23.1 C
ಪುತ್ತೂರು, ಬೆಳ್ತಂಗಡಿ
June 6, 2026
ಕೃಷಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್.ಡಿ.ಎಂ. ಪ.ಪೂ.ಕಾಲೇಜು : ವಿಶ್ವ ಪರಿಸರ ದಿನಾಚರಣೆ

ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ವಿಶ್ವ ಪರಿಸರ ದಿನಾಚರಣೆಯನ್ನು ಗಿಡ ನೆಡುವುದರ ಮೂಲಕ ಆಚರಿಸಲಾಯಿತು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಪರಿಸರ ಪ್ರೇಮಿ, ಕಾರ್ಗಿಲ್ ವನದ ರೂವಾರಿ ಹಾಗೂ ಶೌರ್ಯ ವಿಪತ್ತು ತಂಡದ ಸದಸ್ಯರಾದ ಸಚಿನ್ ಭಿಡೆ ಮಾತನಾಡಿ ‘ ಪರಿಸರ ನಮ್ಮ ಜೀವನಾಡಿ. ಆದುದರಿಂದ ಪರಿಸರ ದಿನ ಗಿಡಗಳನ್ನು ನೆಡುವುದು ಮಾತ್ರವಲ್ಲದೆ ಅವುಗಳ ಪೋಷಣೆಯ ಜವಾಬ್ದಾರಿ ಕೂಡ ನಮ್ಮದಾಗಬೇಕು” ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಪ್ರಮೋದ್ ಕುಮಾರ್ ಬಿ ಮಾತನಾಡಿ “ನಾವೆಲ್ಲರೂ ಪರಿಸರ ಪ್ರೇಮಿ ಆಗಿರಬೇಕು. ಗಿಡಗಳನ್ನು ನೆಡುವುದು ಒಂದು ದಿನಕ್ಕೆ ಸೀಮಿತ ಆಗಿರದೆ ನಮ್ಮ ನಿರಂತರ ಕಾರ್ಯಕ್ರಮ ಆಗಬೇಕು “ಎಂದು ಹೇಳಿದರು.

ಪರಿಸರ ದಿನದ ಅಂಗವಾಗಿ ಕಾಲೇಜಿನ ಉಪನ್ಯಾಸಕರಿಗೆ ಹಾಗೂ ಸ್ವಯಂ ಸೇವಕರಿಗೆ ಗಿಡ ವಿತರಿಸಲಾಯಿತು. ಕಾಲೇಜು ರಸ್ತೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಸಲಾಯಿತು. ಕನ್ನಡ ಉಪನ್ಯಾಸಕರಾದ ಸುಭಾಸ್ ರಾವ್ ಬೋಳೂರು, ಎನ್ ಎಸ್ ಎಸ್ ಯೋಜನಾಧಿಕಾರಿ ವಿಶ್ವನಾಥ್ ಎಸ್, ಸಹ ಯೋಜನಾಧಿಕಾರಿ ಶೋಭಾ ಪಿ ಉಪಸ್ಥಿತರಿದ್ದರು. ಸ್ವಯಂ ಸೇವಕಿ ನವನೀತು ನಿರೂಪಿಸಿ ರಕ್ಷಿತ ಸ್ವಾಗತಿಸಿ ಪ್ರೀತಮ್ ವಂದಿಸಿದರು.

Related posts

ಬಜಿರೆ ಶಾಲೆ: ಕೇಂದ್ರದ ಪಿಎಂಶ್ರೀ ಯೋಜನೆಯ ಅನುಷ್ಠಾನಕ್ಕೆ ಚಾಲನೆ, ಎಲ್‌ಕೆಜಿ ತರಗತಿ ಉದ್ಘಾಟನೆ

Suddi Udaya

ಭೂಸೇನೆಯಲ್ಲಿ 22 ವರ್ಷ ಕರ್ತವ್ಯ ಸಲ್ಲಿಸಿದ್ದ ಸೋಮಂತಡ್ಕ ನಿವಾಸಿ ಫ್ರಾನ್ಸಿಸ್ ಜೆ. ನಿವೃತ್ತಿ‌

Suddi Udaya

ಸಾರ್ವಜನಿಕರ ದೂರಿನಂತೆ ಅನಧಿಕೃತ ವಸತಿಗ್ರಹ ವ್ಯವಹಾರ ಸ್ಥಗಿತಗೊಳಿಸಿದ ಧರ್ಮಸ್ಥಳ ಗ್ರಾಮ ಪಂಚಾಯತ್

Suddi Udaya

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಮಹಿಳಾ ಹವಾನಿಯಂತ್ರಿತ ಶಾಖೆಯ ಉದ್ಘಾಟನಾ ಸಮಾರಂಭ

Suddi Udaya

ಬಂದಾರು: ಆದಿಪೂಜಿತ ಸಿದ್ದಿವಿನಾಯಕ ಕನ್ನಡ ಭಕ್ತಿಗೀತೆ ಆಡಿಯೋ ಬಿಡುಗಡೆ

Suddi Udaya
error: Content is protected !!