ಪಕ್ಷನಿಷ್ಠೆಯಲ್ಲಿ ಹೆಸರುವಾಸಿಯಾದ ವ್ಯಕ್ತಿ ಡಿಕೆಶಿಯವರು ಇಂದು ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವುದು ಅಭಿನಂದನೀಯ.
ಅವರ ಆಡಳಿತ ಅವಧಿಯಲ್ಲಿ ಸಾಕಷ್ಟು ಅಭಿವೃದ್ಧಿಗಳು ನಡೆದು, ಜನರ ಪ್ರೀತಿ ವಿಶ್ವಾಸ ಗಳಿಸಲಿ. ಅವಿಭಜಿತ ದ.ಕ. ಜಿಲ್ಲಾ ಗ್ರಾಮೀಣ ಭಾಗಗಳನ್ನು ಪ್ರವಾಸಿ ತಾಣವನ್ನಾಗಿ ಮಾಡುವ ಅವರ ಕನಸಿಗೆ ಪುಷ್ಠಿ ನೀಡಿದಂತಾಗಿದ್ದು, ಅದನ್ನು ಸಾಕಾರ ಮಾಡುವ ವಿಶ್ವಾಸ ಖಂಡಿತವಾಗಿಯೂ ಇದೆ. ಬೆಳ್ತಂಗಡಿಗೂ ಅಭಿವೃದ್ಧಿಯ ವಿಚಾರದಲ್ಲಿ ಹೆಚ್ಚಿನ ಪ್ರಮಾಣದ ಸಹಕಾರ ನೀಡುತ್ತಾರೆ ಎಂಬ ಭರವಸೆ ಇದೆ ಎಂದು ಬ್ಲಾಕ್ ಕಾಂಗ್ರೆಸ್ (ಗ್ರಾಮೀಣ) ಅಧ್ಯಕ್ಷ ಕೆ.ಎಂ. ನಾಗೇಶ್ ಕುಮಾರ್ ಗೌಡ ತಿಳಿಸಿದ್ದಾರೆ.












