24.6 C
ಪುತ್ತೂರು, ಬೆಳ್ತಂಗಡಿ
June 4, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಶಿಲ ಗ್ರಾಮ ಪಂಚಾಯತ್‌ ಗ್ರಾಮ ಸಭೆ

ಶಿಶಿಲ ಗ್ರಾಮ ಪಂಚಾಯತ್‌ನ 2025-26ನೇ ಸಾಲಿನ ದ್ವಿತಿಯ ಸುತ್ತಿನ ಗ್ರಾಮ ಸಭೆಯು ಆಡಳಿತಾಧಿಕಾರಿ ಭರತ್ ಕುಮಾರ್ ರವರ ಅಧ್ಯಕ್ಷತೆಯಲ್ಲಿ ಜೂ.04 ರಂದು ಶಿಶಿಲ ಗ್ರಾಮ ಪಂಚಾಯತ್ ಕಚೇರಿ ಸಭಾಭವನದಲ್ಲಿ ನಡೆಯಿತು.

ಗ್ರಾಮಸಭೆಯ ಮಾರ್ಗದರ್ಶಿ ಅಧಿಕಾರಿಯಾಗಿ ಸಮಾಜ ಕಲ್ಯಾಣ ಇಲಾಖೆಯ ಹೇಮಲತಾ ಭಾಗವಹಿಸಿದರು.

ಈ ವೇಳೆ ಶಿಶಿಲದಲ್ಲಿ ಅಕ್ರಮ -ಸಕ್ರಮ ಅರ್ಜಿ ಇದುವರೆಗೆ ಒಂದೂ ವಿಲೇವಾರಿ ಆಗದಿರುವ ಬಗ್ಗೆ ಕಂದಾಯ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಕರುಣಾಕರ ಅಡ್ಡಹಳ್ಳ, ಸಂದೀಪ್ ಅಮ್ಮುಡಂಗೆ ಹಾಗೂ ಇತರ ಅಕ್ರಮ -ಸಕ್ರಮ ಅರ್ಜಿದಾರರು ಕಂದಾಯ ಅಧಿಕಾರಿಯವರಿಗೆ ಮನವಿ ನೀಡಿ 3 ತಿಂಗಳೊಳಗೆ ಅಕ್ರಮ -ಸಕ್ರಮ ಅರ್ಜಿ ಸಿಟ್ಟಿಂಗ್ ಗೆ ಬರಬೇಕು, ಇಲ್ಲವಾದಲ್ಲಿ ತಹಶೀಲ್ದಾರ್ ಕಚೇರಿಗೆ ಪಾದಯಾತ್ರೆ ನಡೆಸುತ್ತೇವೆ ಎಂದರು.

ಸಭೆಯಲ್ಲಿ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದು, ವಿವಿಧ ಇಲಾಖೆಗಳಿಂದ ಸಿಗುವ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿದರು. ಶಿಶಿಲ ಗ್ರಾ.ಪಂ. ಸಿಬ್ಬಂದಿಗಳು ಉಪಸ್ಥಿತರಿದ್ದರು.

ಸಿಬ್ಬಂದಿ ಸುಂದರ ವರದಿ ವಾಚಿಸಿ, ಜಮಾ -ಖರ್ಚು ಬಗ್ಗೆ ತಿಳಿಸಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಾಘವೇಂದ್ರ ಗೌಡ ಸ್ವಾಗತಿಸಿ, ಧನ್ಯವಾದವಿತ್ತರು.

Related posts

ಜಾಗತಿಕ ಹಾದಿಯಲ್ಲಿ ಅಗ್ರಿಲೀಫ್‌ಗೆ ಭಾರೀ ಬಲ: ರೂ.10 ಕೋಟಿ ನಿಧಿ ಸಂಗ್ರಹ — ಭಾರತ ಮತ್ತು ಯುರೋಪ್–ಯುಕೆ ವಿಸ್ತರಣೆಗೆ ವೇಗ

Suddi Udaya

ಮೇ 31: ಉಜಿರೆಯಲ್ಲಿ ಡಿ.ಡಿ ಮೆನ್ಸ್ & ವಿಮೆನ್ಸ್ ಸೆಂಟರ್ ಮಲ್ಟಿ ಶೋರೂಮ್ ಉದ್ಘಾಟನೆ

Suddi Udaya

ತೆಕ್ಕಾರಿನಲ್ಲಿ ರೈತರಿಗೆ ತರಬೇತಿ ಕಾರ್ಯಕ್ರಮ

Suddi Udaya

ಕಣಿಯೂರು ವಲಯದ ಅಂಡೆತಡ್ಕ ಕಾರ್ಯಕ್ಷೇತ್ರದಲ್ಲಿ ಸೃಜನಾ ಶೀಲಾ ಕಾರ್ಯಕ್ರಮ

Suddi Udaya

ಮಾ.24: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ ಬ್ರಿಜೇಶ್ ಚೌಟ ಬೆಳ್ತಂಗಡಿಗೆ ಭೇಟಿ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವಾಕಿಂಗ್ ಸ್ಟಿಕ್ ವಿತರಣೆ

Suddi Udaya
error: Content is protected !!