿಶಿಲದಲ್ಲಿ ಅಕ್ರಮ -ಸಕ್ರಮ ಅರ್ಜಿ ಇದುವರೆಗೆ ಒಂದೂ ವಿಲೇವಾರಿ ಆಗದಿರುವ ಬಗ್ಗೆ ಕಂದಾಯ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಕರುಣಾಕರ ಅಡ್ಡಹಳ್ಳ, ಸಂದೀಪ್ ಅಮ್ಮುಡಂಗೆ ಹಾಗೂ ಇತರ ಅಕ್ರಮ -ಸಕ್ರಮ ಅರ್ಜಿದಾರರು ಕಂದಾಯ ಅಧಿಕಾರಿಯವರಿಗೆ ಮನವಿ ನೀಡಿ 3 ತಿಂಗಳೊಳಗೆ ಅಕ್ರಮ -ಸಕ್ರಮ ಅರ್ಜಿ ಸಿಟ್ಟಿಂಗ್ ಗೆ ಬರಬೇಕು, ಇಲ್ಲವಾದಲ್ಲಿ ತಹಶೀಲ್ದಾರ್ ಕಚೇರಿಗೆ ಪಾದಯಾತ್ರೆ ನಡೆಸುತ್ತೇವೆ ಎಂದರು.

ಸಭೆಯಲ್ಲಿ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದು, ವಿವಿಧ ಇಲಾಖೆಗಳಿಂದ ಸಿಗುವ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿದರು. ಶಿಶಿಲ ಗ್ರಾ.ಪಂ. ಸಿಬ್ಬಂದಿಗಳು ಉಪಸ್ಥಿತರಿದ್ದರು.

ಸಿಬ್ಬಂದಿ ಸುಂದರ ವರದಿ ವಾಚಿಸಿ, ಜಮಾ -ಖರ್ಚು ಬಗ್ಗೆ ತಿಳಿಸಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಾಘವೇಂದ್ರ ಗೌಡ ಸ್ವಾಗತಿಸಿ, ಧನ್ಯವಾದವಿತ್ತರು.

Related posts

ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಜೆಸ್ವಿನ್ ಪಾಲಾಟಿಗೆ ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ ವತಿಯಿಂದ ಗೌರವ

Suddi Udaya

ವೇಣೂರು ಮಸೀದಿಯ ಅಧ್ಯಕ್ಷ ಹಾಜಿ ವಿ. ಅಬೂಬಕ್ಕರ್ ನಿಧನ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಕಛೇರಿಗೆ ಕನ್ಯಾಡಿ ಶ್ರೀರಾಮ ಕ್ಷೇತ್ರದ ಪೀಠಾಧಿಪತಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಭೇಟಿ-ಭಾರತ್ ಬ್ಯಾಂಕಿನ‌ ಅಧ್ಯಕ್ಷ ಸೂರ್ಯಕಾಂತ್ ಜೆ ಸುವರ್ಣರವರಿಗೆ ಶ್ರೀ ಗುರುದೇವ ಸೊಸೈಟಿಯಿಂದ ಗೌರವಾರ್ಪಣೆ

Suddi Udaya

ಕೊಕ್ರಾಡಿ ಶ್ರೀ ಕೊಡಮಣಿತ್ತಾಯ ದೈವಸ್ಥಾನ ಹಾಗೂ ಬ್ರಹ್ಮಬೈದರ್ಕಳ ಗರಡಿ ಇದರ ಪುನರ್ ಪ್ರತಿಷ್ಠೆ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ.2ಲಕ್ಷ ದೇಣಿಗೆ ಹಸ್ತಾಂತರ

Suddi Udaya

ಸರಳಿಕಟ್ಟೆ ಶಾಲೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya

ಅಂತರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾಕೂಟ: ಬೆಳ್ತಂಗಡಿ ಶೊರಿನ್ ರಿಯೊ ಕರಾಟೆ ಸಂಸ್ಥೆಯ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya
error: Content is protected !!