September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪುದುವೆಟ್ಟು ಶ್ರೀ ಧ.ಮಂ..ಹಿ. ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

ಪುದುವೆಟ್ಟು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟು ಇಲ್ಲಿ ಶಾಲಾ ಪ್ರಾರಂಭೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

ಶ್ರೀ ಕ್ಷೇತ್ರ ಧರ್ಮಸ್ಥಳದ ಗಿರೀಶ್ ಕುದ್ರಂತಾಯ ರವರು ಶಾಲಾ ಪ್ರಾರಂಭೋತ್ಸವಕ್ಕೆ ಚಾಲನೆಯನ್ನು ನೀಡಿ ಮಾತನಾಡಿ ಬದಲಾದ ಶಿಕ್ಷಣ ವ್ಯವಸ್ಥೆಗೆ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಹೊಂದಿಕೊಳ್ಳಬೇಕಾಗಿದೆ ಪ್ರಸ್ತುತ ಕಾಲಘಟ್ಟದಲ್ಲಿ ಶಿಕ್ಷಣದಿಂದ ವಂಚಿತರಾಗಬಾರದು ಎಂದು ಸರ್ಕಾರ ಹಲವು ಯೋಜನೆಗಳನ್ನು ಹಾಕಿಕೊಳ್ಳುತಿದೆ, ವಿದ್ಯಾರ್ಥಿ ಪೋಷಕರು ವಿದ್ಯಾರ್ಥಿಗಳ ಕಡೆ ಮನೆಯಲ್ಲಿ ಹೆಚ್ಚಿನ ಗಮನ ಕೊಡಬೇಕು ಎಂದು ಅಭಿಪ್ರಾಯಪಟ್ಟರು.

ಶಾಲೆಯ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಶಶಿಧರ್ ಜಿ ಗುಂಪಕಲ್ಲು ಮಾತನಾಡಿ ಶಾಲೆಯಲ್ಲಿ ಈ ವರ್ಷದ ದಾಖಲಾತಿ ಪ್ರಮಾಣ ಹೆಚ್ಚಾಗಿರುವ ಹಿನ್ನಲೆಯಲ್ಲಿ ಊರವರನ್ನು ಹಾಗೂ ಶಾಲಾ ಶಿಕ್ಷಕ ವೃಂದದವರನ್ನು ಅಭಿನಂದಿಸಿದರು. ಈ ಸಂದರ್ಭದಲ್ಲಿ ಸ್ಥಳೀಯರಾದ ಚಿತ್ರರಂಜನ್ ಜೈನ್ ರವರು ಉಪಸ್ಥಿತರಿದ್ದರು,

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯ ಶಿಕ್ಷಕ ಶೀನಪ್ಪಗೌಡ ವಹಿಸಿ ಮಾತನಾಡಿ ಶಾಲೆಯ ಈ ವರ್ಷದ ಶೈಕ್ಷಣಿಕ ಚಟುವಟಿಕೆಗಳ ಬಗ್ಗೆ ತಿಳಿಸಿಕೊಟ್ಟರು.

ಶಾಲಾ ವಿದ್ಯಾರ್ಥಿಗಳ ಪ್ರಾರ್ಥನೆ ಗೀತೆಯೊಂದಿಗೆ ಆರಂಭಗೊಂಡ ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕ ಪವನ್ ಕುಮಾರ್ ಸ್ವಾಗತಿಸಿ, ಶ್ರೀಮತಿ ತೇಜಾವತಿ ಧನ್ಯವಾದಗೈದ ಕಾರ್ಯಕ್ರಮವನ್ನು ಶಾಲಾ ಶಿಕ್ಷಕ ನಿಶಾಂತ್ ಕುಮಾರ್ ನಿರೂಪಿಸಿದರು.

ಈ ಸಂದರ್ಭದಲ್ಲಿ ಎಸ್ ಡಿ ಎಮ್ ಶಿಕ್ಷಣ ಸಂಸ್ಥೆಯ ವತಿಯಿಂದ ಬಿಸ್ಕೆಟ್ ಹಾಗೂ ಗಿರೀಶ್ ಕುದ್ರಂತಾಯ ರವರ ವತಿಯಿಂದ ಎಲ್ಲ ವಿದ್ಯಾರ್ಥಿಗಳಿಗೆ ಹೋಳಿಗೆಯನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಎಲ್ಲ ಶಿಕ್ಷಕರು ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಸಹಕರಿಸಿದರು.

Related posts

ಮಡಂತ್ಯಾರಿನಲ್ಲಿ ಭದ್ರಾ ಹೋಮ್ ಅಪ್ಲಾಯನ್ಸಸ್ ಮೂರನೇ ಶಾಖೆ ಶುಭಾರಂಭ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಗುವಿನ ವಕ್ರ ಪಾದಕ್ಕೆ ಮೂಳೆ ಶಸ್ತ್ರಚಿಕಿತ್ಸಾ ತಜ್ಞ ಡಾ| ಪ್ರತೀಕ್ಷ್. ಬಿ ರವರಿಂದ ಯಶಸ್ವಿ ಶಸ್ತ್ರಚಿಕಿತ್ಸೆ

Suddi Udaya

ಉಜಿರೆ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರಕ್ಕೆ ಎನ್.ಎಸ್.ಎಸ್ ಸ್ವಯಂ ಸೇವಕರ ಭೇಟಿ

Suddi Udaya

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ : ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 13504 ಅಂತರದಿಂದ ಮುನ್ನಡೆ

Suddi Udaya

ಬೆಳ್ತಂಗಡಿಯ ಮಾಜಿ ಶಾಸಕ ದಿ| ವಸಂತ ಬಂಗೇರಿಗೆ ಶ್ರೀ ರಾಘವೇಂದ್ರ ಮಠದ ವತಿಯಿಂದ ನುಡಿನಮನ

Suddi Udaya

ರಾ.ಹೆ. ಲಾಯಿಲ ಬಳಿ ತಿರುವಿನ ಸೂಚನ ಫಲಕ ಕಾಣೆ; ಸುದ್ದಿ ಉದಯ ಜನಧ್ವನಿ

Suddi Udaya
error: Content is protected !!