24.2 C
ಪುತ್ತೂರು, ಬೆಳ್ತಂಗಡಿ
June 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಉಜಿರೆ : ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಉಜಿರೆ ಎಸ್.ಡಿ.ಎಮ್ ಸ್ನಾತಕೋತ್ತರ ಕಾಲೇಜಿನ ಬಯೋಟೆಕ್ನಾಲಜಿ ವಿಭಾಗದ ಮುಖ್ಯಸ್ಥೆ ಹಾಗೂ ಸಹ ಪ್ರಾಧ್ಯಾಪಕರಾದ ಡಾ.ಪ್ರಾರ್ಥನ.ಜೆ ಆಗಮಿಸಿ ವಿದ್ಯಾರ್ಥಿಗಳಿಗೆ ಪರಿಸರ ಸಂರಕ್ಷಣೆ ಹಾಗೂ ಪರಿಸರದ ಕುರಿತು ಮಾಹಿತಿ ನೀಡಿದರು. ಶಾಲಾ ಪರಿಸರದ ಕುರಿತು ವಿದ್ಯಾರ್ಥಿಗಳಿಂದ ಭಾಷಣ, ಗುಂಪು ಗಾಯನ, ರಸಪ್ರಶ್ನೆ ಹಾಗೂ ವಿದ್ಯಾರ್ಥಿಗಳಿಗೆ ತಮ್ಮ ತರಗತಿಗಳಲ್ಲಿ ಪರಿಸರ ಸಂಬಂಧಿತ ಚಿತ್ರಕಲೆ ಸ್ಪರ್ಧೆ, ಕಿರು ಪ್ರಹಸನ, ಗಿಡ ನೆಡುವ ಚಟುವಟಿಕೆಗಳು ನಡೆಯಿತು.

ದಿನದ ವಿಶೇಷವಾಗಿ ಉಜಿರೆಯ ಯಶೋವನಕ್ಕೆ ವಿದ್ಯಾರ್ಥಿಗಳಿಂದ ಭೇಟಿ ನೀಡಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶೈಕ್ಷಣಿಕ ಸಂಯೋಜಕ ಶಿಕ್ಷಕಿ ಸುಮಾ ಶ್ರೀನಾಥ್ ವಹಿಸಿದ್ದರು. ವಿದ್ಯಾರ್ಥಿಗಳಾದ ಧೃತಿ ಹಾಗೂ ಅಭಿರಾಮ್ ಕಾರ್ಯಕ್ರಮ ನಿರೂಪಿಸಿದರು.

Related posts

ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ 16ನೇ ವರ್ಷದ ಪಟ್ಟಾಭಿಷೇಕದ ವರ್ಧಂತ್ಯುತ್ಸವ

Suddi Udaya

ಕೊಕ್ಕಡ ಅಮೃತ ಗ್ರಾ. ಪಂ. ಹಾಗೂ ಅಮೃತ ಸರೋವರದಲ್ಲಿ ಸ್ವಾತಂತ್ರೋತ್ಸವ ಆಚರಣೆ: ನಿವೃತ್ತ ಸೈನಿಕರಿಗೆ ಗೌರವಾರ್ಪಣೆ

Suddi Udaya

ಬೆಳ್ತಂಗಡಿ ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಗುರುವಾಯನಕರೆ ವ್ಯಾಪ್ತಿಯ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟಗಳ ತಾಲೂಕು ಮಟ್ಟದ ಪದಾಧಿಕಾರಿಗಳ ಸಮಾವೇಶ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ರಕ್ಷಾಬಂಧನ ಆಚರಣೆ

Suddi Udaya

ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ: ವಾರೀಸುದಾರರ ಪತ್ತೆಗೆ ಮನವಿ

Suddi Udaya
error: Content is protected !!