September 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಉಜಿರೆ : ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಉಜಿರೆ ಎಸ್.ಡಿ.ಎಮ್ ಸ್ನಾತಕೋತ್ತರ ಕಾಲೇಜಿನ ಬಯೋಟೆಕ್ನಾಲಜಿ ವಿಭಾಗದ ಮುಖ್ಯಸ್ಥೆ ಹಾಗೂ ಸಹ ಪ್ರಾಧ್ಯಾಪಕರಾದ ಡಾ.ಪ್ರಾರ್ಥನ.ಜೆ ಆಗಮಿಸಿ ವಿದ್ಯಾರ್ಥಿಗಳಿಗೆ ಪರಿಸರ ಸಂರಕ್ಷಣೆ ಹಾಗೂ ಪರಿಸರದ ಕುರಿತು ಮಾಹಿತಿ ನೀಡಿದರು. ಶಾಲಾ ಪರಿಸರದ ಕುರಿತು ವಿದ್ಯಾರ್ಥಿಗಳಿಂದ ಭಾಷಣ, ಗುಂಪು ಗಾಯನ, ರಸಪ್ರಶ್ನೆ ಹಾಗೂ ವಿದ್ಯಾರ್ಥಿಗಳಿಗೆ ತಮ್ಮ ತರಗತಿಗಳಲ್ಲಿ ಪರಿಸರ ಸಂಬಂಧಿತ ಚಿತ್ರಕಲೆ ಸ್ಪರ್ಧೆ, ಕಿರು ಪ್ರಹಸನ, ಗಿಡ ನೆಡುವ ಚಟುವಟಿಕೆಗಳು ನಡೆಯಿತು.

ದಿನದ ವಿಶೇಷವಾಗಿ ಉಜಿರೆಯ ಯಶೋವನಕ್ಕೆ ವಿದ್ಯಾರ್ಥಿಗಳಿಂದ ಭೇಟಿ ನೀಡಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶೈಕ್ಷಣಿಕ ಸಂಯೋಜಕ ಶಿಕ್ಷಕಿ ಸುಮಾ ಶ್ರೀನಾಥ್ ವಹಿಸಿದ್ದರು. ವಿದ್ಯಾರ್ಥಿಗಳಾದ ಧೃತಿ ಹಾಗೂ ಅಭಿರಾಮ್ ಕಾರ್ಯಕ್ರಮ ನಿರೂಪಿಸಿದರು.

Related posts

ಕಳೆಂಜ: ಕೃಷಿಕ ಪೆರ್ನು ಗೌಡ ನಿಧನ

Suddi Udaya

ಉಜಿರೆಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿಶೇಷ ಗ್ರಾಮ ಸಭೆ

Suddi Udaya

ಕಲಾವಿದರಿಗೆ ಕರೆ ಮಾಡಿ ಅವ್ಯಾಚ ಶಬ್ದಗಳಿಂದ ನಿಂದನೆ: ತಿಮರೋಡಿ ವಿರುದ್ಧ ಪ್ರಕರಣ ದಾಖಲು

Suddi Udaya

ಕಲ್ಮಂಜ : ವೇದಮೂರ್ತಿ ಕೇಶವ ಭಟ್ ಚಿಪ್ಳೂಣ್ಕರ್ ನಿಧನ

Suddi Udaya

ಬೆಳ್ತಂಗಡಿ : ಕಾಲುಗಳನ್ನು ಕತ್ತರಿಸಿದ ರೀತಿಯಲ್ಲಿ ಚಿರತೆ ಮೃತದೇಹ ಪತ್ತೆ: ಸ್ಥಳಕ್ಕೆ ಹಿರಿಯ ಅಧಿಕಾರಿಗಳ ದೌಡು ಪರಿಶೀಲನೆ

Suddi Udaya

ಧರ್ಮಸ್ಥಳ ಭಜನಾ ಪರಿಷತ್ ಪದಾಧಿಕಾರಿಗಳ ವಾರ್ಷಿಕ ಸಭೆ

Suddi Udaya
error: Content is protected !!