July 22, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅಕ್ರಮ ಗೋಸಾಗಾಟ : ತಡೆಯಲು ಬಂದವರ ಮೇಲೆ ಪಿಕಪ್ ಹರಿಸಿದ ದುಷ್ಕರ್ಮಿಗಳು

ಕಡಿರುದ್ಯಾವರ: ಇಲ್ಲಿಯ ಕಾನರ್ಪ ಪಣಿಕಲ್ ರಾಘವೇಂದ್ರ ಭಟ್ಟರ ಮನೆಯಿಂದ ತೋಟತ್ತಾಡಿ ಅನಿಲ್ ಎಂಬವರ ಮನೆಗೆ ಅಕ್ರಮವಾಗಿ ಗೋವನ್ನು ಸಾಗಿಸುತ್ತಿದ್ದ ಪಿಕಪ್ ವಾಹನವನ್ನು ಅಡ್ಡಗಟ್ಟಿ ತಡೆಯಲು ಬಂದವರ ಮೇಲೆ  ಡಿಕ್ಕಿ ಹೊಡೆಯುವ ರೀತಿಯಲ್ಲಿ ಬಂದು ಪರಾರಿಯಾದ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ.

ಅಕ್ರಮ ಗೋ ಸಾಗಾಟದ ಜಾಲ  ಭಾಗಿಯಾಗಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.ಪನಿಕ್ಕಲ್ ರಾಘವೇಂದ್ರ ಭಟ್ಟರ ಮನೆಯಿಂದ ಹೊರಟಿದ್ದ  ಗೋಕಳ್ಳರು ಪಿಕಪ್ ನಲ್ಲಿ ತೆರಳುತ್ತಿದ್ದಾಗ,  ಸಾರ್ವಜನಿಕರು ತಡೆಯಲು ಯತ್ನಿಸಿದ್ದಾರೆ . ದುಷ್ಕರ್ಮಿಗಳು ಯುವಕರ ಬೈಕಿಗೆ ಮುಖಾಮುಖಿಯಾಗಿ ಡಿಕ್ಕಿ ಹೊಡೆಯುವಂತೆ ಅತ್ಯಂತ ಅಪಾಯಕಾರಿ ರೀತಿಯಲ್ಲಿ ವಾಹನ ಚಲಾಯಿಸಿ ಭೀತಿ ಸೃಷ್ಟಿಸಿದ್ದಾರೆ.

ತಮ್ಮ ಕೃತ್ಯವನ್ನು ಸ್ಥಳೀಯ ಯುವಕರು ಗಮನಿಸಿ ಬೆನ್ನಟ್ಟುತ್ತಿದ್ದಂತೆ ಗಾಬರಿಗೊಂಡ ಗೋ ಕಳ್ಳರು, ಮಂಜುಶ್ರೀನಗರದ ಹತ್ತಿರ ಯಾರಿಗೂ ತಿಳಿಯದಂತೆ  ಗೋವನ್ನು  ಬಿಟ್ಟು ಕಾಲ್ಕಿತ್ತಿದ್ದಾರೆ. ಈ ವೇಳೆ ಸಾರ್ವಜನಿಕರು ಸಕಾಲದಲ್ಲಿ ಕಾರ್ಯಪ್ರವೃತ್ತರಾಗಿ ವಾಹನದಲ್ಲಿದ್ದ ಒಬ್ಬ ಆರೋಪಿ(ಅನಿಲ್ ತೋಟತ್ತಾಡಿ )ಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸುವಲ್ಲಿ ಯಶಸ್ವಿಯಾಗಿದ್ದಾರೆ.  ಪಿಕಪ್‌ನಲ್ಲಿದ್ದ ಇನ್ನುಳಿದ ಇಬ್ಬರು ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.ಸ್ಥಳಕ್ಕೆ  ಧಾವಿಸಿದ ಪೊಲೀಸರು ಜಾನುವಾರು ವಶಕ್ಕೆ ಪಡೆದುಕೊಂಡಿದ್ದು, ಪರಾರಿಯಾದ ಇಬ್ಬರು ಆರೋಪಿಗಳ ಪತ್ತೆಗಾಗಿ ತೀವ್ರ ಜಾಲ ಬೀಸಿದ್ದಾರೆ. ಸಾರ್ವಜನಿಕ ರಸ್ತೆಯಲ್ಲೇ ಬೈಕ್ ಸವಾರರ ಪ್ರಾಣಕ್ಕೆ ಸಂಚಕಾರ ತರುವಂತೆ ವರ್ತಿಸಿದ ಗೋ ಕಳ್ಳರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

Related posts

ಮುಂಡಾಜೆ: ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಕಾರು: ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರು

Suddi Udaya

ಗಾಯತ್ರಿ ಮಂತ್ರವೇ ಸರ್ವಶ್ರೇಷ್ಠ

Suddi Udaya

ಬೆಳ್ತಂಗಡಿ: ಡಿ.ಕೆ.ಆರ್.ಡಿ.ಎಸ್ ನಿಂದ ಸಾಮರ್ಥ್ಯ ವರ್ಧನಾ ತರಬೇತಿ

Suddi Udaya

ಪ್ರಧಾನಮಂತ್ರಿ ಸೂರ್ಯಘರ್‌ ಯೋಜನೆಗೆ ಉಜಿರೆ ಗ್ರಾಮ ಪಂಚಾಯತ್ ಆಯ್ಕೆ

Suddi Udaya

ಹತ್ಯಡ್ಕ ಗ್ರಾಮದ ಪಲಸ್ತಡ್ಕ ನಿವಾಸಿ ಸಂಜೀವ ಗೌಡ ನಿಧನ

Suddi Udaya

ಧರ್ಮಸ್ಥಳ: ಶ್ರೀ ಧ.ಮಂ. ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ ವತಿಯಿಂದ ಯೋಗ ರತ್ನ ಪ್ರಶಸ್ತಿಗೆ ಖುಷಿ. ಹೆಚ್, ಮೈಸೂರು ಆಯ್ಕೆ

Suddi Udaya
error: Content is protected !!