22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್‌.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕರ ಜಾಗೃತಿ ಕಾರ್ಯಕ್ರಮ

ಉಜಿರೆ: ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆ ಉಜಿರೆಯ ಫೌಂಡೇಶನ್ ಸ್ಟೇಜ್ (ಪ್ರಿ ಕೆಜಿಯಿಂದ 2ನೇ ತರಗತಿ) ಮಕ್ಕಳ ಪೋಷಕರಿಗಾಗಿ ವಿಶೇಷ ಜಾಗೃತಿ ಕಾರ್ಯಕ್ರಮವನ್ನು ಜೂನ್ 4 ರಂದು ಎಸ್.ಡಿ.ಎಮ್ ಪದವಿ ಕಾಲೇಜಿನ ಇಂದ್ರಪ್ರಸ್ಥ ಸಭಾಂಗಣದಲ್ಲಿ ಆಯೋಜಿಸಲಾಯಿತು.

ಮುಖ್ಯ ಅತಿಥಿ ಹಾಗೂ ಸಂಪನ್ಮೂಲ ವ್ಯಕ್ತಿಯಾಗಿ ಮೂಡಬಿದಿರೆ ಆಳ್ವಾಸ್ ಕಾಲೇಜಿನ ಮನೋವಿಜ್ಞಾನ ವಿಭಾಗದ ಸಹಪ್ರಾಧ್ಯಾಪಕರು ಹಾಗೂ ಆಳ್ವಾಸ್ ಸೆಂಟರ್ ಫಾರ್ ವೆಲ್‌ನೆಸ್ ಆ್ಯಂಡ್ ಟ್ರೈನಿಂಗ್ ನ ನಿರ್ದೇಶಕರಾದ ಡಾ.ದೀಪಾ ಕೊಟಾರಿ ಇವರು ಪೋಷಕರಿಗೆ ಅಮೂಲ್ಯವಾದ ಮಾರ್ಗದರ್ಶನ ನೀಡಿದರು. ‘ಸೋಶಿಯಲ್, ಇಮೋಶನಲ್ ಆ್ಯಂಡ್ ಅಕಾಡೆಮಿಕ್ ಗ್ರೋತ್’ ಎಂಬ ವಿಷಯದ ಕುರಿತು ಉಪಯುಕ್ತ ಮಾಹಿತಿಯನ್ನು ಹಂಚಿಕೊಂಡರು. ಮಕ್ಕಳ ಸಾಮಾಜಿಕ, ಭಾವನಾತ್ಮಕ ಹಾಗೂ ಶೈಕ್ಷಣಿಕ ಬೆಳವಣಿಗೆಯಲ್ಲಿ ಪೋಷಕರ ಪಾತ್ರದ ಮಹತ್ವವನ್ನು ವಿವರಿಸಿದರು. ಮಕ್ಕಳಲ್ಲಿ ಆತ್ಮವಿಶ್ವಾಸ, ಸಕಾರಾತ್ಮಕ ಚಿಂತನೆ, ಉತ್ತಮ ಸಂವಹನ ಕೌಶಲ್ಯ ಮತ್ತು ಕಲಿಕೆಯ ಆಸಕ್ತಿಯನ್ನು ಬೆಳೆಸುವ ಕುರಿತು ಪರಿಣಾಮಕಾರಿ ಸಲಹೆಗಳನ್ನು ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಪ್ರಾಂಶುಪಾಲ ಮನಮೋಹನ್ ನಾಯಕ್ ಕೆ.ಜಿ ಅವರು ವಹಿಸಿ, ಮಕ್ಕಳ ಸಮಗ್ರ ಬೆಳವಣಿಗೆಗಾಗಿ ಶಾಲೆ ಹಾಗೂ ಪೋಷಕರ ನಡುವಿನ ಉತ್ತಮ ಸಹಕಾರದ ಅಗತ್ಯವನ್ನು ತಿಳಿಸಿದರು.

ಮಕ್ಕಳ ಸಮಗ್ರ ಅಭಿವೃದ್ಧಿಗೆ ಅಗತ್ಯವಾದ ಅನೇಕ ಉಪಯುಕ್ತ ಮಾಹಿತಿಗಳನ್ನು ಪೋಷಕರು ಪಡೆದುಕೊಂಡರು.

ಕಾರ್ಯಕ್ರಮವನ್ನು ಶಿಕ್ಷಕಿ ಶ್ರೀಮತಿ ವಿಜಯಲಕ್ಷ್ಮಿ ಕಟ್ಟಿ ಅವರು ನಿರೂಪಿಸಿದರು.

Related posts

ಹಿಮಾಲಯ ವುಡ್ ಬ್ಯಾಡ್ಜ್ ತರಬೇತಿಯಲ್ಲಿ ಅರ್ಹತೆ ಪಡೆದ ಮಡಂತ್ಯಾರು ಸೆಕ್ರೇಡ್ ಹಾರ್ಟ್ ಆಂ.ಮಾ. ಶಾಲೆಯ ಸ್ಕೌಟ್ ಮಾಸ್ಟರ್ ಚಿದಾನಂದ್

Suddi Udaya

ಸೆ.7: ಬರೆಂಗಾಯ ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಹಾಗೂ ಮೊಸರು ಕುಡಿಕೆ ಉತ್ಸವ

Suddi Udaya

ಮುಳಿಯ “ಸಿಲ್ವರ್ ಮ್ಯಾರಥಾನ್ 2026” ಚಾಲನೆ

Suddi Udaya

ಬೆಳ್ತಂಗಡಿ ಗ್ರಾಹಕರಿಗೆ ಸುವರ್ಣಾವಕಾಶ ; ಯಾವುದೇ ಬಟ್ಟೆ ಖರೀದಿಸಿದರೂ ರೂ.200 ಮಾತ್ರ

Suddi Udaya

ಎಂ.ಡಿ.ಎಸ್ ಪರೀಕ್ಷೆ: ರಾಜ್ಯಮಟ್ಟದಲ್ಲಿ ವೇಣೂರಿನ ಡಾ. ದೀಕ್ಷಾ ಅಶ್ವಿತ್‌ ಕುಲಾಲ್ ರವರಿಗೆ 5ನೇ ರ್‍ಯಾಂಕ್

Suddi Udaya

ಬೆಳ್ತಂಗಡಿ : ರಸ್ತೆ ಬದಿ ಕುಸಿದು ಬಿದ್ದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

Suddi Udaya
error: Content is protected !!