24.3 C
ಪುತ್ತೂರು, ಬೆಳ್ತಂಗಡಿ
June 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪುದುವೆಟ್ಟು ಶ್ರೀ ಧ.ಮಂ..ಹಿ. ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

ಪುದುವೆಟ್ಟು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟು ಇಲ್ಲಿ ಶಾಲಾ ಪ್ರಾರಂಭೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

ಶ್ರೀ ಕ್ಷೇತ್ರ ಧರ್ಮಸ್ಥಳದ ಗಿರೀಶ್ ಕುದ್ರಂತಾಯ ರವರು ಶಾಲಾ ಪ್ರಾರಂಭೋತ್ಸವಕ್ಕೆ ಚಾಲನೆಯನ್ನು ನೀಡಿ ಮಾತನಾಡಿ ಬದಲಾದ ಶಿಕ್ಷಣ ವ್ಯವಸ್ಥೆಗೆ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಹೊಂದಿಕೊಳ್ಳಬೇಕಾಗಿದೆ ಪ್ರಸ್ತುತ ಕಾಲಘಟ್ಟದಲ್ಲಿ ಶಿಕ್ಷಣದಿಂದ ವಂಚಿತರಾಗಬಾರದು ಎಂದು ಸರ್ಕಾರ ಹಲವು ಯೋಜನೆಗಳನ್ನು ಹಾಕಿಕೊಳ್ಳುತಿದೆ, ವಿದ್ಯಾರ್ಥಿ ಪೋಷಕರು ವಿದ್ಯಾರ್ಥಿಗಳ ಕಡೆ ಮನೆಯಲ್ಲಿ ಹೆಚ್ಚಿನ ಗಮನ ಕೊಡಬೇಕು ಎಂದು ಅಭಿಪ್ರಾಯಪಟ್ಟರು.

ಶಾಲೆಯ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಶಶಿಧರ್ ಜಿ ಗುಂಪಕಲ್ಲು ಮಾತನಾಡಿ ಶಾಲೆಯಲ್ಲಿ ಈ ವರ್ಷದ ದಾಖಲಾತಿ ಪ್ರಮಾಣ ಹೆಚ್ಚಾಗಿರುವ ಹಿನ್ನಲೆಯಲ್ಲಿ ಊರವರನ್ನು ಹಾಗೂ ಶಾಲಾ ಶಿಕ್ಷಕ ವೃಂದದವರನ್ನು ಅಭಿನಂದಿಸಿದರು. ಈ ಸಂದರ್ಭದಲ್ಲಿ ಸ್ಥಳೀಯರಾದ ಚಿತ್ರರಂಜನ್ ಜೈನ್ ರವರು ಉಪಸ್ಥಿತರಿದ್ದರು,

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯ ಶಿಕ್ಷಕ ಶೀನಪ್ಪಗೌಡ ವಹಿಸಿ ಮಾತನಾಡಿ ಶಾಲೆಯ ಈ ವರ್ಷದ ಶೈಕ್ಷಣಿಕ ಚಟುವಟಿಕೆಗಳ ಬಗ್ಗೆ ತಿಳಿಸಿಕೊಟ್ಟರು.

ಶಾಲಾ ವಿದ್ಯಾರ್ಥಿಗಳ ಪ್ರಾರ್ಥನೆ ಗೀತೆಯೊಂದಿಗೆ ಆರಂಭಗೊಂಡ ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕ ಪವನ್ ಕುಮಾರ್ ಸ್ವಾಗತಿಸಿ, ಶ್ರೀಮತಿ ತೇಜಾವತಿ ಧನ್ಯವಾದಗೈದ ಕಾರ್ಯಕ್ರಮವನ್ನು ಶಾಲಾ ಶಿಕ್ಷಕ ನಿಶಾಂತ್ ಕುಮಾರ್ ನಿರೂಪಿಸಿದರು.

ಈ ಸಂದರ್ಭದಲ್ಲಿ ಎಸ್ ಡಿ ಎಮ್ ಶಿಕ್ಷಣ ಸಂಸ್ಥೆಯ ವತಿಯಿಂದ ಬಿಸ್ಕೆಟ್ ಹಾಗೂ ಗಿರೀಶ್ ಕುದ್ರಂತಾಯ ರವರ ವತಿಯಿಂದ ಎಲ್ಲ ವಿದ್ಯಾರ್ಥಿಗಳಿಗೆ ಹೋಳಿಗೆಯನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಎಲ್ಲ ಶಿಕ್ಷಕರು ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಸಹಕರಿಸಿದರು.

Related posts

ಧರ್ಮಸ್ಥಳ ಭಜನಾ ಕಮ್ಮಟದಲ್ಲಿ ಭಾಗವಹಿಸಲು ಅರ್ಹ ಅಭ್ಯರ್ಥಿಗಳಿಗೆ ಅವಕಾಶ

Suddi Udaya

ಶ್ರೀ ಶ್ರೀನಿವಾಸ ಪ್ರಸನ್ನ ಸೋಮೇಶ್ವರ ಮಹಾಗಣಪತಿ ದೇವಸ್ಥಾನ ಸೌಖ್ಯವನ ಪರೀಕದ ಬ್ರಹ್ಮಕಲಶೋತ್ಸವದ ಕಛೇರಿ ಉದ್ಘಾಟನೆ

Suddi Udaya

ಚುನಾವಣಾ ಕೇಂದ್ರದ ಎಡವಟ್ಟು: ಮತಗಟ್ಟೆ ಸಂಖ್ಯೆ ಬದಲಾವಣೆ: ಕೊಕ್ಕಡದಿಂದ ಮರ್ಕಂಜದ ಮಿತ್ತಡ್ಕಕ್ಕೆ ಬಂದು ಮತ ಚಲಾಯಿಸಿದ ಮತದಾರ

Suddi Udaya

ಉದಯ ಮಹಾಸಂಘ ಗಂಡಿಬಾಗಿಲು- ಪರಿಸರ ದಿನಾಚರಣೆ

Suddi Udaya

ಮುಂಬಯಿ ಅಜೆಕಾರು ಕಲಾಭಿಮಾನಿಗಳ ಬಳಗದಿಂದ ಯಕ್ಷಗಾನ ಪ್ರದರ್ಶನ: ಉಜಿರೆ ಮಾ| ಆದಿತ್ಯ ಹೊಳ್ಳ ರಿಗೆ ಸನ್ಮಾನ

Suddi Udaya

ಬೆಳ್ತಂಗಡಿ: ಹುಣ್ಸೆಕಟ್ಟೆ 23ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!