24.1 C
ಪುತ್ತೂರು, ಬೆಳ್ತಂಗಡಿ
September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್‌.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕರ ಜಾಗೃತಿ ಕಾರ್ಯಕ್ರಮ

ಉಜಿರೆ: ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆ ಉಜಿರೆಯ ಫೌಂಡೇಶನ್ ಸ್ಟೇಜ್ (ಪ್ರಿ ಕೆಜಿಯಿಂದ 2ನೇ ತರಗತಿ) ಮಕ್ಕಳ ಪೋಷಕರಿಗಾಗಿ ವಿಶೇಷ ಜಾಗೃತಿ ಕಾರ್ಯಕ್ರಮವನ್ನು ಜೂನ್ 4 ರಂದು ಎಸ್.ಡಿ.ಎಮ್ ಪದವಿ ಕಾಲೇಜಿನ ಇಂದ್ರಪ್ರಸ್ಥ ಸಭಾಂಗಣದಲ್ಲಿ ಆಯೋಜಿಸಲಾಯಿತು.

ಮುಖ್ಯ ಅತಿಥಿ ಹಾಗೂ ಸಂಪನ್ಮೂಲ ವ್ಯಕ್ತಿಯಾಗಿ ಮೂಡಬಿದಿರೆ ಆಳ್ವಾಸ್ ಕಾಲೇಜಿನ ಮನೋವಿಜ್ಞಾನ ವಿಭಾಗದ ಸಹಪ್ರಾಧ್ಯಾಪಕರು ಹಾಗೂ ಆಳ್ವಾಸ್ ಸೆಂಟರ್ ಫಾರ್ ವೆಲ್‌ನೆಸ್ ಆ್ಯಂಡ್ ಟ್ರೈನಿಂಗ್ ನ ನಿರ್ದೇಶಕರಾದ ಡಾ.ದೀಪಾ ಕೊಟಾರಿ ಇವರು ಪೋಷಕರಿಗೆ ಅಮೂಲ್ಯವಾದ ಮಾರ್ಗದರ್ಶನ ನೀಡಿದರು. ‘ಸೋಶಿಯಲ್, ಇಮೋಶನಲ್ ಆ್ಯಂಡ್ ಅಕಾಡೆಮಿಕ್ ಗ್ರೋತ್’ ಎಂಬ ವಿಷಯದ ಕುರಿತು ಉಪಯುಕ್ತ ಮಾಹಿತಿಯನ್ನು ಹಂಚಿಕೊಂಡರು. ಮಕ್ಕಳ ಸಾಮಾಜಿಕ, ಭಾವನಾತ್ಮಕ ಹಾಗೂ ಶೈಕ್ಷಣಿಕ ಬೆಳವಣಿಗೆಯಲ್ಲಿ ಪೋಷಕರ ಪಾತ್ರದ ಮಹತ್ವವನ್ನು ವಿವರಿಸಿದರು. ಮಕ್ಕಳಲ್ಲಿ ಆತ್ಮವಿಶ್ವಾಸ, ಸಕಾರಾತ್ಮಕ ಚಿಂತನೆ, ಉತ್ತಮ ಸಂವಹನ ಕೌಶಲ್ಯ ಮತ್ತು ಕಲಿಕೆಯ ಆಸಕ್ತಿಯನ್ನು ಬೆಳೆಸುವ ಕುರಿತು ಪರಿಣಾಮಕಾರಿ ಸಲಹೆಗಳನ್ನು ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಪ್ರಾಂಶುಪಾಲ ಮನಮೋಹನ್ ನಾಯಕ್ ಕೆ.ಜಿ ಅವರು ವಹಿಸಿ, ಮಕ್ಕಳ ಸಮಗ್ರ ಬೆಳವಣಿಗೆಗಾಗಿ ಶಾಲೆ ಹಾಗೂ ಪೋಷಕರ ನಡುವಿನ ಉತ್ತಮ ಸಹಕಾರದ ಅಗತ್ಯವನ್ನು ತಿಳಿಸಿದರು.

ಮಕ್ಕಳ ಸಮಗ್ರ ಅಭಿವೃದ್ಧಿಗೆ ಅಗತ್ಯವಾದ ಅನೇಕ ಉಪಯುಕ್ತ ಮಾಹಿತಿಗಳನ್ನು ಪೋಷಕರು ಪಡೆದುಕೊಂಡರು.

ಕಾರ್ಯಕ್ರಮವನ್ನು ಶಿಕ್ಷಕಿ ಶ್ರೀಮತಿ ವಿಜಯಲಕ್ಷ್ಮಿ ಕಟ್ಟಿ ಅವರು ನಿರೂಪಿಸಿದರು.

Related posts

ಬೆಳಾಲು ಶ್ರೀ ಮಹಮ್ಮಾಯಿ ಗುಳಿಗ ಕ್ಷೇತ್ರದ ಜೀರ್ಣೋದ್ಧಾರ ಸಮಿತಿ ರಚನೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನ: ಚಪ್ಪರ ಹಾಗೂ ಭಜನಾ ಕಾರ್ಯಕ್ರಮ ಉದ್ಘಾಟನೆ

Suddi Udaya

ಅಳದಂಗಡಿ: ನೊಚ್ಚ ಮನೆತನದ ಕುವರಿ ನಿಯತಿ ಅಮೇರಿಕಾದಲ್ಲಿ ಯಕ್ಷಗಾನ ನಾಟ್ಯ ಪ್ರದರ್ಶನ

Suddi Udaya

ಧರ್ಮಸ್ಥಳ : ಅಸಹಜ ಸಾವು ಪ್ರಕರಣ : ಮಾಸಾಂತ್ಯಕ್ಕೆ ಎಸ್‌ಐಟಿ ಯಿಂದ ವರದಿ ಸಲ್ಲಿಕೆ

Suddi Udaya

ಪಂಜಾಬ್ ನಲ್ಲಿ ಅಕಾಂಕ್ಷ ಆತ್ಮಹತ್ಯೆ ಪ್ರಕರಣ: ಧರ್ಮಸ್ಥಳದ ಬೋಳಿಯಾರು ಮನೆಗೆ ತಲುಪಿದ ಮೃತದೇಹ

Suddi Udaya

ಖಾಸಗಿ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ: ಇಬ್ಬರ ವಿರುದ್ಧ ಪ್ರಕರಣ ದಾಖಲು

Suddi Udaya
error: Content is protected !!